ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಮುಸ್ಲಿಂ ಸಮುದಾಯದ ಪೋಷಕರ ಸಭೆ ಇಂದು ಕಾಲೇಜಿನಲ್ಲಿನಡೆಯಿತು. ಈ ಸಂಧರ್ಭದಲ್ಲಿ ಪಿ.ಎಸ್.ಐ ಶಿವಾನಂದಕೋಳಿ ಅವರು ಮಾತನಾಡಿ ಸರ್ಕಾರ ಹಾಗೂ ನ್ಯಾಯಾಲಯದ ಆದೇಶ ಪರಿಪಾಲನೆ ಮಾಡುವುದು ಪ್ರತಿಯೊಬ್ಬ ಪ್ರಜೆಯ ಆದ್ಯ ಕರ್ತವ್ಯ.
ಆ ನಿಟ್ಟಿನಲ್ಲಿ ಈಚೆಗೆ ವಿವಾದಕ್ಕೆ ಒಳಗಾಗಿರುವ ವಸ್ತ್ರಸಂಹಿತೆಯನ್ನು ಹೊರತುಪಡಿಸಿ ಶಾಲಾ-ಕಾಲೇಜಿನ ನಿಗದಿತ ಸಮವಸ್ತ್ರವನ್ನು ಧರಿಸಿ ಬರುವಂತೆ ಸೂಚಿಸಿದರು. ಶಿಕ್ಷಣದಿಂದ ಯಾವುದೇ ವಿದ್ಯಾರ್ಥಿಗಳು ವಂಚಿತರಾಗದೇ ತಮ್ಮ ಮುಂದಿನ ಭವ್ಯ ಭವಿಷ್ಯವನ್ನು ರೂಪಿಸಿಕೊಳ್ಳಬೇಕು, ಆ ನಿಟ್ಟಿನಲ್ಲಿ ಪೋಷಕರೂ ಸಹ ಯಾವುದೇ ಸುಳ್ಳುಸುದ್ದಿಗಳ ವದಂತಿಗಳ ಕಡೆ ಗಮನಹರಿಸದೇ ಮಕ್ಕಳ ಅಭ್ಯುದಯಕ್ಕೆ ಸಹಕರಿಸಬೇಕೆಂದು ಮನವಿ ಮಾಡಿದರು.
ಕಾಲೇಜಿನ ಪ್ರಾಚಾರ್ಯ ಮಂಜುನಾಥ ಎ. ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮೀಣ ಭಾಗದ ಈ ಕಾಲೇಜಿನಲ್ಲಿ ಪ್ರಥಮ ಹಾಗೂ ದ್ವಿತೀಯಪಿಯುಸಿಯಲ್ಲಿ ಒಟ್ಟು 605 ವಿದ್ಯಾರ್ಥಿಗಳು ವ್ಯಾಸಂಗಮಾಡುತ್ತಿದ್ದುಅದರಲ್ಲಿ 21 ಜನ ವಿದ್ಯಾರ್ಥಿನಿಯರು ಮುಸ್ಲಿಂ ಸಮುದಾಯದವರಿದ್ದಾರೆ. ನ್ಯಾಯಾಲಯದ ಮುಂದಿನ ಆದೇಶ ಬರುವವರೆಗೆ ಹಾಲಿ ಆದೇಶವನ್ನು ಪಾಲನೆಯಲ್ಲಿ ಪೋಷಕರು ಹಾಗೂ ವಿದ್ಯಾರ್ಥಿಗಳು ನಮ್ಮೊಂದಿಗೆ ಸಹಕರಿಸಬೇಕು.
ಯಾವುದೇ ವಿದ್ಯಾರ್ಥಿನಿಯರೂ ಸಹ ವಸ್ತ್ರಸಂಹಿತೆಯ ಸಮಾನತೆಯನ್ನು ಉಲ್ಲಂಘಿಸುವಂತಿಲ್ಲ.ಸರ್ಕಾರದಕಟ್ಟು ನಿಟ್ಟಿನ ಆದೇಶವನ್ನು ಮೀರಿದಲ್ಲಿ ಅಂತಹವರಿಗೆ ಕಾಲೇಜು ಪ್ರವೇಶಕ್ಕೆ ಅವಕಾಶವಿಲ್ಲ ಎಂಬುದನ್ನು ಸ್ಪಷ್ಟಪಡಿಸಿದರು.
ಮುಸ್ಲಿಂ ಸಮುದಾಯದ ಬಹುತೇಕ ಪೋಷಕರು ಕಾನೂನುಪಾಲನೆಗೆ ಒಪ್ಪಿಗೆ ಸೂಚಿಸಿದ್ದು, ನ್ಯಾಯಾಲಯದ ಪೂರ್ಣ ಆದೇಶ ಬರುವವರೆಗೂ ಮಧ್ಯಂತರ ಆದೇಶ ಪಾಲನೆ ಮಾಡುವುದಾಗಿ ತಿಳಿಸಿದರು.
ನಾಲ್ವರು ವಿದ್ಯಾರ್ಥಿನಿಯರು ಮಾತ್ರ ನಮಗೆ ಶಿಕ್ಷಣ ಹಾಗೂ ಧರ್ಮ ಎರಡೂ ಮುಖ್ಯ ಹಾಗಾಗಿ ಕಾಲೇಜಿನ ಸಮವಸ್ತ್ರದ ಜೊತೆಗೆ ಹಿಜಾಬ್ ಧರಿಸಲು ಅವಕಾಶ ನೀಡಿದಲ್ಲಿ ಮಾತ್ರ ತರಗತಿಗಳಿಗೆ ಹಾಜರಾಗುವುದಾಗಿ ತಿಳಿಸಿದರು.
ಸಿ.ಡಿ.ಸಿಉಪಾಧ್ಯಕ್ಷದೇವೇಂದ್ರಪ್ಪ ನೆವಟೂರು, ಸದಸ್ಯರಾದ ವಿನೋದ ಮಂಜೋಜಿರಾವ್, ಶಾಂತಕುಮಾರ್, ಉಪನ್ಯಾಸಕವೃಂದ, ಪೋಷಕ ವರ್ಗದವರಾದ ಮಹಮ್ಮದ್ ರಫೀಕ್, ರೋಷನ್ ರಫಿ, ಮತ್ತು ಇನ್ನಿತರರಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್