ಬೆಳೆಯುವ ಮಕ್ಕಳಲ್ಲಿ ಸಂಸ್ಕಾರ ಅರಳಬೇಕು: ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ: ಒಂದು ಶಾಲೆ ಮಕ್ಕಳ ವ್ಯಕ್ತಿತ್ವವನ್ನು ರೂಪಿಸುತ್ತದೆ. ಆ ಶಾಲೆಯಿಂದ ಮಕ್ಕಳ ಮನಸ್ಸಿನಲ್ಲಿ ಸಂಸ್ಕಾರ ಅರಳುವಂತಾಗಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.


ಹೆದ್ದಾರಿಪುರ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ 25 ಲಕ್ಷ ರೂ ವೆಚ್ಚದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿ ಶಾಲೆಗಳು ದೇವಸ್ಥಾನಕ್ಕೆ ಸಮ. ದೇವಸ್ಥಾನಕ್ಕೆ ಕೊಡುವುದನ್ನು ಶಾಲೆಗಳಿಗೆ ಕೊಟ್ಟರೆ ಅಂತಹ ದಾನಿಗಳಿಗೆ ಹತ್ತು ಪಟ್ಟು ಹೆಚ್ಚು ಪುಣ್ಯಪ್ರಾಪ್ತಿಯಾಗುತ್ತದೆ. ಭಾಷಣದಿಂದ ಸಮಾಜ ಪರಿವರ್ತನೆಯಾಗವುದಿಲ್ಲ. ಅಧ್ಯಾಪಕರ ಪ್ರಮಾಣಿಕ ಪ್ರಯತ್ನದಿಂದ ಇಲ್ಲಿನ ಹಣತೆಗಳನ್ನು ದೇಶ ಬೆಳಗಲು ಪ್ರೇರೇಪಿಸಬಹುದು ಅಂತಹ ಮಹತ್ ಕಾರ್ಯ ಶಿಕ್ಷಕರಿಂದಾಗಬೇಕೆಂದರು.


ವಸ್ತç ಸಂಹಿತೆಯಿಂದ ಮಕ್ಕಳಲ್ಲಿ ವರ್ಗ, ಅಂತಸ್ತುಗಳ ಬೇಧವಿಲ್ಲದೆ ಎಲ್ಲರಲ್ಲಿಯೂ ಸಮಾನತೆ ಕಾಣುತ್ತದೆ. ಆದರೆ ಕೆಲವರು ಹಿಜಾಬ್ ವಿಷಯವನ್ನು ಪ್ರಸ್ತಾಪಿಸುತ್ತ ಸಮಾಜದಲ್ಲಿ ದ್ವಂದ್ವವನ್ನು ಮೂಡಿಸುತ್ತಿದ್ದಾರೆ. ಇದರಿಂದ ಸ್ನೇಹಿತರಾದ ವಿದ್ಯಾರ್ಥಿಗಳಲ್ಲಿ ಜಾತಿ-ಮತಗಳ ಬೇಧಭಾವ ಉಂಟಾಗಿ ಸಾಮರಸ್ಯ ಕೆಡುತ್ತಿದೆ. ಪ್ರಸ್ತುತವಾಗಿ ಅನ್ಯವಿಚಾರಗಳಿಗೆ ಆಸ್ಪದವಿಲ್ಲದೆ ನಾವೆಲ್ಲರೂ ಒಂದು ಎಂಬ ಭಾವನೆಯನ್ನು ಮಕ್ಕಳಲ್ಲಿ ಮೂಡಿಸುವ ಅಗತ್ಯತೆಯಿದೆ. 1947 ರಲ್ಲಿ ಈ ದೇಶ ಇಬ್ಬಾಗವಾಗಿರುವುದು ಧರ್ಮದ ಆಧಾರದ ಮೇಲೆ. ಮತೀಯವಾದಿಗಳ ಬೇಡಿಕೆ, ಈಡೇರಿಕೆಯಿಂದ ಆಗ ದೇಶ ಒಡೆದರೆ ಈಗಲೂ ಅಂತಹ ಮತಾಂಧರಿಂದಲೆ ಊರುಕೇರಿಗಳು ಒಡೆಯುತ್ತಿದೆ. ಇಂತಹ ಸಂಘರ್ಷದಿಂದ ದೇಶಕ್ಕೆ ಭವಿಷ್ಯವಿಲ್ಲ. ಸಮಾಜದ ಎಲ್ಲರೂ ಇಂತಹ ಘಟನಾವಳಿಗಳಿಂದ ಎಚ್ಚರಿಕೆ ವಹಿಸಬೇಕೆಂದರು. ಯಾವುದೇ ಒಂದು ವರ್ಗವನ್ನು ತುಷ್ಠೀಕರಣಗೊಳಿಸುವುದು ಜಾತ್ಯಾತೀತವಲ್ಲ. ಎಳೆಯ ಮನಸ್ಸಿನಲ್ಲಿ ವಿಷಬೀಜ ಬಿತ್ತುವುದು ಪಾಪದ ಕೆಲಸವಾಗಿದ್ದು, ಈ ದೇಶ ಸಂಸ್ಕಾರ, ಸಂಸ್ಕೃತಿಗೆ ಪೂರಕವಾಗಿ ಮಕ್ಕಳನ್ನು ಬೆಳಸಬೇಕು ಎಂದರು.

