ರಿಪ್ಪನ್ ಪೇಟೆಯ ಪ್ರಗತಿಪರ ಕೃಷಿಕ ಕೆರೆಹಳ್ಳಿ ಟೀಕಪ್ಪಗೌಡರಿಗೆ ಒಲಿದ “ಅನ್ನದಾತ” ರಾಜ್ಯಪ್ರಶಸ್ತಿ

ಶಿವಮೊಗ್ಗ ಜಿಲ್ಲೆಯ ರಿಪ್ಪನ್ ಪೇಟೆಯ ಮೇಲಿನ ಕೆರೆಹಳ್ಳಿಯ ಪ್ರಗತಿಪರ ಕೃಷಿಕ ಟೀಕಪ್ಪ ಗೌಡರಿಗೆ ರಾಜ್ಯಮಟ್ಟದ “ಅನ್ನದಾತ” ಎಂಬ ಪ್ರಶಸ್ತಿಯು ಒಲಿದು ಬಂದಿದೆ.


ಭಾನುವಾರ ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ಗವಿಸಿದ್ದೇಶ್ವರ ಶಾಖಾ ಮಠದಲ್ಲಿ ಕರ್ನಾಟಕ ರಾಜ್ಯ ಬರಹಗಾರರ ಸಂಘದ ವತಿಯಿಂದ ಆಯೋಜಿಸಲಾಗಿದ್ದ “ಕನ್ನಡ ನುಡಿ ವೈಭವ”-೨೦೨೨ ಎಂಬ ರಾಜ್ಯ ಮಟ್ಟದ ಸಾಹಿತ್ಯ ಕಾರ್ಯಕ್ರಮದಲ್ಲಿ ಕೃಷಿ ಕ್ಷೇತ್ರದಲ್ಲಿ ಆಗಾಧ ಸಾಧನೆಗೈದಿರುವ  ಮಲೆನಾಡಿನ ಹೆಮ್ಮೆಯ ಪ್ರಗತಿಪರ ಕೃಷಿಕ ಕೆ ವಿ ಟೀಕಪ್ಪಗೌಡರಿಗೆ “ಅನ್ನದಾತ” ಎಂಬ ಪ್ರಶಸ್ತಿ ನೀಡಿ ಗೌರವಿಸಿ ಸನ್ಮಾನಿಸಲಾಯಿತು.

ಈ ಸಂಧರ್ಭದಲ್ಲಿ ಗವಿಸಿದ್ದೇಶ್ವರ ಮಠದ ಹಿರಿಶಾಂತವೀರ ಮಹಾಸ್ವಾಮಿಗಳು,ಕರ್ನಾಟಕ ರಾಜ್ಯ ಬರಹಗಾರರ ಸಂಘದ ಅಧ್ಯಕ್ಷರಾದ ಮಧುನಾಯ್ಕ್ ಲಮಾಣಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.


ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆಯ ಕೆ ವಿ ಟೀಕಪ್ಪಗೌಡರು ನಾಟಿ ಯಂತ್ರವನ್ನು ಈ ಭಾಗದಲ್ಲಿ ಮೊದಲು ಪರಿಚಯಿಸಿದವರು ಮೊದ ಮೊದಲು ಇವರನ್ನು ನೋಡಿ ನಕ್ಕವರೇ ಹೆಚ್ಚು.ನಂತರ ಅದರ ಲಾಭದ ಅರಿವಾದ ಮೇಲೆ ಮೂಗಿನ ಮೇಲೆ ಬೆರಳಿಡದವರೇ ಇಲ್ಲ.

