Categories: Blog

ಮಲೆನಾಡಿನ ಯುವ ಪ್ರತಿಭೆಗಳಿಂದ ಅದ್ಭುತವಾದ ಕಿರುಚಿತ್ರ :


ಮಲೆನಾಡಿನಲ್ಲಿ ಯುವ ಪ್ರತಿಭೆಗಳೇನೂ ಕಡಿಮೆ ಇಲ್ಲ. ಅಂತಹ ಒಂದು ಪ್ರತಿಭೆಗಳು ತಯಾರಿಸಿರುವ ಕನ್ನಡ ಕಿರುಚಿತ್ರ “ಉದರನಿಮಿತ್ತಂ”.

ಬಹು ನಿರೀಕ್ಷಿತ ಕಿರುಚಿತ್ರವನ್ನು ರಿಪ್ಪನ್ ಪೇಟೆಯ ಬಹುಮುಖ ಪ್ರತಿಭೆ ಅರುಣ ಕಾಳಾಮುಖಿ ನಿರ್ದೇಶಿಸಿದ್ದಾರೆ. ಈ ರೋಚಕ ಕಿರುಚಿತ್ರವು ಕೆಲದಿನಗಳ ಹಿಂದೆ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ.

ಉದರನಿಮಿತ್ತಮ್ ಬಹುಕೃತವೇಷಮ್ ಹೊಟ್ಟೆಪಾಡಿಗಾಗಿ ಜನರು ನಾನಾ ಉದ್ಯೋಗವನ್ನು ಆರಿಸಿಕೊಳ್ಳುತ್ತಾರೆ ನಾನಾ ವೇಷಗಳನ್ನು ತೊಡುತ್ತಾರೆ  ಉದರ ನಿಮಿತ್ತಂ ಚಿತ್ರದ ಶೀರ್ಷಿಕೆಯೇ ಹೇಳುವಂತೆ ಹೊಟ್ಟೆಪಾಡಿಗಾಗಿ ಚಿತ್ರದ ನಾಯಕನು ಹೆಣ ಹೂಳುವ  ಕಾಯಕವನ್ನು ಮಾಡುತ್ತಿರುತ್ತಾನೆ ಆ  ಊರಿನಲ್ಲಿ ಯಾರಾದರೂ ಸತ್ತಾಗ ಮಾತ್ರ ಅವನ ಹಾಗೂ ಅವನ ಕುಟುಂಬದ ಹೊಟ್ಟೆ ತುಂಬುತ್ತಿರುತ್ತದೆ ಸ್ಮಶಾನಕ್ಕೆ ಶವಗಳು ಬಂದಾಗ ಅವರು ಸಂಭ್ರಮಿಸುವ ರೀತಿ ಶವಗಳು ಬರದಿದ್ದಾಗ ತಲ್ಲಣಿಸುವ ಬಗ್ಗೆ ನಿರ್ದೇಶಕರು ನಿರೂಪಿಸಿದ ರೀತಿ ಆಕರ್ಷಕವಾಗಿದೆ.

ಇಂದಿನ ಆಧುನಿಕ ಯುಗದಲ್ಲಿ ಈ ರೀತಿಯ ಕಥಾವಸ್ತು ನಿರ್ದೇಶಕರು ಆಯ್ಕೆ ಮಾಡಿಕೊಂಡಿದ್ದು ಒಂದು  ರೀತಿಯಲ್ಲಿ ಸವಾಲೇ ಸರಿ,, ಕತೆಯು ತುಂಬಾ  ವೇಗವಾಗಿ ಸಾಗಿದ್ದು ಆತುರ ಆತುರವಾಗಿ ಕಥೆಯನ್ನು  ಮುಗಿಸಿದ್ದಾರೆ ಅಯನೂರಿನ ಅಡಗಡಿಯ ಸ್ಮಶಾನದ ಸುತ್ತ ಮುತ್ತ ಚಿತ್ರೀಕರಣ ನಡೆಸಿದ್ದಾರೆ.

 ತಾರಾಗಣದಲ್ಲಿ ರಂಗ ನಿರ್ದೇಶಕ ಗಣೇಶ್ ಕೆಂಚನಾಲ  ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು ಪಾತ್ರಕ್ಕೆ ಜೀವ ತುಂಬಿದ್ದಾರೆ. ಬಾಲನಟಿಯಾಗಿ ಅಭಿನಯಿಸಿರುವ ತಾರಿಣಿ ಕಾಳಾಮುಖಿ ಅಭಿನಯ ಮನೋಜ್ಞವಾಗಿದೆ. ರಂಗನಟಿ ಲಕ್ಷ್ಮೀ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವಿಠ್ಠಲ್ ರಂಗದೋಳ್ ಸಂಗೀತವನ್ನು ನೀಡಿದ್ದಾರೆ. ಶಶಾಂಕ್ ನಾರಾಯಣ್ ಸಂಕಲನವನ್ನು ಅಚ್ಚುಕಟ್ಟಾಗಿ ಮಾಡಿದ್ದಾರೆ.

ಒಟ್ಟಾರೆಯಾಗಿ ಯಾವುದೇ ಆಧುನಿಕ ತಂತ್ರಜ್ಞಾನವಿಲ್ಲದೇ ಕಡಿಮೆ ಬಜೆಟ್ ನಲ್ಲಿ ನಿರ್ಮಿಸಿರುವ ಈ ಕಿರುಚಿತ್ರದ ಕೆಲ ಸನ್ನಿವೇಶ ಸ್ವಲ್ಪ ಅತಿರೇಕ ಅನ್ನಿಸಿದರೂ ಆ ಪಾತ್ರಗಳಲ್ಲಿನ ನೈಜತೆಯನ್ನು ತೋರಿಸುವ ಉದ್ದೇಶದಿಂದ ನಿರ್ದೇಶಕ ಅರುಣ ಕಾಳಾಮುಖಿ ಕಥೆಯನ್ನು ಎಳೆದಿದ್ದಾರೆ.

         [[ಅರುಣ ಕಾಳಾಮುಖಿ.ಉದರ ನಿಮಿತ್ತಂ ನಿರ್ದೇಶಕರು]]

ಒಮ್ಮೆ ನೋಡಿ ಮಲೆನಾಡಿನ ಬಹುಮುಖ ಪ್ರತಿಭೆಗಳಿಗೆ ಪ್ರೋತ್ಸಾಹಿಸಿ…


ಕಿರುಚಿತ್ರದ ಯೂಟ್ಯೂಬ್ ಲಿಂಕ್ ಇಲ್ಲಿದೆ 👇👇👇👇

https://youtu.be/FFrY2P1xY2c



ಕಿರುಚಿತ್ರವನ್ನು ಇಲ್ಲಿ  ವೀಕ್ಷಿಸಿ👇👇👇👇




ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್ ವರದಿ ಅನ್ವಯ? ಇಲ್ಲಿದೆ ಸಂಪೂರ್ಣ ಪಟ್ಟಿ

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್…

9 hours ago

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?…

16 hours ago

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ Former Karnataka Education Minister and Tiptur…

1 day ago

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ Sagara Rural Police arrested…

1 day ago

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan…

1 day ago

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in…

1 day ago