ಗೃಹ ಸಚಿವನಾದ ಮೇಲೆ ದಿನದ ಪೂರ್ತಿ ಸಮಯವನ್ನು ಇಲಾಖೆಯ ಕಾರ್ಯಕ್ಕೆ ಮೀಸಲಿಡಬೇಕಿದೆ. ಅದರ ಮದ್ಯೆಯು ವಾರದಲ್ಲಿ ಎರಡು ದಿನ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದೇನೆ. ಪೊಲೀಸರು ಎಚ್ಚರದಿಂದಿದ್ದರೆ ಜನ ಸುಖವಾಗಿ ಮಲಗಬಹುದು. ಪೊಲೀಸರು ಮಲಗದಂತೆ ನೋಡಿಕೊಳ್ಳುವುದು ನನ್ನ ಜವಾಬ್ದಾರಿ. ನೀವು ನೀಡಿದ ಮತದ ಋಣವನ್ನು ಕ್ಷೇತ್ರ ಹಾಗೂ ರಾಜ್ಯದಲ್ಲಿ ಸಮರ್ಥವಾಗಿ ನಿಭಾಯಿಸುತ್ತಿದ್ದು, ನಿಮ್ಮ ನಿರೀಕ್ಷೆಗೆ ಚ್ಯುತಿಯಾಗದಂತೆ ನಡೆದುಕೊಳ್ಳುತ್ತೇನೆ ಎಂದರು.

ಗ್ರಾ.ಪಂ ವ್ಯಾಪ್ತಿಯ ಸರ್ಕಾರಿ ಶಾಲೆಗಳ ದುರಸ್ಥಿ, ಕುಡಿಯುವ ನೀರು, ಕಲ್ಲೂರು-ಬಿದರಹಳ್ಳಿ-ಜೀರಿಗೆಮನೆ ರಸ್ತೆ, ಕಲ್ಲೂರು-ಕಗ್ಗಲಿಜೆಡ್ಡು-ಮಂಡ್ಲಿ ರಸ್ತೆ, ಜಂಬಳ್ಳಿ ರಸ್ತೆ, ಕೊಡಸೆ ರಸ್ತೆ, ಕಾರಗೋಡು ರಸ್ತೆ, ಕೆರೆಗೋಡು-ಕಲ್ಲುಕೊಪ್ಪ ನೂತನ ಸೇತುವೆ ನಿರ್ಮಾಣ ಸೇರಿಂದAತೆ, ಕಾಲುಸಂಕ, ದೇವಸ್ಥಾನಗಳ ಅಭಿವೃದ್ಧಿಗೆ ಒಟ್ಟು 16.50 ಕೋಟಿಗೂ ಅಧಿಕ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷೆ ವನಿತ ಗಂಗಾಧರ, ಉಪಾಧ್ಯಕ್ಷೆ ಲೀಲಾವತಿ, ಸದಸ್ಯರಾದ ಸುಮಿತ್ರ, ನಾಗರತ್ನ, ವಿಶುಕುಮಾರ್, ಮುಖ್ಯ ಶಿಕ್ಷಕಿ ನಾಗರತ್ನಮ್ಮ, ಎಸ್.ಡಿ.ಎಂ.ಸಿ. ಅಧ್ಯಕ್ಷ ಉಮೇಶ, ಮುಖಂಡರಾದ ಸುರೇಶ ಸ್ವಾಮಿರಾವ್. ಕಲ್ಲೂರು ಮೇಘರಾಜ್, ಗುರುರಾಜಗೌಡ, ನಾಗೇಂದ್ರ, ಜಂಬಳ್ಳಿ ಗಿರೀಶ, ಕಗ್ಗಲಿ ಲಿಂಗಪ್ಪ, ಸತೀಶ್ ಭಟ್ಟ, ತಹಶೀಲ್ದಾರ್ ರಾಜೀವ್, ಬಿಇಓ ವೀರಭದ್ರಪ್ಪ, ತಾ.ಪಂ. ಇಓ ಪ್ರವೀಣ್‌ಕುಮಾರ್, ಇನ್ನಿತರರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

6 hours ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

6 hours ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

6 hours ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

11 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

13 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

1 day ago