Headlines

80 ಚೀಲ ಸೊಸೈಟಿ ಅಕ್ಕಿ ವಶ : ಒಬ್ಬನ ಬಂಧನ

ಬುದ್ಧನಗರದಲ್ಲಿ ವಾಹನ ತಪಾಸಣೆ ಮಾಡುವಾಗ ಅಕ್ರಮ ಅಕ್ಕಿ ಸಾಗಾಣಿಕೆ ಪತ್ತೆಯಾಗಿದೆ. ಬಿಪಿಎಲ್ ಕಾರ್ಡ ಹೊಂದಿದವರಿಗೆ ಉಚಿತವಾಗಿ ನೀಡುವ ಅಕ್ಕಿಗಳನ್ನ ಚೀಲದಲ್ಲಿ ತುಂಬಿಸಿ ಅಶೋಕ್ ಲೈಲ್ಯಾಂಡ್ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದಾಗ ಅಕ್ರಮ ಅಕ್ಕಿ ಪತ್ತೆಯಾಗಿದೆ. ಬುದ್ದನಗರದಲ್ಲಿ ಗ್ಯಾಸ್ ಪಂಪ್ ನಲ್ಲಿ ದೊಡ್ಡಪೇಟೆ ಪೊಲೀಸರು ಮತ್ತು ಆಹಾರ ನಿರೀಕ್ಷಕರು ಬ್ಯಾರಿಕೇಡ್ ನಿರ್ಮಿಸಿ ತಪಾಸಣೆ ಮಾಡುವಾಗ ಕೆಎ 15 ಎ ೪೨೬೬ ಕ್ರಮ ಸಂಖ್ಯೆಯ ವಾಹನದಲ್ಲಿ ಅಕ್ರಮ ಅಕ್ಕಿ ಪತ್ತೆಯಾಗಿದೆ.  ೫೦ ಕೆಜಿಯ ಒಟ್ಟು ೮೦ ಚೀಲಗಗಳು ಪತ್ತೆಯಾಗಿದೆ. ಈ ಅಕ್ಕಿಯನ್ನ…

Read More

ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಕಂಡು ಬಂದರೂ ಆತಂಕಪಡದೇ ಶಾಲಾ ಕಾಲೇಜುಗಳನ್ನು ಮುಂದುವರೆಸುವುದು ಉತ್ತಮ: ಜಿಲ್ಲಾಧಿಕಾರಿಗಳ ಸಭೆಯಲ್ಲಿ ತಜ್ಞರ ಸಲಹೆ

ಶಿವಮೊಗ್ಗ : ಕೋವಿಡ್ ಮೂರನೇ ಅಲೆಯಲ್ಲಿ ಹಲವೆಡೆ ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಕಂಡು ಬಂದಿದ್ದರೂ, ಆತಂಕಪಡದೇ ಶಾಲಾ ಕಾಲೇಜುಗಳನ್ನು ಎಂದಿನಂತೆ ಮುಂದುವರೆಸುವುದು ಉತ್ತಮ ಎಂದು ಗುರುವಾರ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕೋವಿಡ್ ತಜ್ಞರ ಸಭೆಯಲ್ಲಿ ತಜ್ಞ ವೈದ್ಯರು ಅಭಿಪ್ರಾಯ ವ್ಯಕ್ತಪಡಿಸಿದರು. ಮಕ್ಕಳಿಗೆ ಕೋವಿಡ್ ಪಾಸಿಟಿವ್ ಬಂದರೆ ಗಾಬರಿಗೊಳ್ಳುವ ಅಗತ್ಯವಿಲ್ಲ. ಮೂರನೇ ಅಲೆಯಲ್ಲಿ ಕೋವಿಡ್ ಮಕ್ಕಳ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರಿಲ್ಲ. ಕೋವಿಡ್ ಪಾಸಿಟಿವ್ ಮಕ್ಕಳನ್ನು ಮನೆಯಲ್ಲಿಯೇ ಐಸೋಲೇಷನ್ ಮಾಡಿಸಿ ಶಾಲಾ ಕಾಲೇಜುಗಳನ್ನು…

Read More

ಇರುವಕ್ಕಿಯ ಇಂದಿರಾ ಗಾಂಧಿ ವಸತಿ ಶಾಲೆಯ 40 ಮಕ್ಕಳಿಗೆ ಕೋವಿಡ್ ಪಾಸಿಟಿವ್ ದೃಢ !! ಕಂಟೈನ್ ಮೆಂಟ್ ಝೋನ್ ಘೋಷಣೆ !!

ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಇರುವಕ್ಕಿಯ ಇಂದಿರಾ ಗಾಂಧಿ ವಸತಿ ಶಾಲೆಯ ನಲವತ್ತು ಮಕ್ಕಳಿಗೆ ಇದೀಗ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಮೊನ್ನೆ ಹಲವು ವಿದ್ಯಾರ್ಥಿಗಳಿಗೆ ರೋಗದ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ 80 ಮಕ್ಕಳ ಕೋವಿಡ್ ಪರೀಕ್ಷೆಯನ್ನು ನಡೆಸಲಾಗಿತ್ತು. ಇವತ್ತು ಬಂದ ವರದಿಯಲ್ಲಿ 40 ಮಕ್ಕಳಿಗೆ ಇದೀಗ ಕೋರನ ಪಾಸಿಟಿವ್ ದೃಢಪಟ್ಟಿದೆ. ಸ್ಥಳಕ್ಕೆ ಸಾಗರ ತಾಲ್ಲೂಕು ವೈದ್ಯಾಧಿಕಾರಿ ಮೋಹನ್ ರವರು ಭೇಟಿ ನೀಡಿ ಈ ವಿದ್ಯಾರ್ಥಿಗಳಿಗೆ ಬೇರೆ ರೂಮಿನ ವ್ಯವಸ್ಥೆ ಮಾಡಿದ್ದು ಹಾಗೂ ಪ್ರತಿನಿತ್ಯ ಇವರನ್ನು ನೋಡಿಕೊಳ್ಳಲು…

Read More

ರಿಪ್ಪನ್ ಪೇಟೆ ಸಮೀಪದ ಹೊಂಡಲಗದ್ದೆಯಲ್ಲಿ ಅರಣ್ಯ ಇಲಾಖೆಯ ಭರ್ಜರಿ ಭೇಟೆ : 60 ಕೆ.ಜಿ ಶ್ರೀಗಂಧ ವಶ !!!

ಹೊಸನಗರ: ಉಪ ಅರಣ್ಯ ಸಂರಕ್ಷಣಾದಿಕಾರಿ ರವೀಂದ್ರ ಕುಮಾರ್‌ರವರ ಮಾರ್ಗದರ್ಶನದಲ್ಲಿ ಹೊಸನಗರ ತಾಲ್ಲೂಕಿನ ಹುಂಚ ಹೋಬಳಿ ಹೊಂಡಲಗದ್ದೆ ತಿಮ್ಮಪ್ಪ ಬಿನ್ ಹೂವಪ್ಪರವರ ಮನೆಯಲ್ಲಿ ಅಕ್ರಮ ದಾಸ್ತಾನು ಮಾಡಿದ್ದ ಸುಮಾರು 60 ಕೆ.ಜಿ ಶ್ರೀಗಂಧವನ್ನು ಅರಣ್ಯ ಸಂಚಾರಿದಳ ಶಿವಮೊಗ್ಗ, ಹೊಸನಗರ ವಲಯ ಅರಣ್ಯಾಧಿಕಾರಿಗಳು ಮತ್ತು ಅರಣ್ಯ ಸಿಬ್ಬಂದಿಗಳು ಇಂದು ಜಂಟಿ ಕಾರ್ಯಾಚರಣೆ ನಡೆಸಿ ಮನೆ ಜಪ್ತಿ ನಡೆಸಿ ಶ್ರೀಗಂಧದ ತುಂಡುಗಳನ್ನು ವಶಪಡಿಸಿಕೊಂಡು ಪ್ರಕರಣವನ್ನು ದಾಖಲು ಮಾಡಿಕೊಂಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಸಂಜಯ್, ಮಧುಕರ್ ಉಪವಲಯ ಅರಣ್ಯಾಧಿಕಾರಿಗಳಾದ ಅಶೋಕ್, ಯುವರಾಜ್,…

