ಇಂದಿನಿಂದ ಪದವಿ ಮತ್ತು ಪದವಿ ಪೂರ್ವ ಕಾಲೇಜು ಆರಂಭವಾದ ಬೆನ್ನಲ್ಲೇ ಶಿವಮೊಗ್ಗದ ಡಿವಿಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಬ್ ತೆಗೆಯಲು ವಿದ್ಯಾರ್ಥಿನಿಯರು ನಿರಾಕರಿಸಿ ಕಾಲೇಜ್ ನ್ನು ಬಹಿಷ್ಕರಿಸಿ ವಾಪಾಸಾಗಿದ್ದಾರೆ.
ಇಂದು ಬೆಳಿಗ್ಗೆ ಕಾಲೇಜು ಆರಂಭಗೊಳ್ಳುತ್ತಿದ್ದಂತೆ ಹಿಜಬ್ ಧರಿಸಿ ಅನೇಕ ವಿದ್ಯಾರ್ಥಿನಿಯರು ಗೇಟ್ ಒಳಗೆ ಪ್ರವೇಶಿಸಿದ್ದಾರೆ. ಆದರೆ ಕಾಲೇಜ್ ಒಳಗೆ ಹೋದವರಿಗೆ ಡಿವಿಎಸ್ ಆಡಳಿತ ಮಂಡಳಿ ಹಿಜಬ್ ಕಳಚಿ ತರಗತಿಯಲ್ಲಿ ಕೂರಲು ಸೂಚಿಸಿದ್ದಾರೆ.ಹಿಜಬ್ ಕಳಚಿ ತರಗತಿಯಲ್ಲಿ ಕೂರಲು ವಿದ್ಯಾರ್ಥಿನಿಯರು ನಿರಾಕರಿಸಿದ ಕಾರಣ 25 ಜನ ವಿದ್ಯಾರ್ಥಿನಿಯರು ವಾಪಾಸಾಗಿದ್ದಾರೆ.
ಹಿಜಬ್ ಧರಿಸಿ ಬಂದ ವಿದ್ಯಾರ್ಥಿನಿಯರು ಡಿವಿಎಸ್ ಕಾಲೇಜಿನಿಂದ ವಾಪಾಸಾಗಿದ್ದಾರೆ. ಹಿಜಬ್ ನೊಂದಿಗೆ ಕ್ಲಾಸ್ ನಲ್ಲಿ ಕೂರಲು ಅವಕಾಶವಿಲ್ಲದ ಕಾರಣ ಹೊರಗೆ ಬಂದು ಮಾಧ್ಯಮಗಳಿಗೆ ಮಾತನಾಡಿದ ವಿದ್ಯಾರ್ಥಿನಿಯೊಬ್ಬಳು ನಾನು ವಿಷ ಕುಡಿದು ಸಾಯುತ್ತೇನೆಯೇ ಹೊರತು ಹಿಜಬ್ ತೆಗೆಯುವುದಿಲ್ಲ ಎಂದು ತಿಳಿಸಿದ್ದಾಳೆ.
ಕಾಲೇಜಿನ ಮುಂಭಾಗದಲ್ಲಿ ವಿದ್ಯಾರ್ಥಿನಿಯರ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರಿ ಕಾಲೇಜಿನಲ್ಲಿ ಈ ರೀತಿ ವಾಪಾಸ್ ಕಳುಹಿಸುವುದು ಸರಿ ಎನ್ನ ಬಹುದು ಆದರೆ ಖಾಸಗಿ ಕಾಲೇಜಿನಲ್ಲಿ ಈ ರೀತಿ ವಿದ್ಯಾರ್ಥಿನಿಯರನ್ನ ವಾಪಾಸು ಕಳುಹಿಸುವುದು ಎಷ್ಟು ಸರಿ. ಲಕ್ಷಾಂತರ ರೂ ಫ಼ೀಸ್ ಕಟ್ಟಿಲ್ಲವೇ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್