ಶಿವಮೊಗ್ಗದ ಅಮೀರ್ ಅಹಮದ್ ವೃತ್ತದ ಸಮೀಪವಿರುವ ಸುಲ್ತಾನ್ ಮಾರ್ಕೆಟ್’ನಲ್ಲಿ ನಡುರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಸುಲ್ತಾನ್ ಮಾರ್ಕೆಟ್’ನ ಗುಜರಿ ಅಂಗಡಿಗಳ ಮುಂದೆ ಇಡಲಾಗಿದ್ದ ಟಯರ್ ಮತ್ತು ಇತರೆ ಗುಜರಿಗೆ ವಸ್ತುಗಳು ಧಗಧಗ ಹೊತ್ತಿ ಉರಿದಿವೆ. ಸ್ಥಳೀಯರು ಇದನ್ನು ಗಮನಿಸಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದರು.
ಬೆಂಕಿ ಹೊತ್ತುಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಗುಜರಿ ವಸ್ತುಗಳು ಇರಿಸಿದ್ದ ಸ್ಥಳದ ಪಕ್ಕದಲ್ಲಿ ವಿದ್ಯುತ್ ಟ್ರಾನ್ಸ್’ಫಾರ್ಮರ್ ಇದೆ. ಇದರಿಂದ ಕಿಡಿ ಬಿದ್ದು ಬೆಂಕಿ ಹೊತ್ತುಕೊಂಡಿರುಬಹುದು ಅಥವಾ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಬಗ್ಗೆ ಶಂಕೆ ಇದೆ. ಈ ಕುರಿತು ತನಿಖೆ ನಡೆಯುತ್ತಿದೆ.
ಕೂಡಲೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಡಿಎಫ್ಒ ಅಶೋಕ್ ಕುಮಾರ್ ಮಾರ್ಗದರ್ಶನದಲ್ಲಿ ಠಾಣಾಧಿಕಾರಿ ಪ್ರವೀಣ್ ನೇತೃತ್ವದಲ್ಲಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.
ಮಾರ್ಡನ್ ಟಾಕೀಸ್ ಹಿಂಭಾಗದಲ್ಲಿ ದೊಡ್ಡ ಮಟ್ಟದಲ್ಲಿ ಗುಜರಿ ಅಂಗಡಿಗಳಿವೆ. ಗುಜರಿ ವಸ್ತುಗಳನ್ನು ಸರಿಯಾಗಿ ನಿರ್ವಹಣೆ ಮಾಡದೆ ಬೇಕಾಬಿಟ್ಟಿ ರಸ್ತೆಗಳಲ್ಲಿ ಇಡಲಾಗುತ್ತಿದೆ. ಇದರಿಂದ ರಸ್ತೆಗಳಲ್ಲಿ ವಾಹನಗಳು ಮತ್ತು ಜನ ಸಂಚಾರಕ್ಕೆ ಸಮಸ್ಯೆ ಉಂಟಾಗುತ್ತಿದೆ. ಇಂತಹ ಅವಘಡ ಸಂಭವಿಸಿದರೆ, ಬೆಂಕಿಯು ಅತ್ಯಂತ ವೇಗವಾಗಿ ವ್ಯಾಪಿಸಿಕೊಳ್ಳಲು ಅನುವಾಗುತ್ತದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್