ಕಳೆದ ಐದು ತಿಂಗಳುಗಳಿಂದ ಪಡಿತರ ವ್ಯವಸ್ಥೆಯಲ್ಲಿ ಸೀಮೆ ಎಣ್ಣೆ ಇಲ್ಲ : ಜಾಣ ಕುರುಡು ಪ್ರದರ್ಶಿಸುತ್ತಿರುವ ಜನಪ್ರತಿನಿಧಿಗಳು ಹಾಗೂ ಹೋರಾಟಗಾರರು

ರಿಪ್ಪನ್ ಪೇಟೆ: ಪಡಿತರ ವ್ಯವಸ್ಥೆಯಲ್ಲಿ ನೀಡುತ್ತಿದ್ದ ಸೀಮೆ ಎಣ್ಣೆಯನ್ನು ಸರ್ಕಾರ ಅಕ್ಟೋಬರ್ ತಿಂಗಳಿನಿಂದ ಸ್ಥಗಿತಗೊಳಿಸಿದ್ದು, ಗ್ರಾಮೀಣ ಜನತೆ ಬೆಳಕಿಗೆ, ಸಣ್ಣ ಕೃಷಿಕರು ತೋಟಕ್ಕೆ ನೀರು ಹಾಯಿಸಲು ಪರದಾಡುವಂತಾಗಿದೆ.

ನಮ್ಮ ಹೊಸನಗರ ತಾಲೂಕು ಮಲೆನಾಡ ಪ್ರದೇಶವಾಗಿರುವುದರಿಂದ ಪಡಿತರ ಚೀಟಿದಾರರಿಗೆ ಅತ್ಯವಶ್ಯಕವಾಗಿ ಬೇಕಾಗಿರುವ ಸೀಮೆ ಎಣ್ಣೆ ವಿತರಣೆಯನ್ನು ಕಳೆದ ನಾಲ್ಕೈದು ತಿಂಗಳುಗಳಿಂದ ಸರ್ಕಾರ ನಿಲ್ಲಿಸಿದೆ.

ಇದಕ್ಕೆ ಕಾರಣವೇನು ಎಂದು ತಿಳಿದುಕೊಳ್ಳಬೇಕಾಗಿರುವ ಜನಪ್ರತಿನಿಧಿಗಳು ಹಾಗೂ ಸೋಕಾಲ್ಡ್ ಹೋರಾಟಗಾರರು ಬಾಯಿಗೆ ಬೆರಳಿಟ್ಟುಕೊಂಡು ಕುಳಿತಿದ್ದಾರೆಯೇ ಹೊರತು ಪ್ರಶ್ನೆ ಮಾಡುವ ಗೋಜಿಗೆ ಹೋಗಿಲ್ಲ.


ಸೀಮೆಎಣ್ಣೆ ಬಹು ಉಪಯೋಗಿ­ಯಾಗಿದ್ದು, ಅಡುಗೆ ಮಾಡಲು ಮಾತ್ರ ಅದನ್ನು ಬಳಕೆ ಮಾಡುತ್ತಿಲ್ಲ. ಗ್ರಾಮೀಣ ಜನರು ಬೆಳಕಿಗೆ, ನೀರಾವರಿ ಪಂಪ್‌, ಜನರೇಟರ್‌ಗೆ ಈಗಲೂ ಸೀಮೆಎಣ್ಣೆ­ಯನ್ನೇ ಅವಲಂಬಿಸಿದ್ದಾರೆ.
ರಾತ್ರಿ ವೇಳೆ ನಿರಂತರ ವಿದ್ಯುತ್ ಕಡಿತ, ಅನಿಯಮಿತ ಕಡಿತ, ವಿದ್ಯಾರ್ಥಿ­ಗಳಿಗೆ ಪರೀಕ್ಷೆಗಳು ನಡೆಯುತ್ತಿದ್ದರೂ ವಿದ್ಯುತ್ ಕಡಿತ ಮಾತ್ರ ನಿಂತಿಲ್ಲ. ಬೆಳಕಿಗೆ ಸೀಮೆ ಎಣ್ಣೆ `ಬುಡ್ಡಿ ದೀಪ’ವೇ ಅನಿವಾರ್ಯವಾಗಿದೆ. ಎಲ್ಲರಿಗೂ ಇನ್‍ವರ್ಟರ್‌ ಕೊಳ್ಳುವ ಶಕ್ತಿ ಇರುವುದಿಲ್ಲ. ಸೀಮೆಎಣ್ಣೆಯ ಪೂರೈಕೆ ಸ್ಥಗಿತಗೊಂಡರೆ ವಿದ್ಯುತ್ ಕಡಿತದ ಸಮಯದಲ್ಲಿ ಬಡ ಜನರು ಕತ್ತಲಿನಲ್ಲಿಯೇ ಕಳೆಯಬೇಕಾದ ಅನಿವಾರ್ಯ ಸ್ಥಿತಿ ನಿರ್ಮಾಣವಾಗ­ಬಹುದು ಎಂದು ಜನರು ಹೇಳುತ್ತಾರೆ.

