ಈ ಬಾರಿಯ ಕೇಂದ್ರ ಸರಕಾರದ ಬಜೆಟ್ ನಿರಾಶಾದಾಯಕ : ಅರ್ ಎ ಚಾಬುಸಾಬ್

ರಿಪ್ಪನ್ ಪೇಟೆ : ಕೇಂದ್ರ ಸರ್ಕಾರದ ಈ ವರ್ಷದ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಬಡವರ ಮತ್ತು ಮಧ್ಯಮ ವರ್ಗದವರ ನಿರೀಕ್ಷೆಯನ್ನು ಹುಸಿ ಯನ್ನಾಗಿ ಮಾಡಿದೆ ಎಂದು ರಾಜ್ಯ ಜ್ಯಾತ್ಯಾತೀತ ಜನತಾದಳದ ಮಾಜಿ ಪ್ರಧಾನ ಕಾರ್ಯದರ್ಶಿ ಅರ್ ಎ ಚಾಬುಸಾಬ್ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಜಗತ್ತನ್ನೇ ತಲ್ಲಣಗೊಳಿಸಿದ ಕೊರೊನಾ ಸೋಂಕಿನಿಂದ ಎರಡು ವರ್ಷಗಳಿಂದ ಲಕ್ಷಾಂತರ ಮಂದಿ ಸತ್ತಿದ್ದಾರೆ, ಕೋಟ್ಯಾಂತರ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ, ಜನರಿಗೆ ಏನಾದ್ರೂ ಕೊಡುಗೆ ಸಿಗುತ್ತೆ ಎಂಬ ನಿರೀಕ್ಷೆಯಿತ್ತು, ಆದರೆ ಈ ಬಜೆಟ್ ಬಡವರ, ಜನಸಾಮಾನ್ಯರ ಪರ ಇಲ್ಲ. ತೆರಿಗೆಯನ್ನ ಕಂಟಿನ್ಯೂ ಮಾಡಲಾಗಿದೆ. ಇದರಿಂದ ಜನರಿಗೆ ಮತ್ತೆ ಸಂಕಷ್ಟವಾಗಿದೆ.ಇನ್ನು, ಇದು ಬಜೆಟ್ ಅಲ್ಲ. ಬದಲಿಗೆ ಸಂಸದರನ್ನು ಕೂರಿಸಿಕೊಂಡು ಒಂದು ರಿಪೋರ್ಟ್ ಹೇಳಿದಂತೆ ಇದೆ. ಈ ಬಜೆಟ್​ ಭರವಸೆ ಮೂಡಿಸಿಲ್ಲ, ಇದರಲ್ಲಿ ಉಪ್ಪು, ಹುಳಿ, ಖಾರ ಏನು ಇಲ್ಲ ಎಂದರು. ಬಜೆಟ್​ನಲ್ಲಿ ಆದರೆ ಬಡವರಿಗೆ, ಮಧ್ಯಮ ವರ್ಗಕ್ಕೆ ಏನು ಮಾಡಿಲ್ಲ, ಕರ್ನಾಟಕಕ್ಕೆ ಏನು ಸಿಕ್ಕಿಲ್ಲ.  ಕೃಷ್ಣಾ ಮೇಲ್ದಂಡೆ, ರೈಲು ಯೋಜನೆಗಳಿಗೆ ಹಣ ಕೊಟ್ಟಿಲ್ಲ, ಮಹದಾಯಿ ವಿಚಾರವಾಗಿ ಚರ್ಚೆಯಾಗಿಲ್ಲ, ಇದು ನಿರಾಶದಾಯಕ ಬಜೆಟ್​ ಎಂದರು.

