ಏನೇನೋ ವೇಷ ಧರಿಸಿಕೊಂಡು ಬರುತ್ತೇವೆ, ನನ್ನ ಧರ್ಮ ಇದು, ನನ್ನ ಧರ್ಮ ಅದು ಎಂದು ಹೇಳಿದರೆ ಆಗಲ್ಲ. ಹಿಜಾಬ್ ಮತ್ತು ಕೇಸರಿ ಶಾಲು ಧರಿಸುವುದು ಕಾಲೇಜು ಆವರಣದಲ್ಲಿ ನಡೆಯವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಕಾಲೇಜು ಆಡಳಿತ ನಿರ್ಧರಿಸಿರುವ ಸಮವಸ್ತ್ರವನ್ನೇ ಕಾಲೇಜಿನಲ್ಲಿ ಧರಿಸಬೇಕು. ಇದನ್ನು ಕಡ್ಡಾಯ ಮಾಡಿ ಶಿಕ್ಷಣ ಇಲಾಖೆ ನಿನ್ನೆ ಆದೇಶ ಹೊರಡಿಸಿದೆ. ಈ ಆದೇಶವನ್ನು ಎಲ್ಲರೂ ಪಾಲಿಸಲೇಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಗುಡ್ಡೆಕೊಪ್ಪ ಗ್ರಾಮದಲ್ಲಿ ಮಾತನಾಡಿದ ಅವರು, ಏನೇನೋ ವೇಷ ಧರಿಸಿಕೊಂಡು ಬರುತ್ತೇವೆ, ನನ್ನ ಧರ್ಮ ಇದು, ನನ್ನ ಧರ್ಮ ಅದು ಎಂದು ಹೇಳಿದರೆ ಆಗಲ್ಲ. ಧರ್ಮವನ್ನು ಮೀರಿ ಭಾರತ ಮಾತೆಯ ಮಕ್ಕಳು ನಾವೆಲ್ಲ ಒಂದೇ ಎಂಬ ಭಾವನೆ ನಿರ್ಮಾಣವಾಗಬೇಕು. ಇಂಥ ಸಂಸ್ಕಾರ ಸಿಗುವ ಒಂದೇ ಒಂದು ವೇದಿಕೆ ಅಂದರೆ ಅದು ಶಾಲಾ- ಕಾಲೇಜುಗಳು. ಯೂನಿಫಾರಂ ಸಮಾನತೆಯ ಸಂಕೇತ ಶಾಲಾ ಕಾಲೇಜುಗಳಲ್ಲಿ ಸಮಾನತೆ ಸಾರುವ ಕೆಲಸ ಆಗಬೇಕು ಎಂದು ತಿಳಿಸಿದರು.
ಹಿಜಾಬ್ ಬಗ್ಗೆ ಯಾವಾಗಲೂ ಇಲ್ಲದಿರುವ ಒಲವು ಈಗ ಬಂದಿದೆ. ಕಡ್ಡಾಯವಾಗಿ ನಾವು ಹಿಜಾಬ್ ಧರಿಸಿಬರುತ್ತೇವೆ. ಇಲ್ಲದಿದ್ದರೆ ಕಾಲೇಜು ಬಿಡುತ್ತೇವೆ ಎನ್ನುತ್ತಿದ್ದಾರೆ. ಯಾವಾಗಲೂ ಮಕ್ಕಳು ಹೀಗೆ ಹೇಳುತ್ತಿರಲಿಲ್ಲ. ಇದರ ಹಿಂದೆ ಯಾವುದೋ ಕಾಣದ ಶಕ್ತಿ ಕೆಲಸ ಮಾಡುತ್ತಿದೆ ಎಂಬ ಅನುಮಾನ ಬರುತ್ತಿದೆ. ಪೊಲೀಸ್ ಇಲಾಖೆಗೆ ನಿರ್ದೇಶನ ಹೋಗಿದೆ. ಇದರ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ತನಿಖೆ ನಡೆಸಬೇಕು ಎಂದು ನಿರ್ದೇಶನ ಹೋಗಿದೆ ಎಂದು ಮಾಹಿತಿ ನೀಡಿದರು.
ಕಾಲೇಜುಗಳ ಆಡಳಿತ ಮಂಡಳಿಗೆ ಎಲ್ಲ ರೀತಿಯ ಪೊಲೀಸ್ ರಕ್ಷಣೆ ನೀಡುವಂತೆ ಸೂಚಿಸಿದ್ದೇನೆ. ಕೆಲ ತಿಂಗಳಲ್ಲೇ ಪರೀಕ್ಷೆ ಆರಂಭವಾಗಲಿದೆ. ಹೀಗಾಗಿ ಮಕ್ಕಳ ಹಿತದೃಷ್ಟಿಯಿಂದ ಮಕ್ಕಳನ್ನು ಎತ್ತಿಕಟ್ಟುವ ಕೆಲಸ ಮಾಡಬಾರದು ಎಂದು ಗೃಹ ಸಚಿವರು ಮನವಿ ಮಾಡಿದರು.
ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ 👇👇👇👇
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್