ಶಿವಮೊಗ್ಗದ ಸಕ್ರೆಬೈಲು ಬಳಿ ಸ್ಕೋಡಾ ಕಂಪನಿಯ ಕಾರೊಂದು ಧಗಧಗ ಹೊತ್ತಿ ಉರಿದಿದೆ. ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದಾಗ ಈ ಘಟನೆ ನಡೆದಿದೆ.
ಕಾರು ವೇಗವಿದ್ದ ಕಾರಣ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ತಕ್ಷಣ ಕಾರಿಗೆ ಬೆಂಕಿ ಹತ್ತಿಕೊಂಡು ಕಾರು ಹೊತ್ತಿ ಉರಿದಿದೆ.
ಕಾರಿನಲ್ಲಿ ಮೂವರು ಪ್ರಯಾಣಿಸಿದ್ದು ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಮೆಗ್ಗಾನ್ ಆಸ್ಪತ್ರೆಗೆ ಸೇರಿಸಿದ್ದಾರೆ.
ಹೆಚ್ಚಿನ ಮಾಹಿತಿ ಇನ್ನಷ್ಟು ಬರಬೇಕಾಗಿದೆ.
ವರದಿ : ಮಂಜುನಾಥ್ ಶೆಟ್ಟಿ ಶಿವಮೊಗ್ಗ