ದೇಶದಲ್ಲಿ ದುಡಿಯುವ ಮತ್ತು ಮದ್ಯಮ ವರ್ಗ ನಿರೀಕ್ಷೆ ಇಟ್ಟಿತ್ತು.ಕೋವಿಡ್ ನಿಂದ ನರಳಿದ ದುಡಿಯುವ ವರ್ಗ ಪರಿಹಾರ ಸಿಗುತ್ತದೆ ಎಂದು ನಿರೀಕ್ಷೆ ಮಾಡಿತ್ತು. ನೇರ ತೆರಿಗೆಯನ್ನು ಮುಂದುವರೆಸಿದೆ. ಕೋವಿಡ್ ಸಂದರ್ಭದಲ್ಲೂ ಯಥಾಸ್ಥಿತಿ ಮುಂದುವರಿಸಿದೆ. ದುಡಿಯುವ ವರ್ಗದ ನಿರೀಕ್ಷೆಯನ್ನು ಕೇಂದ್ರ ಸರ್ಕಾರ ಹುಸಿ ಮಾಡಿದೆ. ಹಣಕಾಸು ಸಚಿವರು ಮತ್ತು ಪ್ರಧಾನ ಮಂತ್ರಿ ಹುಸಿ ಮಾಡಿದ್ದಾರೆ.ಆರೋಗ್ಯ, ಶಿಕ್ಷಣ, ಕೃಷಿ ಈ ಕ್ಷೇತ್ರದ ಉತ್ತೇಜನ ನೀಡುವ ಯೋಜನೆ ಘೋಷಣೆಯಾಗುತ್ತವೆ ಎಂಬ ನಿರೀಕ್ಷೆ ಇತ್ತು. ಕಳೆದ ವರ್ಷ 34 ಲಕ್ಷ ಕೋಟಿ ರೂಪಾಯಿಗಳ ಬಜೆಟ್ ಸೈಜ್ ಮಂಡಿಸಿದ್ದರು.ಈ ವರ್ಷ 39.45 ಲಕ್ಷ ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸಿದ್ದಾರೆ. 4ಲಕ್ಷದ 61 ಸಾವಿರ ಕೋಟಿ ರೂಪಾಯಿ ಹೆಚ್ಚಳದ ಬಜೆಟ್ ಘೋಷಣೆ ಮಾಡಿದ್ದಾರೆ.ವರ್ಷಕ್ಕೆ 11ಲಕ್ಷದ 87 ಸಾವಿರದ 180 ಕೋಟಿ ರೂಪಾಯಿಗಳನ್ನ ಸಾಲ ಮಾಡುತ್ತಿದ್ದಾರೆ. ಅಸಲು ಮತ್ತು ಬಡ್ಡಿ ಬಜೆಟ್ ಭಾಗ, ಸಾಲಕ್ಕೆ ಬಡ್ಡಿಗೆ ಹೋಗುತ್ತದೆ.ವಾರ್ಷಿಕವಾಗಿ 9 ಲಕ್ಷದ 40 ಸಾವಿರದ 651 ಕೋಟಿ ಬಡ್ಡಿ ಕಟ್ಟಬೇಕಾಗುತ್ತದೆ ಎಂದರು.

ಉನ್ನತ ಶಿಕ್ಷಣಕ್ಕೆ ನ್ಯಾಷನಲ್ ಎಜುಕೇಶನಲ್ ಪಾಲಿಸಿ ಬೇರೆ ತಂದಿದ್ದಾರೆ.4779 ಕೋಟಿ ರೂಪಾಯಿ ಗಳನ್ನ ಉನ್ನತ ಶಿಕ್ಷಣಕ್ಕೆ ಹೆಚ್ಚು ಮಾಡಿದ್ದಾರೆ. ಒಟ್ಟಾರೆ  ಒಟ್ಟಾರೆ ಈ ಬಾರಿಯ ಬಜೆಟ್ ದೇಶದ ಬಡವರು ಮತ್ತು ಮಧ್ಯಮ ವರ್ಗದವರಿಗೆ ನಿರಾಸೆ ಉಂಟು ಮಾಡಿದ್ದಾರೆ ಎಂದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

14 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

14 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

18 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

20 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

20 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

1 day ago