ಬಿಜೆಪಿಯ ಸಂಸದ ಪ್ರತಾಪ್ ಸಿಂಹ ಮಾತೆತ್ತಿದರೆ ಪಾಕಿಸ್ತಾನಕ್ಕೆ ಹೋಗಿ ಎನ್ನುತ್ತಾರೆ. ನೀವೇ ಯಾಕೆ ಪಾಕಿಸ್ತಾನಕ್ಕೆ ಹೋಗಬಾರದು ಎಂದು ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ವಾಗ್ದಾಳಿ ನಡೆಸಿದರು.
ಅವರು ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಭೇಟಿ ಹಿನ್ನಲೆಯಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿ ಬಿಜೆಪಿ ವಿರುದ್ಧ ಕಿಡಿಕಾರಿದರು.
ಹಿಜಬ್ ಮತ್ತು ಕೇಸರಿ ಶಾಲಿನ ವಿಚಾರದಲ್ಲಿ ಬಿಜೆಪಿ ನಡೆದುಕೊಳ್ಳುತ್ತಿರುವ ವಿಚಾರ ಈಗ ಅಂತರಾಷ್ಟ್ರದ ಮಟ್ಟಕ್ಕೆ ಹೋಗಿ ತಲುಪಿದೆ. ಜನರಿಗೆ ಕಾರ್ಯಕ್ರಮ ಕೊಟ್ಟು ಆ ಆಧಾರದ ಮೇಲೆ ಬಿಜೆಪಿ ಮತ ಕೇಳುತ್ತಿಲ್ಲ. ಭಾವನೆಗಳನ್ನ ಕೆರಳಿಸಿ ಮತ ಕೇಳುವ ಮಟ್ಟಕ್ಕೆ ಬಿಜೆಪಿ ಇಳಿದಿದೆ ಎಂದು ಕಿಮ್ಮನೆ ಆರೋಪಿಸಿದ್ದಾರೆ.
ಇಂದಿರಾಗಾಂಧಿಯವರು ಕಾರ್ಯಕ್ರಮದ ಆಧಾರದಮೇರೆಗೆ ಮತಕೇಳಿದ್ದರು. ಇಂದಿರಾಗಾಂಧಿ ಬ್ಯಾಂಕ್ ರಾಷ್ಟ್ರೀಕರಣಗೊಳಿಸಿ ಬಡವರು ಬ್ಯಾಂಕ್ ಗೆ ತೆರಳುವಂತೆ ಮಾಡಿದರೆ ಪ್ರಧಾನಿ ಮೋದಿ ಬಡವರು ಬ್ಯಾಂಕ್ ಹತ್ತಿರನೂ ಸುಳಿಯದಂತೆ ನೋಡಿಕೊಂಡಿದ್ದಾರೆ.
ಹಿಜಬ್ ವಿಷಯ ಕೇಂದ್ರ ಮತ್ತು ರಾಜ್ಯ ಸರ್ಕಾರ ಮುಂದಿನ ಚುನಾವಣೆಯ ತಾಲೀಮು ಎಂದು ಬಣ್ಣಿಸಿರುವ ಕೆಪಿಸಿಸಿ ವಕ್ತಾರ ಕಾರ್ಯಕ್ರಮದ ಮೇರೆಗೆ ರಾಜ್ಯವನ್ನ ದೇಶವನ್ನ ಗೆಲ್ಲೋದು ಸಾಧ್ಯವಿಲ್ಲವೆಂಬುದು ಬಿಜೆಪಿಗೆ ಗೊತ್ತಾಗಿದೆ ಹಾಗಾಗಿ ಈ ವಿಷಯವನ್ನ ಶಾಲೆಯಲ್ಲಿ ಹರಡುವಂತೆ ಮಾಡಿ ಮತ್ತೆ ಅಧಿಕಾರಕ್ಕೆ ಬರುವ ತಂತ್ರವೆಂದರು.
ಸಿಟಿ ರವಿ ಸಚಿವ ಈಶ್ವರಪ್ಪ, ಸಂಸದ ಪ್ರತಾಪ್ ಸಿಂಹರ ಹೇಳಿಕೆ ಯಾರಿಗಾದರೂ ಸಿಟ್ಟು ಬರಿಸುತ್ತದೆ.ಪ್ರತಾಪ್ ಸಿಂಹ ಮಾತೆತ್ತಿದರೆ ಪಾಕಿಸ್ತಾಕ್ಕೆ ತೆರಳಿ ಎನ್ನುತ್ತಾರೆ ನೀವೆ ಹೋಗಿ ಎಂದರು. ರಾಷ್ಟ್ರೋತ್ಥಾನದವರು ಹೊರತರುವ ಪುಸ್ತಕದಲ್ಲಿ ಗಾಂಧಿ, ನೆಹರೂ ಅವರನ್ನೇ ವಿಲನ್ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದರು.
ಬೆಂಗಳೂರು ಮತ್ತು ತೀರ್ಥಹಳ್ಳಿಗೆ ಮಾತ್ರ ನಮ್ಮ ತೀರ್ಥಹಳ್ಳಿ ಶಾಸಕರು ಗೃಹಸಚಿವರಾಗಿದ್ದಾರೆ.ಪಕ್ಷದ ಒಳಗೆ ಎಷ್ಟೇ ಭಿನ್ನಾಭಿಪ್ರಾಯವಿದ್ದರೂ ಕಾಂಗ್ರೆಸ್ ನ್ನು ಸೋಲಿಸುವ ಪ್ರಯತ್ನ ನಾವೇ ಮಾಡಬಾರದು ಎಂದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್