ಕೈಯಿಂದ ನಾಟಿ ಮಾಡುವ ಪದ್ಧತಿಯೂ ಭತ್ತದಲ್ಲಿ ಇತ್ತೀಚಿನವರೆಗೆ ನಡೆದುಕೊಂಡು ಬಂದಿರುವುದು ಸಾಂಪ್ರದಾಯಿಕ ಪದ್ಧತಿ. ಇಂದು ಕಾಲ ಬದಲಾಗಿದೆ ಕೃಷಿಯು ಯಾಂತ್ರಿಕರಣದತ್ತ ಸಾಗುತ್ತಿರುವುದು ಕೂಲಿಗಾರರ ಮೇಲಿನ ಅವಲಂಬನೆ ಕಡಿಮೆ ಮಾಡುವುದರ ಜೊತೆಗೆ ಬೇಸಾಯದ ಖರ್ಚನ್ನು ಕಡಿಮೆ ಮಾಡಿ ಆಹಾರ ಉತ್ಪಾದನೆಯಲ್ಲಿ ಗಣನೀಯವಾಗಿ ಬದಲಾವಣೆ ಮಾಡಿರುವುದು ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ. ನಾಟಿ ಮಾಡಲು ಕೂಡಾ ಈಗ ಸರಳವಾದ ಯಂತ್ರ ಬಂದಿದೆ. ಏಕಕಾಲಕ್ಕೆ ನಾಲ್ಕು ಸಾಲುಗಳಲ್ಲಿ ನಾಟಿ ಮಾಡುತ್ತದೆ.ಕ್ರಮಬದ್ಧ ರೀತಿಯಲ್ಲಿ ಬತ್ತದ ಸಸಿಗಳನ್ನು ಬೆಳೆಸಿ ಕೊಟ್ಟರೆ ಸಾಕು ನಾಟಿ ಯಂತ್ರವು 2ಗಂಟೆಯಲ್ಲಿ ಒಂದು ಎಕರೆ ಪ್ರದೇಶದಲ್ಲಿ ಭತ್ತ ನಾಟಿ ಕೆಲಸವನ್ನು ಮಾಡಿ ಮುಗಿಸುತ್ತದೆ. ನಾಟಿ ಯಂತ್ರ ಈಗಾಗಲೇ ರೈತರಿಗೆ ಚಿರಪರಿಚಿತವಾಗಿದೆ. ನಾಟಿ ಕಾರ್ಮಿಕರ ಕೊರತೆಯನ್ನು ಈ ಯಂತ್ರ ನೀಗಿಸಿದೆ.ಯಾಂತ್ರೀಕೃತ ಬೇಸಾಯ ಪದ್ದತಿಯಲ್ಲಿ ಸಸಿಗಳ ತಯಾರಿ ಅತ್ಯಂತ ಮುಖ್ಯವಾದುದು. ಸಾಂಪ್ರಾದಾಯಿಕ ಕೃಷಿ ಪದ್ದತಿಯಲ್ಲಿ ನೇಜಿ ತಯಾರಿಸಿದಂತಲ್ಲ. ಈ ನಾಟಿ ಯಂತ್ರದ ಬಳಕೆ ಮಾಡುವುದರಿಂದ ಸಸಿ ಮಡಿಗಳನ್ನು ಮಾಡಿ ಅಲ್ಲಿ ನೇಜಿ ತಯಾರಿಸಿಕೊಂಡಿರಬೇಕು. ಒಂದು ಎಕರೆ ಸಸಿಮಡಿ ಬೆಳೆಸಲು 40 ಅಡಿ ಉದ್ದ 4 ಅಡಿ ಅಗಲ ಜಾಗ ಸಾಕು ಮನೆಮುಂದಿನ ಕಾಂಕ್ರೇಟಿಕೃತ ಸ್ಥಳ, ಮಣ್ಣಿನಲ್ಲಿ ಸಹ ಬೆಳೆಸಬಹುದು ಎನ್ನುತ್ತಾರೆ ಟೀಕಪ್ಪ ಗೌಡರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ. ಶಿವಕುಮಾರ್ ನೀಡಿದ ಭರವಸೆಗಳೇನು?

ಮಲೆನಾಡಿನ ರೈತರ ಜಮೀನಿಗೆ ಕೈಹಾಕಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ.…

10 hours ago

ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ

ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ Vishwakarma Jayanti was celebrated by the…

11 hours ago

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a…

1 day ago

ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ

ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ Arasalu's Kavanasree H.M. earns two more Guinness…

1 day ago

ಸರ್ಕಾರಿ ಜಾಗದಲ್ಲಿ ಖಾಸಗಿ ಬೇಲಿ; ಕಂದಾಯ ಅಧಿಕಾರಿಗಳಿಂದ ತೆರವು – ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ

ರಿಪ್ಪನ್ ಪೇಟೆಯಲ್ಲಿ ಸರ್ಕಾರಿ ಜಾಗದ ಬೇಲಿ ತೆರವು; ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ Revenue officials removed a fence…

1 day ago

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…

2 days ago