ವಿದ್ಯುತ್ ಕೈಕೊಟ್ಟಾಗ ಸಣ್ಣ ಉದ್ದಿಮೆ ನಡೆಸುವವರು, ವ್ಯಾಪಾರಿಗಳೂ ಸೀಮೆ­ಎಣ್ಣೆ ಜನರೇಟರ್‌ಗಳನ್ನೇ ಅವಲಂಬಿಸಿ­ದ್ದಾರೆ. ಅವರೂ ದೊಡ್ಡ ಡೀಸೆಲ್ ಜನರೇಟರ್‌ ಖರೀದಿಸಬೇಕಾಗಿದೆ. ಆದರೆ ಅದು ದುಬಾರಿ, ನಿರ್ವಹಣಾ ವೆಚ್ಚ ಅಧಿಕ ಮತ್ತು ಅದನ್ನು ಇಡಲು ಹೆಚ್ಚಿನ ಸ್ಥಳಾವಕಾಶವೂ ಅಗತ್ಯವಾದ್ದರಿಂದ ಎಲ್ಲರೂ ಸೀಮೆ ಎಣ್ಣೆ ಚಾಲಿತ ಜನರೇಟರ್‌ ಬಳಸುತ್ತಿದ್ದಾರೆ.

ಪಡಿತರ ಸೀಮೆಎಣ್ಣೆ ಕಾಳಸಂತೆಗೆ ಹೋಗುತ್ತಿದೆ ಎಂಬ ಕಾರಣಕ್ಕೆ 20 ವರ್ಷಗಳ ಹಿಂದೆ ಸೀಮೆಎಣ್ಣೆಯನ್ನು ಸರ್ಕಾರ ಮುಕ್ತ ಮಾರುಕಟ್ಟೆಗೆ ಬಿಡುಗಡೆ ಮಾಡಿತ್ತು. ಮುಕ್ತ ಮಾರುಕಟ್ಟೆ ಸೀಮೆ ಎಣ್ಣೆ ಪಾರದರ್ಶಕ ಬಣ್ಣ ಹೊಂದಿದ್ದರೆ, ಪಡಿತರ ಸೀಮೆಎಣ್ಣೆಗೆ ನೀಲಿ ಬಣ್ಣವನ್ನು ನೀಡಲಾಗಿತ್ತು.
ಮುಕ್ತ ಮಾರುಕಟ್ಟೆಯ ಸೀಮೆ ಎಣ್ಣೆ ದುಬಾರಿಯಗಿದ್ದರಿಂದ ಈ ಯೋಜನೆ ಆರಂಭದಲ್ಲೇ ವಿಫಲ­ವಾಯಿತು. ಹಾಗಾಗಿ ಈಗ ಮುಕ್ತ ಮಾರುಕಟ್ಟೆಯಲ್ಲೂ ಸೀಮೆಎಣ್ಣೆ ಸಿಗುತ್ತಿಲ್ಲ.

ಪಂಪ್‌ ಮೂಲಕ ನೀರೆತ್ತುತ್ತಿದ್ದವರು ಇದೀಗ ಸಮಸ್ಯೆ ಎದುರಿಸಬೇಕಾಗಿದೆ. ಈಗ ಪಡಿತರದಲ್ಲೂ, ಮುಕ್ತ ಮಾರುಕಟ್ಟೆ­­ಯಲ್ಲೂ ಸೀಮೆ ಎಣ್ಣೆ ಸಿಗದ ಕಾರಣ ಬಡ ಕೃಷಿಕರೂ ನೀರಿಗೆ ಪರದಾಡುವಂತಾಗಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್ ವರದಿ ಅನ್ವಯ? ಇಲ್ಲಿದೆ ಸಂಪೂರ್ಣ ಪಟ್ಟಿ

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್…

8 hours ago

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?…

15 hours ago

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ Former Karnataka Education Minister and Tiptur…

1 day ago

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ Sagara Rural Police arrested…

1 day ago

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan…

1 day ago

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in…

1 day ago