ಪ್ರಧಾನಿ ನರೇಂದ್ರ ಮೋದಿಗೆ ಪಂಜಾಬ್ ಸರ್ಕಾರ ಅವಮಾನ ಮಾಡಿದ ಘಟನೆ ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ…

ಶಿವಮೊಗ್ಗ: ಪ್ರಧಾನಿ ಮೋದಿ ಅವರಿಗೆ ಅವಮಾನ ಮಾಡಿರುವ ಮತ್ತು ಅವರ ಪ್ರಯಾಣಕ್ಕೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸಿರುವ ಪಂಜಾಬ್ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಜಿಲ್ಲಾ ಸಮಿತಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಪ್ರಧಾನಿ ಮೋದಿ ನಿನ್ನೆ ಪಂಜಾಬ್ ನಲ್ಲಿರುವ ಭಟಿಂಡಾದಿಂದ ಫಿರೋಜ್ ಪುರದ ಹುಸೇನ್ ವಾಲಾದಲ್ಲಿರುವ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಬೇಕಿತ್ತು. ಅಲ್ಲಿ ಅವರು ಭಗತ್ ಸಿಂಗ್ ಇತರ ಸ್ವಾತಂತ್ರ್ಯವೀರ ಹುತಾತ್ಮರಿಗೆ ಗೌರವ ಸಲ್ಲಿಸುವ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ಮಾಡುವ ಕಾರ್ಯಕ್ರಮವಿತ್ತು…

Read More

ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕೋವಿಡ್ ಲಸಿಕಾ ಅಭಿಯಾನ: ಗೊಂದಲ ಮತ್ತು ಭಯ ಪಡದೆ ನಿರಂತಕವಾಗಿ ಲಸಿಕೆ ಪಡೆಯಬೇಕು : ಮಂಜುಳಾ

ರಿಪ್ಪನ್ ಪೇಟೆ : ಮಕ್ಕಳಿಗೆ ಕೋರೋಣ ಲಸಿಕೆ ನೀಡುವ ಅಭಿಯಾನ ಇಡೀ ದೇಶಾದ್ಯಂತ ಆರಂಭವಾಗಿದ್ದು. ಈ ಹಿನ್ನೆಲೆಯಲ್ಲಿ 15 ರಿಂದ 18 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಲಸಿಕೆಯನ್ನು ನೀಡಲಾಯಿತು.  ಕುಟುಂಬ ಕಲ್ಯಾಣ ಇಲಾಖೆ. ಜಿಲ್ಲಾ ಪಂಚಾಯತ್. ಗ್ರಾಮ ಪಂಚಾಯತ್ ತಾಲೂಕು ಆರೋಗ್ಯ ಅಧಿಕಾರಿ ಕಚೇರಿ. ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹ ಯೋಗದಲ್ಲಿ ಆಯೋಜಿಸಲಾಗಿದ್ದ ಕೊ ರೊ ನಾ ಲಸಿಕಾ ಅಭಿಯಾನವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ  ಉದ್ಘಾಟಿಸಿದರು.  ಕೋವಿಡ್ ಮತ್ತು ಇದರ ರೂಪಾಂತರಿ ಸೋಂಕನ್ನು ನಿಯಂತ್ರಿಸಲು ಸರಕಾರ…

Read More

ಹೊಸನಗರದಲ್ಲಿ ನೂತನವಾಗಿ ಶುಭಾರಂಭಗೊಂಡ ಡಾ.ಸಾಯಿಲ್ ಜೈವಿಕ ಗೊಬ್ಬರದ ಶಾಖೆ :

ಹೊಸನಗರ : ಅಡಕೆ ಬೆಳೆಗಾರರ ಮನೆ ಮಾತಗಿರುವ ಡಾ ಸಾಯಿಲ್ ಜೈವಿಕ ಗೊಬ್ಬರದ ಶಾಖೆ ಈಗ  ಹೊಸನಗರದಲ್ಲೂ ಪ್ರಾರಂಭವಾಗಿದೆ.  ಕರ್ನಾಟಕ ಸರ್ಕಾರದ ಕೃಷಿ ಇಲಾಖೆಯಿಂದ ಮಾನ್ಯತೆ ಪಡೆದಿರುವ ಮತ್ತು ಹೊಸನಗರದ ಕೃಷಿ ಇಲಾಖೆ ವತಿಯಿಂದ ದೃಡೀಕರಿಸಿ ಪರವಾನಿಗೆ ನೀಡಲಾಗಿರುವ ವೀರಭದ್ರೇಶ್ವರ ‌ಟ್ರೇಡರ್ಸ್ ಶುಭಾರಂಭಗೊಂಡಿದೆ. ಮಳಿಗೆಯನ್ನು ಉದ್ಘಾಟಿಸಿ ಮಾತನಾಡಿದ‌ ಗುರುಶಕ್ತಿ ಟ್ರಾನ್ಸ್ ಪೋರ್ಟ್ ಮಾಲೀಕರಾದ ವಿದ್ಯಾದರ್  ಜೈವಿಕ ಗೊಬ್ಬರಗಳು ಅಡಕೆ, ಕಬ್ಬು, ತೆಂಗು ಮತ್ತು ಎಲ್ಲಾ ರೀತಿಯ ಬೆಳೆಗಳಿಗೆ ಲಭ್ಯ. ಜೈವಿಕ ಗೊಬ್ಬರಗಳ ಬಳಕೆ ಇಂದ ಭೂಮಿಯಲ್ಲಿ ತ್ವರಿತವಾಗಿ…

Read More

ಲಾಕ್ ಡೌನ್ ಗೆ ವಿರೋಧ ವ್ಯಕ್ತಪಡಿಸಿದ ಸಚಿವ ಕೆ ಎಸ್ ಈಶ್ವರಪ್ಪ

ಶಿವಮೊಗ್ಗ : ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಿರುವ ಬೆಂಗಳೂರಿನ ಕಠಿಣ ನಿಯಮಗಳು ಕೋವಿಡ್‌ ಕಡಿಮೆ ಇರುವ ಇತರೆ ಜಿಲ್ಲೆಗಳಿಗೆ ಬೇಡ ಎಂದು ಸಿಎಂಗೆ ಮನವಿ ಮಾಡುತ್ತೇನೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕೊರೊನಾ ಪಾಸಿಟಿವಿ ಸಂಖ್ಯೆ ಹೆಚ್ಚಿದೆ. ಆದರೆ, ಇತರೆ ಜಿಲ್ಲೆಯಲ್ಲಿ ಪಾಸಿಟಿವ್ ಸಂಖ್ಯೆ ಎರಡು, ಐದು ಹೆಚ್ಚಿದ್ರೆ ಹತ್ತು ಇರಬಹುದು. ಬೆಂಗಳೂರಿನಲ್ಲಿ ಕೊರೊನಾ ಕಂಟ್ರೋಲ್ ಮಾಡುವುದು ಎಲ್ಲರ ಜವಾಬ್ದಾರಿ ಇದೆ. ಬೆಂಗಳೂರಿನಲ್ಲಿ ಕೊರೊನಾ ಜಾಸ್ತಿ…

Read More

ರಾಜ್ಯಾದ್ಯಂತ ವೀಕೆಂಡ್ ಕರ್ಫ಼್ಯೂ ಜಾರಿ : ಮುಖ್ಯಮಂತ್ರಿಗಳ ಸಭೆಯಲ್ಲಿ ತೀರ್ಮಾನ

ಕೋವಿಡ್ -19 ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಹಲವು ಕಟ್ಟುನಿಟ್ಟಿನ ನಿರ್ಬಂಧಗಳನ್ನು ಹೇರಿದೆ.ಇದೇ ಶುಕ್ರವಾರ ರಾತ್ರಿಯಿಂದಲೇ ವೀಕೆಂಡ್ ಕಫ್ಯೂ೯ ಜಾರಿಗೊಳಿಸಲಾಗಿದೆ. ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಮುಂಜಾನೆ 5 ಗಂಟೆಯವರೆಗೆ ರಾಜ್ಯದಲ್ಲಿ ಕಫ್ಯೂ೯ ಜಾರಿ ಇರಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸಂಜೆ ನಡೆದ ಸಚಿವರು ಮತ್ತು ಅಧಿಕಾರಿಗಳ ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸುಗಳ ಬಗ್ಗೆ ವಿಸ್ತೃತವಾಗಿ…

Read More

ರಿಪ್ಪನ್ ಪೇಟೆಯಲ್ಲಿ ನೂತನವಾಗಿ ಪ್ರಾರಂಭವಾದ ನಂದಿ ಡೆಂಟಲ್ ಕ್ಲಿನಿಕ್ ಮತ್ತು ಇಂಪ್ಲಾಂಟ್ ಸೆಂಟರ್ :