Read More

ಸಾಗರದ ಮಹಿಳೆಯ ಹೊಟ್ಟೆಯಲ್ಲಿತ್ತು ಬರೋಬ್ಬರಿ ಎಂಟು ಕೆ.ಜಿ ತೂಕದ ಗಡ್ಡೆ…!!!! ಯಶಸ್ವಿಯಾದ ಸಾಗರ ವೈದ್ಯರ ಶಸ್ತ್ರಚಿಕಿತ್ಸೆ

ಸಾಗರದ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ವೈದ್ಯರು ಬುಧವಾರ 2 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿದ ನಂತರ 50 ವರ್ಷದ ಮಹಿಳೆ ಹೊಟ್ಟೆಯಲ್ಲಿದ್ದ 8 ಕೆಜಿ ತೂಕದ ಗಡ್ಡೆಯನ್ನು ಹೊರತೆಗೆದಿದ್ದಾರೆ. ಇದೊಂದು ಅಂಡಾಶಯದ ಗಡ್ಡೆಯಾಗಿದ್ದು, ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ಆಸ್ಪತ್ರೆಯ ಹಿರಿಯ ಸ್ತ್ರೀರೋಗ ತಜ್ಞ ಡಾ.ನಾಗೇಂದ್ರಪ್ಪ ತಿಳಿಸಿದ್ದಾರೆ.  ಮಹಿಳೆಯ ಸ್ಥಿತಿ ಸ್ಥಿರವಾಗಿದ್ದು,ಶಸ್ತ್ರಚಿಕಿತ್ಸೆಗೆ ಅರವಳಿಕೆ ತಜ್ಞೆ ಸುಷ್ಮಾ ಪತ್ತಾರ್,ನರ್ಸ್ ಸುವರ್ಣ,ರೋಹಿನಿ ಹಾಗೂ ಚಂದ್ರು  ಸಹಕರಿಸಿದ್ದಾರೆ ಎಂದು ಇದೇ ವೇಳೆ ತಿಳಿಸಿದರು. ಮಹಿಳೆಯ ಪ್ರಾಣ ಉಳಿಸಿದ ಡಾ.ನಾಗೇಂದ್ರಪ್ಪ…

Read More

ಪ್ರಪಂಚದ ಸಕಲ ಜೀವಿಗಳ ಮೇಲೆ ಸೃಷ್ಟಿಕರ್ತನು ದಯೆ ತೋರಲಿ : ಅಸ್ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಮದನಿ ಅಲ್-ಬುಖಾರಿ (ಕೂರತ್ ತಂಙಳ್).

ರಿಪ್ಪನ್ ಪೇಟೆ : ಪ್ರಪಂಚದ ಸಕಲ ಜೀವಿಗಳ ಮೇಲೆ ಸೃಷ್ಟಿಕರ್ತನ ದಯೆ ಇರಲಿ, ಪ್ರಪಂಚಕ್ಕೆ ಅಂಟಿಕೊಂಡಿರುವ ಕೊರೊನಾ ಮಹಾಮಾರಿ ಮುಕ್ತವಾಗಲಿ ಎಂದು ಮುಸ್ಲಿಂ ಧರ್ಮಗುರು ಬಹು|| ಅಸ್ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಮದನಿ ಅಲ್-ಬುಖಾರಿ (ಕೂರತ್ ತಂಙಳ್) ಹೇಳಿದರು. ಇಲ್ಲಿನ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ವತಿಯಿಂದ ಆಯೋಜಿಸಿದ್ದ ನೂತನ ಉಳೂಖಾನ ಶಿಲಾನ್ಯಾಸ,ಮಹಿಳಾ ಷರಿಯತ್ ಕಾಲೇಜು ಮತ್ತು ಪ್ರತ್ಯೇಕ ಮಹಿಳಾ ನಮಾಜ್ ಕೊಠಡಿ ಉದ್ಘಾಟನೆಯನ್ನು ನೆರವೇರಿಸಿದ ಅವರು 2019 ರಿಂದ ಇಡೀ ಜಗತ್ತನ್ನೆ ತಲ್ಲಣಗೊಳಿಸಿದಂತಹ ಕೊರೊನಾ ಮಹಾಸೋಂಕು ಲಕ್ಷಾಂತರ…

