ರಿಪ್ಪನ್ಪೇಟೆ: ಪುರಾಣಪ್ರಸಿದ್ಧ ಕೆರೆಹಳ್ಳಿಯ ಶ್ರೀರಾಮೇಶ್ವರ ಸ್ವಾಮಿಯ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮ, ನೂತನ ದೇವಸ್ಥಾನದ ಕಟ್ಟಡದಲ್ಲಿ ಫೆ. 13 ರ ಭಾನುವಾರ ನೆರವೇರಲಿದೆ.
ಪುರಾಣಕಾಲದ ಐತಿಹ್ಯವನ್ನು ಹೊಂದಿರುವ ದೇವರನ್ನು ಸೀತಾರಾಮರು ವನವಾಸ ಕಾಲದ ಸಂದರ್ಭದಲ್ಲಿ ಶಿವನ ಆರಾಧನೆಗಾಗಿ ಲಿಂಗವನ್ನು ಪ್ರತಿಷ್ಠಾಪಿಸಿ ಪೂಜಿಸಿದ್ದರೆಂಬ ಪ್ರತೀತಿ ಇಲ್ಲಿನ ಜನರಲ್ಲಿ ಪ್ರಚಲಿತದಲ್ಲಿದೆ.
ಪ್ರಾಚೀನಕಾಲದ ಶಿಥಿಲಾವಸ್ಥೆಗೊಂಡಿದ್ದ ದೇವಸ್ಥಾನವನ್ನು ತೆರವುಗೊಳಿಸಿ ಶಿವನ ಲಿಂಗವನ್ನು ವಿಸರ್ಜಿಸಲಾಗಿತ್ತು. ಭಕ್ತರ ಅಭಿಲಾಷೆಯಂತೆ ದಾನಿಗಳ ಸಹಾಯದಿಂದ ಸುಮಾರು 40 ಲಕ್ಷ ರೂ. ವೆಚ್ಚದಲ್ಲಿ ನೂತನ ದೇವಾಲಯ ರೂಪುಗೊಂಡಿದ್ದು, ಸುಸಜ್ಜಿತ ದೇವಸ್ಥಾನದಲ್ಲಿ ಶಾಸ್ತ್ರೋಕ್ತವಾಗಿ ಶ್ರೀರಾಮೇಶ್ವರನ ಲಿಂಗವು ಪ್ರತಿಷ್ಠಾಪನೆಗೊಳ್ಳುತ್ತಿದೆ.
ಶಿವನ ಮುಂಭಾಗದಲ್ಲಿ ನಂದಿ, ಇಕ್ಕೆಲಗಳಲ್ಲಿ ಪಾರ್ವತಿ ಮತ್ತು ಗಣಪತಿ, ಪರಿವಾರ ದೇವರುಗಳ ಪ್ರತಿಷ್ಠಾಪನೆಯು ಜರುಗಲಿದೆ. ಜೊತೆಗೆ ದೇವಸ್ಥಾನದ ಮುಂಭಾಗದಲ್ಲಿ ಗರುಡಗಂಭ ಸ್ಥಾಪನೆ ಮಾಡಲಾಗುತ್ತಿದೆ ಕೆಂಜಿಗಾಪುರ ಶ್ರೀಧರಭಟ್ರ ಪುರೋಹಿತ್ಯದಲ್ಲಿ ಫೆ. 12 ರ ಶನಿವಾರದಂದು ದೇವಸ್ಥಾನದ ಆವರಣದಲ್ಲಿ 10 ಗಂಟೆಗೆ ಶ್ರೀಗುರು ಗಣಪತಿ ಪೂಜೆ, ಪುಣ್ಯಾಃ, ಕೃಚ್ಛಹೌರಣ ಪೂರ್ವಕ ಪಂಚಗವ್ಯಹವನ, ಗಣಪತಿ ಹವನದೊಂದಿಗೆ ಧಾರ್ಮಿಕ ಕಾರ್ಯಕ್ರಮ ಆರಂಭಗೊಂಡು ಫೆ. 13 ರ ಭಾನುವಾರ ಬೆಳಿಗ್ಗೆ ಶುಭಲಗ್ನದ ಶುಭಾಂಶದಲ್ಲಿ ಶ್ರೀರಾಮೇಶ್ವರ ದೇವರ ಪ್ರತಿಷ್ಠಾನೆ ನೆರವೇರಲಿದ್ದು, ಕುಂಭಾಭೀಷೇಕ, ನೇತ್ರೋನ್ಮಿಲನ ನಿರೀಕ್ಷೆ, ಕಲಾತತ್ವ ಹವನ, ಪೂರ್ಣಾಹುತಿ, ಮಹಾಬಲಿ, ಮಂಗಳಾರತಿಯೊಂದಿಗೆ ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ.
ಪ್ರತಿಷ್ಠಾಪನಾ ಧರ್ಮಕಾರ್ಯದಲ್ಲಿ ಸರ್ವಭಕ್ತಾದಿಗಳು ಪಾಲ್ಗೊಂಡು ದೇವರ ಸೇವೆಯೊಂದಿಗೆ ಕೃತಾರ್ತರಾಗಲು ದೇವಸ್ಥಾನ ಸಮಿತಿ ಕೋರಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್