ರಿಪ್ಪನ್ ಪೇಟೆ : ಪಟ್ಟಣದ ವಿನಾಯಕ ವೃತ್ತದ ಜೋಹರ ಪ್ಲಾಜಾದಲ್ಲಿ ನೂತನವಾಗಿ ಶ್ರೀ ನಂದಿ ಡೆಂಟಲ್ ಕ್ಲಿನಿಕ್ ಮತ್ತು ಇಂಪ್ಲಾಂಟ್ ಸೆಂಟರ್ ಆರಂಭವಾಗಿದೆ. ರಿಪ್ಪನ್ ಪೇಟೆಯ ಸುತ್ತಮುತ್ತಲಿನ ಜನತೆಗೆ ಅಗತ್ಯವಾಗಿ ಬೇಕಾಗಿದ್ದ ಸುಸಜ್ಜಿತ ಆಧುನಿಕ ಡೆಂಟಲ್ ಕ್ಲಿನಿಕ್ ಪ್ರಾರಂಭವಾಗಿದ್ದು ಜನತೆಯಲ್ಲಿ ಸಂತಸ ತಂದಿದೆ. ಟೇಪ್ ಕತ್ತರಿಸುವ ಮೂಲಕ ಕ್ಲಿನಿಕ್ ನ್ನು ಉಧ್ಘಾಟಿಸಿದ ಜೋಹರ ಪ್ಲಾಜಾ ಮಾಲೀಕರು ಹಾಗೂ ಉದ್ಯಮಿಗಳಾದ ಎ ಕೆ ಮಹಮ್ಮದ್ ಸಾಬ್ ಮಾತನಾಡಿ ಹಲ್ಲುಗಳ ಆರೋಗ್ಯ ಕಾಪಾಡಿಕೊಂಡಾಗ ವ್ಯಕ್ತಿಗಳ ಸೌಂದರ್ಯವೂ ವೃದ್ಧಿಸುತ್ತದೆ. ನಮ್ಮಲ್ಲಿ ಪಾಶ್ಚಿಮಾತ್ಯ…

Read More

ಅರಣ್ಯ ಇಲಾಖೆಯ ಭರ್ಜರಿ ಕಾರ್ಯಾಚರಣೆ : ಇಬ್ಬರು ಶ್ರೀಗಂಧ ಕಳ್ಳರ ಬಂಧನ

ಸಾಗರ : ಇಲ್ಲಿನ ಅರಣ್ಯ ವಲಯ ವ್ಯಾಪ್ತಿಯ ಮಂಕೋಡು ಗ್ರಾಮ ಜೆ.ಪಿ ನಗರದಲ್ಲಿ ಅಕ್ರಮವಾಗಿ ಶ್ರೀಗಂಧದ ಚಕ್ಕೆಗಳನ್ನು ಕೆತ್ತುತ್ತಿದ್ದ ಇಬ್ಬರು ಆರೋಪಿಗಳನ್ನು ಸಾಗರ ಅರಣ್ಯ ಇಲಾಖೆ ಸಿಬ್ಬಂದಿಗಳು ಸೋಮವಾರ ಬಂಧಿಸಿದ್ದಾರೆ.   ಆರೋಪಿಗಳಾದ ಅಬ್ದುಲ್ ರಜಾಕ್ ಮತ್ತು ವೆಂಕಟರಮಣ ಇವರನ್ನು ಬಂಧಿಸಿ ಅವರಿಂದ  ಐದೂ ಕಾಲು ಕೆಜಿ ಶ್ರೀಗಂಧದ ಚಕ್ಕೆ, ಒಂದು ಹೀರೋ ಸ್ಪ್ಲೆಂಡರ್ ಬೈಕ್ ಅನ್ನು ವಶಪಡಿಸಿಕೊಂಡು ಅರಣ್ಯ ಮೊಕದ್ದಮೆ ದಾಖಲು ಮಾಡಿದ್ದಾರೆ. ವಲಯ ಅರಣ್ಯಾಧಿಕಾರಿ ಡಿ ಆರ್ ಪ್ರಮೋದ್ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಉಪ…

Read More

ಡಿ.ಕೆ. ಸುರೇಶ್ ವಿರುದ್ಧ ಸಾಗರ ಬಿಜೆಪಿ ಕಾರ್ಯಕರ್ತರ ಆಕ್ರೋಶದ ಪ್ರತಿಭಟನೆ…! ಡಿ.ಕೆ. ಸುರೇಶ್ ಪ್ರತಿಕೃತಿ ದಹನ…!