Read More

ಹೊಸನಗರದಲ್ಲಿ 15 -16ನೇ ಶತಮಾನದ ಪ್ರಾಚ್ಯಾವಶೇಷಗಳು ಪತ್ತೆ :

ಹೊಸನಗರ: ಇತ್ತೀಚಿಗೆ ಇತಿಹಾಸ ಸಂಶೋಧಕರಾದ ನವೀನ್ ಜಿ ಆಚಾರ್ಯ ವರಕೋಡು ಅವರು ಗಂಗನಕೊಪ್ಪ ಗ್ರಾಮದಲ್ಲಿ ಕ್ಷೇತ್ರ ಕಾರ್ಯ ನಡೆಸಿದಾಗ ಪ್ರಾಇತಿಹಾಸ ಹಾಗೂ 15-16ನೇ ಶತಮಾನಕ್ಕೆ ಸೇರಿದ ಪ್ರಾಚ್ಯಾವಶೇಷಗಳು ಪತ್ತೆಯಾಗಿದೆ.  ಗಂಗನಕೊಪ್ಪ ಗ್ರಾಮದ ಹೊರವಲಯದಲ್ಲಿ ಹರಿಯುವ ಕಲ್ಲುಹಳ್ಳ ಹೊಳೆಯ ಬಲದಂಡೆಯ ಮೇಲೆ ಸುಪ್ರಕಾಶ ಎಂಬುವವರು ತಮ್ಮ ತೋಟದಲ್ಲಿ ಸಸಿಗಳನ್ನು ನೆಡಿಸಲು ಗುಣಿಗಳನ್ನು ತೆಗೆಯುವ ಸಂಧರ್ಭದಲ್ಲಿ ಪ್ರಾಗೈತಿಹಾಸ ಹಾಗೂ 15-16ನೇ ಶತಮಾನಕ್ಕೆ ಸಂಬಂಧಿಸಿದ ಅನೇಕ ಅವಶೇಷಗಳು ಲಭ್ಯವಾಗಿದೆ.  ಅವುಗಳಲ್ಲಿ ಮುಖ್ಯವಾದವುಗಳೆಂದರೆ ಇತಿಹಾಸ ಕಾಲದ ನವಶಿಲಾಯುಗಕ್ಕೆ ಸಂಬಂಧಿಸಿದ ರಿಂಗ್‌ಸ್ಟೋನ್, ಪ್ರಾಗೈತಿಹಾಸ ಕಾಲಕ್ಕೆ…

Read More

ಶಿವಮೊಗ್ಗ ಸಮೀಪದ ಸಕ್ರೆಬೈಲಿನಲ್ಲಿ ಧಗಧಗನೆ ಹೊತ್ತಿ ಉರಿದ ಕಾರು :

ಶಿವಮೊಗ್ಗದ ಸಕ್ರೆಬೈಲು ಬಳಿ ಸ್ಕೋಡಾ ಕಂಪನಿಯ ಕಾರೊಂದು ಧಗಧಗ ಹೊತ್ತಿ ಉರಿದಿದೆ. ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದಾಗ ಈ ಘಟನೆ ನಡೆದಿದೆ. ಕಾರು ವೇಗವಿದ್ದ ಕಾರಣ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ತಕ್ಷಣ ಕಾರಿಗೆ ಬೆಂಕಿ ಹತ್ತಿಕೊಂಡು ಕಾರು ಹೊತ್ತಿ ಉರಿದಿದೆ. ಕಾರಿನಲ್ಲಿ ಮೂವರು ಪ್ರಯಾಣಿಸಿದ್ದು ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಮೆಗ್ಗಾನ್ ಆಸ್ಪತ್ರೆಗೆ ಸೇರಿಸಿದ್ದಾರೆ.  ಹೆಚ್ಚಿನ ಮಾಹಿತಿ ಇನ್ನಷ್ಟು ಬರಬೇಕಾಗಿದೆ. ವರದಿ : ಮಂಜುನಾಥ್ ಶೆಟ್ಟಿ ಶಿವಮೊಗ್ಗ

Read More

ಅಕ್ರಮ ಮರಳು ಗಣಿಗಾರಿಕೆಯ ವಿರುದ್ದ ಭೂ ವಿಜ್ಞಾನ ಇಲಾಖೆಯಿಂದ ಕ್ಷಿಪ್ರ ಕಾರ್ಯಾಚರಣೆ : ಎರಡು ಲಾರಿ,ಎರಡು ಜೆಸಿಬಿ ವಶಕ್ಕೆ..!!

