ಅನಾರೋಗ್ಯದಿಂದ ಬಳಲುತ್ತಿದ್ದ ಚಂದನವನದ ಹಿರಿಯ ನಟಿ ಭಾರ್ಗವಿ ನಾರಾಯಣ್ ವಿಧಿವಶರಾಗಿದ್ದಾರೆ.
ಭಾರ್ಗವಿ ನಾರಾಯಣ್ ಅವರು ಕನ್ನಡ ಚಲನಚಿತ್ರೋದ್ಯಮದಲ್ಲಿ ಭಾರತೀಯ ಚಲನಚಿತ್ರದ ನಟಿ ಮತ್ತು ಕರ್ನಾಟಕದ, ರಂಗಭೂಮಿಯ ಕಲಾವಿದೆ. ಭಾರ್ಗವಿ ನಾರಾಯಣ್ ಅವರ ಕೆಲವು ಪ್ರಸಿದ್ಧ ಚಿತ್ರಗಳು ನಟಿಸಿದ್ದಾರೆ. ಎರಡು ಕನಸು, ಪಲ್ಲವಿ ಅನುಪಲ್ಲವಿ, ಹಾಗೂ ಬಾ ನಲ್ಲೆ ಮಧುಚಂದ್ರಕ್ಕೆ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.
ಭಾರ್ಗವಿ ನಾರಾಯಣ್ ಅವರು ಇಪ್ಪತ್ತು ಚಿತ್ರಗಳು ಹಾಗೂ ದೂರದರ್ಶನ ಸರಣಿಯ ಮಂಥನಾ ಮತ್ತು ಮುಕ್ತಾ (ಟಿವಿ ಸರಣಿಗಳು) ಸೇರಿದಂತೆ ಕನ್ನಡದಲ್ಲಿ ಅನೇಕ ನಾಟಕಗಳನ್ನು ನಟಿಸಿದ್ದಾರೆ. ಅವರು ಎಐರ್ ನ ಮಹಿಳಾ ಕಾರ್ಯಕ್ರಮಗಳಿಗಾಗಿ ಮತ್ತು ಮಹಿಳಾ ಸಂಘದ ಮಕ್ಕಳಿಗಾಗಿ ಕರ್ನಾಟಕ ನಾಟಕಗಳನ್ನು ಬರೆದಿದ್ದಾರೆ ಮತ್ತು ನಿರ್ದೇಶಿಸಿದ್ದಾರೆ. ಅವರು ಕನ್ನಡ ನಾಟಕ ಅಕಾಡೆಮಿಯ ಸದಸ್ಯರಾಗಿ ಕೆಲಸ ಮಾಡಿದ್ದಾರೆ.
ಕಲೆಗಳಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸುವ ಮುನ್ನ, ಭಾರ್ಗವಿ ಅವರು ಬೆಂಗಳೂರಿನ ಇಎಸ್ಐ ಕಾರ್ಪೊರೇಶನ್ ಅಲ್ಲಿ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸಿದರು. ಅವರು ಬೆಂಗಳೂರಿನ ಅಂಕಿತಾ ಪುಸ್ತಕ ಪ್ರಕಟಿಸಿದ ‘ನಾ ಕ0ಡ ನಮ್ಮವರ’ ಎಂಬ ಕನ್ನಡದಲ್ಲಿ ಪುಸ್ತಕವನ್ನು ಬರೆದಿದ್ದಾರೆ.
ಭಾರ್ಗವಿಯವರು 1938 ಫೆಬ್ರವರಿ 4ನೇ ತಾರೀಕಿನಂದು ನಾಮಗಿರಿಯಮ್ಮ ಮತ್ತು ಎಂ. ರಾಮಸ್ವಾಮಿಯವರಿಗೆ ಜನಿಸಿದರು. ಬಳಿಕ ಕನ್ನಡ ಚಲನಚಿತ್ರ ನಟ ನಂಜುಂಡಯ್ಯ ನಾರಾಯಣ ಅವರನ್ನು ಮದುವೆಯಾದರು. ಸುಜಾತಾ, ನಟ ಪ್ರಕಾಶ್ ಬೆಳವಾಡಿ, ಪ್ರದೀಪ್ ಮತ್ತು ನಟಿ ಸುಧಾ ಬೆಳವಾಡಿ ಇವರ ಮಕ್ಕಳು.
ಪ್ರಶಸ್ತಿಗಳು
ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳು – ಅತ್ಯುತ್ತಮ ಪೋಷಕ ನಟಿ (1974-75)
ಕರ್ನಾಟಕ ರಾಜ್ಯನಾಟಕ ಅಕಾಡೆಮಿ ಪ್ರಶಸ್ತಿಗಳು (1998)
ಮಂಗಳೂರು ಪ್ರತಿಷ್ಠಿತ ಸಂದೇಶ ಪ್ರಶಸ್ತಿ
ಆಳ್ವಾಸ್ ನಡಿಸಿರಿ ಪ್ರಶಸ್ತಿ(2005)
ಕರ್ನಾಟಕ ರಾಜ್ಯ ನಾಟಕ ಸ್ಪರ್ಧೆ – ಅತ್ಯುತ್ತಮ ನಟಿ (ಎರಡು ಬಾರಿ)
ಕರ್ನಾಟಕ ರಾಜ್ಯ ಮಕ್ಕಳ ನಾಟಕ ಸ್ಪರ್ಧೆ (1974-75) – ರಾಜ್ಯ ಮಟ್ಟದ ಪ್ರಶಸ್ತಿ
ಸಿನಿಮಾಗಳು..
ಪ್ರೊಫೆಸರ್ ಹುಚ್ಚೂರಾಯ
ಪಲ್ಲವಿ
ಮುಯ್ಯಿ
ಅಂತಿಮ ಘಟ್ಟ
ಜಂಬೂ ಸವಾರಿ
ಕಾದ ಬೆಳದಿಂಗಳು
ಇದೊಳ್ಳೆ ರಾಮಾಯಣ
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್