ಶಿವಮೊಗ್ಗದ ಬಾಪೂಜಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಎನ್ಎಸ್ಯುಐ ಕಾರ್ಯಕರ್ತರು ರಾಷ್ಟ್ರ ಧ್ವಜಾರೋಹಣ ಮಾಡಿದರು. ನಿನ್ನೆ ಹಿಜಾಬ್ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಇಲ್ಲಿ ಕೇಸರಿ ಧ್ವಜ ಹಾರಿಸಲಾಗಿತ್ತು.
ನಿನ್ನೆ(ಮಂಗಳವಾರ) ಕೇಸರಿ ಧ್ವಜ ಹಾರಿಸಿದ್ದ ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಮುಂಜಾನೆ ಭಾರತದ ರಾಷ್ಟ್ರೀಯ ವಿದ್ಯಾರ್ಥಿಗಳ ಒಕ್ಕೂಟದ (ಎನ್ಎಸ್ಯುಐ) ಕಾರ್ಯಕರ್ತರು ರಾಷ್ಟ್ರಧ್ವಜ ಹಾರಿಸಿದರು.
ನಿನ್ನೆ ಬಾಪೂಜಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್-ಕೇಸರಿ ಶಾಲು ವಿವಾದ ತಾರಕಕ್ಕೇರಿದ್ದು, ಕಲ್ಲು ತೂರಾಟವೂ ನಡೆದಿತ್ತು. ಈ ವೇಳೆ ಕೆಲವು ವಿದ್ಯಾರ್ಥಿಗಳು ಕಾಲೇಜು ಅವರಣದಲ್ಲಿನ ಧ್ವಜಸ್ತಂಭದಲ್ಲಿ ಕೇಸರಿ ಧ್ವಜ ಹಾರಿಸಿದ್ದರು. ನಂತರ ಇದನ್ನು ಪೊಲೀಸರು ತೆರವುಗೊಳಿಸಿದ್ದರು.
ಇಂದು ಬೆಳಗ್ಗೆ ಎನ್ಎಸ್ಯುಐನ ರಾಜ್ಯ ಕಾರ್ಯದರ್ಶಿ ಚೇತನ್, ಮಧುಸೂಧನ್, ಜಿಲ್ಲಾಧ್ಯಕ್ಷ ವಿಜಯ್ ಸೇರಿದಂತೆ ಇನ್ನಿತರರು ಸೇರಿ ರಾಷ್ಟ್ರ ಧ್ವಜ ಹಾರಿಸಿದ್ದಾರೆ.
ಈ ವಿಚಾರವನ್ನು ಕಾಲೇಜಿನ ವಾಚ್ಮ್ಯಾನ್ ಪ್ರಾಂಶುಪಾಲರಿಗೆ ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕಾಗಮಿಸಿದ ಪ್ರಾಂಶುಪಾಲ ಧಜಂಜಯ್, ಎಸ್ಪಿ ಲಕ್ಷ್ಮಿ ಪ್ರಸಾದ್ ಹಾಗೂ ಕೋಟೆ ಪೊಲೀಸ್ ಠಾಣೆ ಪಿಐ ಚಂದ್ರಶೇಖರ್ ಅವರಿಗೆ ಮಾಹಿತಿ ನೀಡಿದ್ದಾರೆ. ನಂತರ ರಾಷ್ಟ್ರ ಧ್ವಜವನ್ನು ಗೌರವಯುತವಾಗಿ ಕೆಳಗಿಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್