ಹೊಸನಗರ ತಾಲ್ಲೂಕಿನಲ್ಲಿ ಅಕ್ರಮ ಮರಳುಗಾರಿಕೆ ಕಲ್ಲು ಗಣಿಗಾರಿಕೆಗಳು ತಾರಕಕ್ಕೇರಿದ್ದು ಅದರಂತೆ ಶಿವಮೊಗ್ಗದ ಭೂ ವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿ ನವೀನ್ ವಿ.ಎಸ್ ನೇತೃತ್ವದ ತಂಡ ನಂಜವಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಮರಳು ತುಂಬಿದ ಎರಡು ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. ಹಾಗೇಯೆ ಆನಂದಪುರದಲ್ಲಿ ಅಕ್ರಮ ಜಂಬಿಟ್ಟಿಗೆ ನಡೆಸುತ್ತಿದ್ದ ಗಣಿಗಾರಿಕೆಗೆ ನುಗ್ಗಿ ಅಕ್ರಮಕ್ಕೆ ಬಳಸಿದ್ದ ಎರಡು ಜೆಸಿಬಿ ವಶ ಪಡಿಸಿಕೊಂಡು ಒಟ್ಟು ಎರಡು ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಅಕ್ರಮ ಮರಳು ಮಾಫ಼ಿಯಾ ನಡೆಸುವವರಿಗೆ ಎಚ್ಚರಿಕೆ: ಹೊಸನಗರ ತಾಲ್ಲೂಕಿನಲ್ಲಿ ರಾತ್ರಿ ವೇಳೆಯಲ್ಲಿ ಅಕ್ರಮವಾಗಿ…

Read More

ಶಿವಮೊಗ್ಗದ ಗೌಸಿಯಾ ಹೋಟೆಲ್ ನಲ್ಲಿ ಮಾರಾಮಾರಿ :

ಶಿವಮೊಗ್ಗದ ಬೈಪಾಸ್ ರಸ್ತೆಯಲ್ಲಿರುವ   ಗೌಸಿಯಾ ಹೋಟೆಲ್ ನಲ್ಲಿ ಗ್ಯಾಂಗ್ ವಾರ್ ಮಾರಾಮಾರಿ ನಡೆದಿದೆ. ರಿಯಲ್ ಎಸ್ಟೇಟ್ ನ ಹಣದ ವಿಚಾರದಲ್ಲಿ ಯುವಕರ ನಡುವೆಯೇ ಭರ್ಜರಿ ಕಾಳಗವೇ ನಡೆದಿದೆ ಶಿವಮೊಗ್ಗದ ಬಹುತೇಕ ಮಂದಿಗೆ ಈ ಗೌಸಿಯಾ ಹೋಟೆಲ್ ನೆನಪಿರಬಹುದು, ಹೋಗಲಿ ಮಾಲೀಕ  ಮನ್ಸೂರ್ ನೆನಪಿರಬಹುದು. ಹೋಗಲಿ ಅಸಲಿ ಫ್ಲಾಶ್ ಬ್ಯಾಕ್ ಹೇಳಬಿಡುತ್ತೇನೆ. ಬುಡಬುಡಕಿ ಸಾಧಿಕ್ ನ ಮರ್ಡರ್ ಪ್ರಕರಣದಲ್ಲಿ ಅರೊಪಿಯಾಗಿ ಜೈಲಿನಲ್ಲಿರುವ ಮನ್ಸೂರೇ ಈ ಹೋಟೆಲ್ ನ ಮಾಲೀಕ. ಬುಡಬುಡಕಿ ಸಾಧಿಕ್ ನ ಕೊಲೆಯೂ ಇದೇ ರಿಯಲ್ ಎಸ್ಟೇಟ್…

Read More