ಶಿವಮೊಗ್ಗದಲ್ಲಿ ಪೊಲೀಸ್ ಗುಪ್ತಚರ ಇಲಾಖೆ ಸಂಪೂರ್ಣ ವಿಫಲ : ಚಕ್ರವರ್ತಿ ಸೂಲಿಬೆಲೆ

ಶಿವಮೊಗ್ಗದಲ್ಲಿ ಗುಪ್ತಚರ ಇಲಾಖೆಯಿಂದ ಮಾಹಿತಿ ಸಂಗ್ರಹಿಸುವಲ್ಲಿ ವಿಫಲವಾಗಿದೆ ಎಂದು ಯುವ ಬ್ರಿಗೇಡ್ ನ ಸಂಸ್ಥಾಪಕ ಚಕ್ರವರ್ತಿ ಸೂಲಬೆಲಿ ಅಭಿಪ್ರಾಯಪಟ್ಟರು.ಇಂದು ಮೃತ ಹರ್ಷನ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ ಕಾರ್ಯಕರ್ತರ ಹಲ್ಲೆ ಕೊಲೆಯಾಗಿದೆ. ಕೊಲೆಯ ಹಿಂದೆ ಸರ್ಕಾರ ಹಾಗೂ ಗುಪ್ತಚರ ಇಲಾಖೆಯ ವಿಫಲವಾಗಿದೆ ಎಂದರು.ಶಿವಮೊಗ್ಗ ಯಾವತ್ರು ಶಾಂತವಾಗಿಲ್ಲ. ಮುಸ್ಲಿಂ ಸಂಘಟನೆಗಳು ಯಾವಾಗಲೂ ಆಕ್ಟಿವ್ ಆಗಿರುವ ಜಿಲ್ಲೆ ಶಿವಮೊಗ್ಗ ಸರ್ಕಾರ ಕಣ್ಣು ಹೊರೆಸುವ ಕೆಲಸ ಮಾಡುತ್ತಿದೆ. ಈ ಹಿಂದೆ ಇರುವ ವ್ಯವಸ್ಥೆಯನ್ನ ಬೇರು ಸಮೇತ ಕಿತ್ತಾಕಬೇಕಿದೆ. ಮೂರು ಜನರ ಬಂಧನವಾಗಿದೆ, ಇದರ ಹಿಂದೆ ಇರುವವರನ್ನ ಮಟ್ಟ ಮಾಡಬೇಕಿದೆ. ಇದು ಹೋಮ್ ಮಿನಿಸ್ಟರ್ ತವರು ಜಿಲ್ಲೆ ಇಲ್ಲಿ ಕೋಮುಗಲಭೆ ನಡೆದಿರುವುದು. ಅದರಲ್ಲಿ ಹಿಂದೂ ಕಾರ್ಯಕರ್ತ ಹರ್ಷನ ಕೊಲೆ ಆಗಿರುವುದು ದುರಂತವೆಂದರು.

ಸರ್ಕಾರದಲ್ಲಿ ನಾನು ಕೇಳಿಕೊಳ್ಳುತ್ತೇನೆ, ಹಿಂದೂಗಳ ರಕ್ಷಣೆ ನೀವೇ ಮಾಡುತ್ತೀರೋ, ನಾವೇ ಮಾಡಿಕೊಳ್ಳಬೇಕಾ ಹೇಳಿ ಎಂದ ಸೂಲಿಬೆಲೆ ಅಕ್ಟರ್, ಬಾಬರ್ ನ ಕಾಲಕ್ಕೆ ನಾವು ತೆರಳುತ್ತಿದ್ದೇವೋ ಎಂಬ ಅನುಮಾನ ಶುರುವಾಗಿದೆ. ಸರ್ಕಾರದ ನಿರ್ವೀಯ್ರತೆ ಬಹಳಷ್ಟು ಇದೆ ಎಂದರು.ಗಾಜನೂರಿನಲ್ಲಿ ವಿಶ್ವನಾಥ್ ಎಂಬ ಹಿಂದೂ ಯುವಕನ ಕೊಲೆಯಾಯ್ತು, ಗಣೇಶನ ಗಲಾಟೆಗಳಲ್ಲೂ ಹಿಂದೂ ಯುವಕರ ಕೊಲೆಯಾಗಿದೆ. ಈ ಘಟನೆಗಳ ಹಿಂದೆಲ್ಲಾ ಪಿಎಫ್ಐ ಸಂಘಟನೆ ಕೈವಾಡವಿದೆ. ಹೀಗಿದ್ದರೂ, ಸರ್ಕಾರಗಳು ಹಿಂದೂಗಳಿಗೆ ರಕ್ಷಣೆ ನೀಡಿಲ್ಲ, ನೀಡುತ್ತಿಲ್ಲ. ಹರ್ಷನ ಕೊಲೆಯ ಹಿಂದೆ ಸರ್ಕಾರ ಹಾಗೂ ಗುಪ್ತಚರ ಇಲಾಖೆ ಸಂಪೂರ್ಣ ವಿಫಲತೆ ಎದ್ದು ಕಾಣುತ್ತಿದೆ. ಹಿಜಾದಿ ಭೂತ ಮುಸ್ಲಿಂ ಯುವಕರನ್ನು ಕಾಡುತ್ತಿದೆ. ಇದು ತುಂಬಾ ಅಪಾಯಕಾರಿ ಬೆಳವಣಿಗೆ ಯುವಕರಲ್ಲಿರುವ ರ್ಯಾಡಿಕಲ್ ಮೈಂಡ್ ನಿಂದ ಹೊರತರಬೇಕಾಗಿದೆ. ಕೊಲೆಗೆ ಸಂಬಂಧಿಸಿದಂತೆ ಕೆಲವರನ್ನು ಬಂಧಿಸಿದರೆ ಸಾಲದು, ನಿಷ್ಪಕ್ಷ ತನಿಖೆಯಾಗಿ ಇದರ ಹಿಂದೆ ಇರುವ ಸಂಘಟನೆಗಳನ್ನು ಬಯಲಿಗೆಳೆಯಬೇಕು ಎಂದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್ ವರದಿ ಅನ್ವಯ? ಇಲ್ಲಿದೆ ಸಂಪೂರ್ಣ ಪಟ್ಟಿ

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್…

8 hours ago

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?…

15 hours ago

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ Former Karnataka Education Minister and Tiptur…

1 day ago

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ Sagara Rural Police arrested…

1 day ago

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan…

1 day ago

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in…

1 day ago