ಸಾಗರ: ರಾಮನಗರದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಸಂಸದ ಡಿ.ಕೆ.ಸುರೇಶ್, ಕಾಂಗ್ರೆಸ್ ಎಂಎಲ್ಸಿ ರವಿ ಅವರು ಸಚಿವ ಅಶ್ವಥ್ ನಾರಾಯಣ್ ಅವರ ಭಾಷಣಕ್ಕೆ ಅಡ್ಡಿ ಪಡಿಸಿ, ಗೂಂಡಾ ವರ್ತನೆ ತೋರಿದ್ದಾರೆಂದು ಆರೋಪಿಸಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಮಂಗಳವಾರ ನಗರ ಸಾಗರ್ ಹೋಟೆಲ್ ವೃತ್ತದ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ  ಡಿ.ಕೆ.ಸುರೇಶ್ ಅವರ ಭಾವಚಿತ್ರವನ್ನು ಧಹಿಸಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಡಿ.ಕೆ.ಸುರೇಶ್ ಹಾಗೂ ಎಂಎಲ್ಸಿ ರವಿ ಇಬ್ಬರಿಗೂ ಕಾಂಗ್ರೆಸ್ ಪಕ್ಷ ಶಿಸ್ತು ಕ್ರಮ ಜರುಗಿಸಬೇಕು.ಹಾಗೂ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಎಂದು…

Read More

ಶಿವಮೊಗ್ಗದ ನಗರ ಮತ್ತು ಗ್ರಾಮಾಂತರ ಯೋಜನೆ ಕಚೇರಿಯಲ್ಲಿ ಭೂಪರಿವರ್ತನೆಗೆ ಉದ್ದೇಶ ಪೂರಕ ವಿಳಂಭ : ರಿಪ್ಪನ್ ಪೇಟೆ ಗ್ರಾಪಂ ಸದಸ್ಯನಿಂದ ಏಕಾಂಗಿ ಧರಣಿ

ರಿಪ್ಪನ್ ಪೇಟೆ : ಭೂ ಪರಿಪರ್ವತನೆಗಾಗಿ ಒತ್ತಾಯಿಸಿ ಇಂದು ರಿಪ್ಪನ್ ಪೇಟೆ ಗ್ರಾಮ ಪಂಚಾಯತಿ ಸದಸ್ಯ ನಿರೂಪ್ ಕುಮಾರ್ ಆರ್.ವಿ. ಶಿವಮೊಗ್ಗದ ಕೆಎಸ್ ಆರ್ ಟಿ ಸಿ ಬಸ್ ಡಿಪೋ ಹಿಂಭಾಗದ ಆನಂದರಾವ್ ಬಡಾವಣೆಯಲ್ಲಿರುವ ನಗರ ಮತ್ತು ಗ್ರಾಮಾಂತರ ಯೋಜನೆ ಕಚೇರಿಯಲ್ಲಿ ಏಕಾಂಗಿ ಹೋರಾಟ ನಡೆಸಿದ್ದಾರೆ. ಹೊಸನಗರ ತಾ. ಬೆನವಳ್ಳಿ ಸರ್ವೆ ನಂಬರ್158 2 ಎಕರೆ ಜಮೀನಿಗೆ ಸೈಟ್ ನಿರ್ಮಿಸಲು ಭೂಪರಿವರ್ತನೆಗೆ ನಿರೂಪ್ ಕುಮಾರ್ ಅಕ್ಟೋಬರ್ ತಿಂಗಳಲ್ಲಿ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಭೂ ಪರಿವರ್ತನೆಯನ್ನು…

Read More

ರಿಪ್ಪನ್ ಪೇಟೆ ಹೊಸನಗರ ರಸ್ತೆ ನಿವಾಸಿ ಶಫ಼ಿ ಅಹಮದ್ ಬ್ಯಾರಿ ನಿಧನ :

ರಿಪ್ಪನ್ ಪೇಟೆ : ಪಟ್ಟಣದ ಹೊಸನಗರ ರಸ್ತೆಯ ನಿವಾಸಿ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಪ್ರಥಮ ದರ್ಜೆ ಗುತ್ತಿಗೆದಾರರಾಗಿದ್ದ ದಿವಂಗತ ಅಹಮ್ಮದ್ ಬ್ಯಾರಿಯವರ ತೃತೀಯ ಪುತ್ರ ಶಫಿ ಅಹಮದ್ ಬ್ಯಾರಿ (48) ಇಂದು ಮಧ್ಯಾಹ್ನ ಚೆನ್ನೈ ನಗರದಲ್ಲಿ ನಿಧನ ಹೊಂದಿದ್ದಾರೆ. ಅಲ್ಪಕಾಲದ ಖಾಯಿಲೆಯಿಂದ ಬಳಲುತಿದ್ದ ಶಫ಼ಿ ಅಹಮದ್ ಬ್ಯಾರಿ ರವರು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ನಂತರ ಇತ್ತಿಚೆಗೆ ಹೆಚ್ಚಿನ ಚಿಕಿತ್ಸೆಗೆ ಚೆನೈ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೇ ಇಂದು ಮಧ್ಯಾಹ್ನ ಕೊನೆಯುಸಿರೆಳೆದರು….

Read More