ಕನ್ನಡ ಚಲನಚಿತ್ರದ ಹಿರಿಯ ನಟ ‘ಕಲಾತಪಸ್ವಿ’ ರಾಜೇಶ್ ನಿಧನ :

ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್(86) ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

ಉಸಿರಾಟದ ಸಮಸ್ಯೆಯಿಂದಾಗಿ ಅವರನ್ನು ಫೆಬ್ರವರಿ 9 ರಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ನಿಧನರಾಗಿದ್ದಾರೆ.

ರಾಜೇಶ್ ಅವರು ಏಪ್ರಿಲ್ 15, 1935 ರಲ್ಲಿ ಬೆಂಗಳೂರಿನಲ್ಲಿ ಜನಿಸಿದರು. ಪಿಡಬ್ಲ್ಯೂಡಿ ಇಲಾಖೆಯಲ್ಲಿ ಶೀಘ್ರಲಿಪಿ ಮತ್ತು ಬೆರಳಚ್ಚುಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಹೈಸ್ಕೂಲಿನ ದಿನಗಳಿಂದಲೇ ಅವರಿಗೆ ರಂಗಭೂಮಿಯ ಸೆಳೆತ ಅಪಾರವಾಗಿತ್ತು. ಅಂದಿನ ರಂಗಭೂಮಿ ಕಲಾವಿದರಾದ ತ್ಯಾಗರಾಜ ಭಾಗವತರ್, ಟಿ. ಆರ್. ಮಹಾಲಿಂಗಂ ಅಂತಹ ಕಲಾವಿದರ ಬಗ್ಗೆ ಅಭಿಮಾನ ಹೊಂದಿದ್ದ ಅವರು ಮನೆಯವರಿಗೆ ತಿಳಿಯದಂತೆ ನಾಟಕ ಮಂಡಳಿಯಲ್ಲಿ ಪಾತ್ರವಹಿಸತೊಡಗಿದರು.

ಮುಂದೆ ತಮ್ಮದೇ ಆದ ‘ಶಕ್ತಿ ನಾಟಕ ಮಂಡಳಿ’ಯನ್ನು ಸ್ಥಾಪಿಸಿದ ರಾಜೇಶ್ ನಾಡಿನೆಲ್ಲೆಡೆ ಪ್ರಸಿದ್ಧ ನಾಟಕಗಳನ್ನಾಡಿದರು.

ನಾಟಕಗಳಲ್ಲಿನ ಜನಪ್ರಿಯತೆ ರಾಜೇಶರನ್ನು ಚಿತ್ರರಂಗಕ್ಕೂ ಕರೆದು ತಂದಿತು. ಅಂದಿನ ಪ್ರಸಿದ್ಧ ನಿರ್ದೇಶಕರಾದ ಹುಣಸೂರು ಕೃಷ್ಣಮೂರ್ತಿಯವರು ವಿದ್ಯಾಸಾಗರ್ ಎಂಬ ಹೆಸರಿದ್ದ ರಾಜೇಶ್ ಅವರನ್ನು ‘ವೀರ ಸಂಕಲ್ಪ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದರು.

ಪ್ರಸಿದ್ಧ ನಿರ್ಮಾಪಕ ಬಿ. ಎಸ್. ನಾರಾಯಣ್ ನಿರ್ಮಿಸಿ, ಸಿ.ವಿ. ಶಿವಶಂಕರ್ ಅವರು ನಿರ್ದೇಶಿಸಿದ ‘ನಮ್ಮ ಊರು’ ಚಿತ್ರ ಭರ್ಜರಿ ಯಶಸ್ಸು ಕಂಡಿದ್ದಲ್ಲದೆ ರಾಜೇಶ್ ಅವರಿಗೆ ಅಪಾರ ಜನಪ್ರಿಯತೆಯನ್ನು ತಂದಿತು. ಹೀಗೆ ಸಾಗಿದ ತಮ್ಮ ಚಿತ್ರರಂಗದ ಬದುಕಿನಲ್ಲಿ ರಾಜೇಶ್ ಅವರು 150ಕ್ಕೂ ಹೆಚ್ಚು ನಾಯಕ ಪ್ರದಾನ ಪಾತ್ರಗಳು ಮತ್ತು ವೈವಿಧ್ಯಮಯ ಪೋಷಕ ಪಾತ್ರಗಳನ್ನು ಸಮರ್ಥವಾಗಿ ನಿರ್ವಹಿಸಿದ್ದಾರೆ.

‘ನಮ್ಮ ಊರು’, ‘ಗಂಗೆ ಗೌರಿ’, ‘ಸತೀ ಸುಕನ್ಯ’, ಬೆಳುವಲದ ಮಡಿಲಲ್ಲಿ’, ‘ಕಪ್ಪು ಬಿಳುಪು’, ‘ಬೃಂದಾವನ’, ‘ಬೋರೆ ಗೌಡ ಬೆಂಗಳೂರಿಗೆ ಬಂದ’, ‘ಮರೆಯದ ದೀಪಾವಳಿ’, ‘ಪ್ರತಿಧ್ವನಿ’, ‘ಕಾವೇರಿ’, ‘ದೇವರ ಗುಡಿ’, ‘ಬದುಕು ಬಂಗಾರವಾಯ್ತು’, ‘ಸೊಸೆ ತಂದ ಸೌಭಾಗ್ಯ’, ‘ಮುಗಿಯದ ಕಥೆ’, ‘ಬಿಡುಗಡೆ’, ‘ದೇವರದುಡ್ಡು’, ‘ಕಲಿಯುಗ’, ‘ಪಿತಾಮಹ’ ಮುಂತಾದ ಚಿತ್ರಗಳಲ್ಲಿ ರಾಜೇಶರು ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್ ವರದಿ ಅನ್ವಯ? ಇಲ್ಲಿದೆ ಸಂಪೂರ್ಣ ಪಟ್ಟಿ

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್…

8 hours ago

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?…

15 hours ago

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ Former Karnataka Education Minister and Tiptur…

1 day ago

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ Sagara Rural Police arrested…

1 day ago

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan…

1 day ago

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in…

1 day ago