ಬಸವರಾಜ್ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಘೋಷಿಸಿದ್ದ ಯೋಜನೆ ‘ರೈತ ವಿದ್ಯಾನಿಧಿ’. ಯೋಜನೆಯಲ್ಲಿ ಪಹಣಿ ಸಮಸ್ಯೆಯಿಂದ ಸಾಕಷ್ಟು ವಿದ್ಯಾರ್ಥಿಗಳು ಈ ಸೌಲಭ್ಯದಿಂದ ವಂಚಿತರಾಗುವ ಆತಂಕ ಎದುರಾಗಿದ್ದು, ಯೋಜನೆ ಫಲಾನುಭವಿಗಳಾಗಲು ಪಾಲಿಸಬೇಕಿರುವ ನಿಯಮಾವಳಿಯನ್ನು ಸ್ವಲ್ಪ ಸಡಿಲಿಸಬೇಕೆಂದು ರಿಪ್ಪನ್ ಪೇಟೆ ಕಾಂಗ್ರೆಸ್ ಘಟಕ ಆಗ್ರಹಿಸಿದೆ.
ವಿದ್ಯಾರ್ಥಿ ವೇತನಕ್ಕೆ ಅರ್ಹತೆ ಪಡೆಯಬೇಕಿದ್ದರೆ ಅರ್ಹ ವಿದ್ಯಾರ್ಥಿ ತಂದೆಯ ಹೆಸರು ಪಹಣಿಯಲ್ಲಿ ಇರಲೇಬೇಕು ಎಂಬ ನಿಯಮವಿದೆ. ಕೃಷಿ ಇಲಾಖೆಯ ‘ಫ್ರೂಟ್ಸ್ ಆ್ಯಪ್’ನಲ್ಲಿ ಪಹಣಿಯನ್ನು ನಮೂದು ಮಾಡಿ ಅಲ್ಲೊಂದು ಐಡಿ ಪಡೆದರೆ ಮಾತ್ರ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು. ಆದರೆ ಮಲೆನಾಡು ಪ್ರದೇಶದಲ್ಲಿ ಜಮೀನುಗಳು ಬಹಳಷ್ಟು ವಿದ್ಯಾರ್ಥಿಗಳ ತಂದೆ-ತಾಯಿ ಹೆಸರಿಗೆ ವರ್ಗಾವಣೆಗೊಂಡಿಲ್ಲ. ಪೂರ್ವಜರ ಹೆಸರಲ್ಲೇ ಜಮೀನುಗಳಿವೆ. ಅದರಲ್ಲೂ ಅವಿಭಕ್ತ ಕುಟುಂಬಗಳಲ್ಲಿ ಈ ಸಮಸ್ಯೆ ಹೆಚ್ಚಾಗಿದೆ. ಹೀಗಾಗಿ ಸಾಕಷ್ಟು ಕುಟುಂಬಗಳು ವಿದ್ಯಾರ್ಥಿ ವೇತನ ಪಡೆಯುವ ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ.
ಜಮೀನುಗಳನ್ನು ಪೂರ್ವಜರಿಂದ ತಮ್ಮ ಹೆಸರಿಗೆ ಮಾಡಿಸಿಕೊಳ್ಳುವುದು ಅಷ್ಟು ಸುಲಭವಲ್ಲ.ಮಲೆನಾಡಿನಲ್ಲಿ ಜಮೀನನ್ನು ಹಿರಿಯರು ಇರುವ ತನಕ ಖಾತೆ ಬದಲಾವಣೆ ಮಾಡಿಕೊಳ್ಳುವ ಸಂಸ್ಕ್ರತಿ ಇಲ್ಲಾ ಹಾಗಾಗಿ ಸಾಕಷ್ಟು ರೈತರು ವಿದ್ಯಾನಿಧಿ ವಿದ್ಯಾರ್ಥಿ ವೇತನ ಆಸೆಯನ್ನೇ ಕೈಬಿಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಪಹಣಿ ನಿಯಮವನ್ನು ಸರಕಾರ ಸಡಿಲಿಸಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನೂಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿದರು.
ಈ ಸಂಧರ್ಭದಲ್ಲಿ ರಿಪ್ಪನ್ ಪೇಟೆ ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ಆಸೀಫ಼್ ಭಾಷಾಸಾಬ್,ಕಾಂಗ್ರೆಸ್ ಮುಖಂಡರಾದ ಅಮೀರ್ ಹಂಜಾ,ರವೀಂದ್ರ ಕೆರೆಹಳ್ಳಿ,ಎಂ ಎಂ ಪರಮೇಶ್ ,ರಮೇಶ್ ಫ಼್ಯಾನ್ಸಿ,ಉಲ್ಲಾಸ್ ಹಾಗೂ ಇನ್ನಿತರರಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್