ಶಿವಮೊಗ್ಗ : ಮೆದುಳು ನಿಷ್ಕ್ರಿಯಗೊಂಡಿದ್ದ ಶಿವಮೊಗ್ಗದ ಸ್ಟಾಫ್ ನರ್ಸ್ ಟಿ.ಕೆ. ಗಾನವಿ (22) ಅವರ ಅಂಗಾಂಗಗಳನ್ನು ಪೋಷಕರು ದಾನ ಮಾಡಿದ್ದಾರೆ. ಗಾನವಿ ಅವರು ಕರ್ತವ್ಯದ ವೇಳೆ ಕುಸಿದು ಬಿದ್ದಿದ್ದರು.
ಕೂಡಲೇ ಅವರನ್ನು ಬೆಂಗಳೂರಿನ ಗ್ಯಾಸ್ಟೊ್ರೕ ಎಂಟರಾಲಜಿ ಸೈನ್ಸಸ್ ಆ್ಯಂಡ್ ಆರ್ಗನ್ ಟ್ರಾನ್ಸ್ಪ್ಲಾಂಟ್ ಸಂಸ್ಥೆಗೆ ಕರೆತರಲಾಯಿತು.
ಈ ವೇಳೆ ವೈದ್ಯರು ಮಿದುಳು ನಿಷ್ಕ್ರಿಯವಾಗಿರುವುದಾಗಿ ತಿಳಿಸಿದರು. ಇದರಿಂದ ಪೋಷಕರು ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ತಾಯಿ ಮತ್ತು ಅಕ್ಕ ಅಂಗಾಂಗ ದಾನಕ್ಕೆ ಸಹಿ ಮಾಡುವ ಮೂಲಕ ಹಲವರಿಗೆ ಮಾದರಿಯಾದರು. ಗಾನವಿ ಅವರಿಂದ ‘ಲಿವರ್, ಕಿಡ್ನಿ, ಕಾರ್ನಿಯಾ ಮತ್ತು ಹಾರ್ಟ್ ವಾಲ್ ದಾನವಾಗಿ ಪಡೆಯಲಾಗಿದೆ’ ಎಂದು ಸಂಸ್ಥೆಯ ನಿರ್ದೇಶಕ ಡಾ. ನಾಗೇಶ್ ತಿಳಿಸಿದ್ದಾರೆ.
ಎನ್.ಆರ್.ಪುರ ತಾಲೂಕು ಕಟ್ಟಿನಮನೆ-ಹೊಸಕೊಪ್ಪದ ಕೃಷ್ಣಮೂರ್ತಿ ಮತ್ತು ಲೀಲಾವತಿ ದಂಪತಿ ಪುತ್ರಿ ಗಾನವಿ ಗೌಡ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದರು. ಫೆ.8ರಂದು ಕರ್ತವ್ಯ ನಿರ್ವಹಿಸುತ್ತಿದ್ದಾಗ ಆಸ್ಪತ್ರೆಯಲ್ಲೇ ಕುಸಿದುಬಿದ್ದ ಗಾನವಿ ಮೇಲೆ ಏಳಲೇ ಇಲ್ಲ. ಪ್ರಾಥಮಿಕ ಚಿಕಿತ್ಸೆ ಬಳಿಕ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಲೆಗೆ ಪೆಟ್ಟಾಗಿತ್ತು, ಮಿದುಳಿನ ಶಸ್ತ್ರಚಿಕಿತ್ಸೆ ನಡೆಸಿದರೂ ಯಶಸ್ವಿಯಾಗಿರಲಿಲ್ಲ. ಮಿದುಳು ನಿಷ್ಕ್ರಿಯಗೊಂಡಿದೆ ಎಂದು ವೈದ್ಯರು ಹೇಳುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು. ಎಲ್ಲವೂ ಅಂದುಕೊಂಡತೆ ಇದ್ದಿದ್ದರೆ ಗಾನವಿ ಸಹೋದರಿಯ ವಿವಾಹ ಫೆ.20ರಂದು ನಡೆಯಬೇಕಿತ್ತು.
ಈಗಾಗಲೇ ‘ಸಕ್ರಾ ಆಸ್ಪತ್ರೆಯ 48 ವರ್ಷದ ವ್ಯಕ್ತಿಗೆ ಯಕೃತ್, ಮಣಿಪಾಲ್ ಆಸ್ಪತ್ರೆಯ 40 ವರ್ಷದ ಮಹಿಳೆಗೆ ಬಲಭಾಗದ ಮೂತ್ರಪಿಂಡ, ಐಎನ್ಯು ಆಸ್ಪತ್ರೆಯ 35 ವರ್ಷದ ಪುರುಷನಿಗೆ ಎಡಭಾಗದ ಮೂತ್ರಪಿಂಡ ಕಸಿ ಮಾಡಲಾಗಿದೆ. ಮಣಿಪಾಲ್ ಆಸ್ಪತ್ರೆಗೆ ಹೃದಯ ನಾಳಗಳನ್ನು ಮತ್ತು ಮಿಂಟೋ ಕಣ್ಣಿನ ಆಸ್ಪತ್ರೆಗೆ ಕಾರ್ನಿಯಾಗಳನ್ನು ಕಳಿಸಿದ್ದು, ಅರ್ಹ ಮೂರು ಮಂದಿಗೆ ಕಸಿ ಮಾಡಲಾಗುವುದು’ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ಹೃದಯ ವಿದ್ರಾವಕ ಘಟನೆಯ ನಡುವೆಯೂ ಗಾನವಿ ಕುಟುಂಬದವರು ತೆಗೆದುಕೊಂಡ ನಿರ್ಣಯಕ್ಕೆ ಹ್ಯಾಟ್ಸ್ ಆಫ್ ಹೇಳಲೇ ಬೇಕು. ಅಂಗಾಂಗ ದಾನ ಪ್ರತಿಜ್ಞೆ ತೆಗೆದುಕೊಳ್ಳುವುದಕ್ಕೆ ಗಾನವಿ ಸ್ಫೂರ್ತಿಯಾಗಿದ್ದಾರೆ. ಇನ್ಸ್ಟಿಟ್ಯೂಟ್ ಆಫ್ ಗ್ಯಾಸ್ಟೊ್ರೕ ಎಂಟರಾಲಜಿ ಮತ್ತು ಆರ್ಗನ್ ಟ್ರಾನ್ಸ್ಪ್ಲಾಂಟ್ನಲ್ಲಿಇದು ಮೊದಲ ಅಂಗ ಹಿಂಪಡೆಯುವಿಕೆಯಾಗಿದೆ’ ಎಂದು ಹೇಳಿದ್ದಾರೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್