ಅಪ್ರಾಪ್ತ ನಾದಿನಿಯನ್ನ ಲೈಂಗಿಕವಾಗಿ ಬಳಸಿ ವಿಕೃತಿ ಮೆರೆದ ಕ್ರೂರಿ ಬಾವ! ಪ್ರಸವಪೂರ್ವ ಹೆರಿಗೆಯಾದ ಮಗು ಸಾವು

ನಾದಿನಿ ಮೇಲೆ ಕಳೆದ ಒಂದು ವರ್ಷದಿಂದ ಲೈಂಗಿಕ ದೌರ್ಜನ್ಯ ನಡೆಸಿ ಮಗು ಕರುಣಿಸಿದ್ದ ಕ್ರೂರಿ ಬಾವನನ್ನು ಪೊಲೀಸರು ಬಂದಿಸಿದ್ದಾರೆ. ದುರಾದೃಷ್ಟವಶಾತ್ ಪ್ರಸವಪೂರ್ವ ಹೆರಿಗೆಯಾದ ಬಳಿಕ ಮಗು ಮೃತಪಟ್ಟಿದೆ.

ಕುಂಸಿ ಗ್ರಾಪಂ ವ್ಯಾಪ್ತಿಯ ಕ್ಯಾಂಟೀನ್‌ವೊಂದರ ಮಾಲೀಕ ಪ್ರವೀಣ್ ಬಂಧಿತ ಆರೋಪಿ. ಪತ್ನಿ ಮನೆಯಲ್ಲಿ ಇಲ್ಲದಾಗ ಆಕೆಯ ತಂಗಿ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯವೆಸಗಿದ್ದ. ಅಪ್ರಾಪ್ತೆ 6ನೇ ತರಗತಿಯಿಂದ ಅಕ್ಕನ ಮನೆಯಲ್ಲಿದ್ದುಕೊಂಡು ಓದುತ್ತಿದ್ದಳು. ಎಸ್ಸೆಸ್ಸೆಲ್ಸಿವರೆಗೆ ಓದಿದ್ದ ಅಪ್ರಾಪ್ತೆ ಮೇಲೆ ಬಾವನ ಕಣ್ಣು ಬಿದ್ದಿತ್ತು. ಹಲವು ಬಾರಿ ಲೈಂಗಿಕವಾಗಿ ಬಳಸಿಕೊಂಡಿದ್ದ.


ತದನಂತರ ಅನಾರೋಗ್ಯದ ಕಾರಣ ಅಕ್ಕ ಮತ್ತು ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದು ತಪಾಸಣೆಗೆ ಒಳಪಡಿಸಿದಾಗ ಆಕೆ 5 ತಿಂಗಳ ಗರ್ಭಿಣಿ ಎಂಬುದು ದೃಢಪಟ್ಟಿತ್ತು. ಆಗ ಬಾವ ಪ್ರವೀಣ್ ನಡೆಸಿದ್ದ ಕೃತ್ಯವನ್ನು ಆಕೆ ಕುಟುಂಬದವರ ಮುಂದೆ ಹೇಳಿದ್ದಳು.

ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಅಪ್ರಾಪ್ತೆ ಮಗುವಿಗೆ ಜನ್ಮ ನೀಡಿದ್ದಳು. 7 ತಿಂಗಳಿಗೆ ಮಗು ಜನಿಸಿತ್ತು. ಪ್ರಸವಪೂರ್ವ ಹೆರಿಗೆ ಆಗಿದ್ದರಿಂದ ಅದೇ ದಿನ ಅಪ್ರಾಪ್ತೆಯ ಸಹೋದರ ಶಿಶುವನ್ನು ಮೆಗ್ಗಾನ್ ಆಸ್ಪತ್ರೆ ಐಸಿಯುಗೆ ದಾಖಲಿಸಿದ್ದ. ಈ ವೇಳೆ ಮಗುವಿನ ತಾಯಿಗೆ 19 ವರ್ಷವೆಂದು ವಯಸ್ಸು ನೋಂದಣಿ ಮಾಡಿಸಿದ್ದ. ಅಲ್ಲದೆ, ಆಕೆಯ ಆಧಾರ್ ನಂಬರ್ ಸೇರಿದಂತೆ ಸಮರ್ಪಕ ಮಾಹಿತಿ ನೀಡಿರಲಿಲ್ಲ. ಆದರೆ, ಮರುದಿನವೇ ಮಗು ಮೃತಪಟ್ಟಿದ್ದು ಅಪ್ರಾಪ್ತೆ ತಾಯಿ ಸೇರಿದಂತೆ ಕುಟುಂಬದವರು ಆಸ್ಪತ್ರೆಯಿಂದ ಕಾಲ್ಕಿತ್ತಿದ್ದರು. ಈ ಬಗ್ಗೆ ಅನುಮಾನಗೊಂಡ ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಅಪ್ರಾಪ್ತೆ ವಿಳಾಸ ಅಪೂರ್ಣವಾಗಿದ್ದರಿಂದ ಪೊಲೀಸರೂ ತನಿಖೆ ಕೈಗೊಂಡಿದ್ದರು. ಕೊನೆಗೂ ಅಪ್ರಾಪ್ತೆಯ ವಿಳಾಸ ಪತ್ತೆ ಮಾಡಿ ಆಕೆಯ ವಯಸ್ಸನ್ನು ಖಚಿತಪಡಿಸಿಕೊಂಡಿದ್ದರು. ಮಗು ಜನಿಸಿದಾಗ ಆಕೆ ಇನ್ನೂ ಅಪ್ರಾಪ್ತೆ ಎಂಬುದು ದೃಢಪಟ್ಟಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಲೈಂಗಿಕವಾಗಿ ಆಕೆಯನ್ನು ಬಳಸಿಕೊಂಡಿದ್ದ ಬಾವ ಪ್ರವೀಣ್‌ನನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು Ripponpete: Akhila Karnataka Building Workers Organization district president…

9 hours ago

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ Ripponpete's Apeksha K. secured second place and runner-up…

13 hours ago

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined…

13 hours ago

ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ

ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ College student threatened and robbed of…

1 day ago

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…

1 day ago

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

1 day ago