ಪೋಸ್ಟ್ ಮ್ಯಾನ್ ನ್ಯೂಸ್ ವರದಿಗೆ ಬೆಚ್ಚಿಬಿದ್ದ ಮರಳು ಮಾಫಿಯಾದವರು……! ಮರಳು ಸಂಗ್ರಹಿಸುವ ಪರಿಕರಗಳೊಂದಿಗೆ ಗವಟೂರು ಹೊಳೆಯ ದಡದಿಂದ ಎಸ್ಕೇಪ್ …!
ರಿಪ್ಪನ್ ಪೇಟೆ : ಪಟ್ಟಣದ ಸಮೀಪದ ಶರ್ಮಿಣ್ಯಾವತಿ ನದಿಯ (ಗವಟೂರು ಹೊಳೆ) ದಡದಲ್ಲಿ ಲಕ್ಷಾಂತರ ರೂಪಾಯಿ ಮರಳು ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಮರಳು ಮಾಫಿಯಾದ ವಿರುದ್ಧ ಭಾನುವಾರ ಪೋಸ್ಟ್ ಮ್ಯಾನ್ ವರದಿ ಮಾಡಿತ್ತು. ಇದನ್ನು ಗಮನಿಸಿದ ಮರಳು ಮಾಫಿಯಾದವರು ಹಾಗೂ ಮರಳು ದಂಧೆಕೋರರು ಮರಳು ಸಂಗ್ರಹಣೆಗಾಗಿ ತಂದಿಟ್ಟಿದ್ದ ಪರಿಕರಗಳನ್ನು ತೆಗೆದುಕೊಂಡು ಕೆಲಸಗಾರರೊಂದಿಗೆ ಎಸ್ಕೇಪ್ ಆಗಿದ್ದಾರೆ. ರಿಪ್ಪನ್ ಪೇಟೆಯಿಂದ ಕೇವಲ ಎರಡು ಕಿಲೋಮೀಟರ್ ದೂರದಲ್ಲಿರುವ ಗವಟೂರು ಹೊಳೆಯಲ್ಲಿ ಮರಳು ಮಾಫಿಯಾದವರು ಮರಳು ಸಂಗ್ರಹ ಮಾಡುತ್ತಿರುವ ವಿಷಯ ಕಂದಾಯ,ಅರಣ್ಯ, ಪೊಲೀಸ್,ಭೂ…