WhatsApp Channel Join Now
Telegram Channel Join Now
ಶಿವಮೊಗ್ಗ ಜಿಲ್ಲೆಯ ಆನಂದಪುರದ ದಾಸಕೊಪ್ಪ ಬಸ್ ನಿಲ್ದಾಣದ ಬಳಿ ಕೃಷ್ಣ ಮೃಗ ಚರ್ಮಗಳ ಮಾರಾಟದಲ್ಲಿ ತೊಡಗಿರುವ ವ್ಯಕ್ತಿಯನ್ನು ಅರಣ್ಯ ಸಂಚಾರಿದಳದ ಪೋಲೀಸರು ಬಂಧಿಸಿದ್ದಾರೆ.

ಆನಂದಪುರದ ದಾಸಕೊಪ್ಪ ಬಸ್ ನಿಲ್ದಾಣದಲ್ಲಿ ಕೃಷ್ಣ ಮೃಗದ ಚರ್ಮ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಸಾಗರ ಅರಣ್ಯ ಸಂಚಾರಿ ದಳದವರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಶಿಕಾರಿಪುರ ತಾಲೂಕಿನ ಮಳವಳ್ಳಿ ತಾಂಡದ ಮುರಳೀಧರ್ ನಾಯ್ಕ್ ಬಂಧಿತ ವ್ಯಕ್ತಿ. ಈತನಿಂದ ಕೃಷ್ಣ ಮೃಗದ ಚರ್ಮಗಳನ್ನು ಮಾಲು ಸಮೇತ  ವಶಪಡಿಸಿಕೊಂಡು,ಪ್ರಕರಣ ದಾಖಲಿಸಿದ್ದಾರೆ.

ಪೋಲೀಸ್ ಅರಣ್ಯ ಸಂಚಾರಿದಳದ ಸಬ್ ಇನ್ಸ್ ಪೆಕ್ಟರ್ ಮಲ್ಲಿಕಾರ್ಜುನ ಬಿ ಮತ್ತು ಸಿಬ್ಬಂದಿಗಳಾದ ಗಣೇಶ್,ಗಿರೀಶ್,ವಿಶ್ವನಾಥ ಕೃಷ್ಣ, ದಿನೇಶ ಮತ್ತು ಚೈತ್ರ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *