ಶಿವಮೊಗ್ಗ ಜಿಲ್ಲೆ ಎಸ್ಪಿ ವರ್ಗಾವಣೆ ಸುದ್ದಿ ಕೇವಲ ಊಹಾಪೋಹ : ಗೃಹ ಸಚಿವ ಆರಗ ಜ್ಞಾನೇಂದ್ರ

ಜಿಲ್ಲೆಯ ಧಕ್ಷ ರಕ್ಷಣಾಧಿಕಾರಿ ಡಾ.ಬಿ.ಎಂ.ಲಕ್ಷ್ಮೀ ಪ್ರಸಾದ್ ವಿರುದ್ಧ ಹಬ್ಬಿರುವ ಊಹಾಪೂಹಗಳಿಗೆ ಬ್ರೇಕ್ ಬಿದ್ದಿದೆ. ಹಿಂದೂ ಯುವಕ ಹರ್ಷನ ಕಗ್ಗೊಲೆಯಲ್ಲಿ ನಡೆದ‌ ಗಲಭೆ‌ ಮತ್ತು ಗೃಹಸಚಿವ ಆರಗ ಜ್ಞಾನೇಂದ್ರ ನಗರ ಪೊಲೀಸ್ ಠಾಣೆಯ ಆಡಿಟಿಂಗ್ ವರದಿಗಳನ್ನ ಕೇಳಿರುವ ಹಿನ್ನಲೆಯಲ್ಲಿ ಎಸ್ಪಿ ತಲೆದಂಡವಾಗಲಿದೆ ಎಂಬ‌ ವದಂತಿಗೆ ಖುದ್ದು ಗೃಹಸಚಿವರೇ
ಅಲ್ಲಗೆಳೆದಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಠಾಣೆಗಳಲ್ಲಿ ಆಡಿಟಿಂಗ್ ವರದಿ ಕೇಳಿರುವುದು ಹರ್ಷನ ಕೊಲೆಯನ್ನ ಒಂದು ಗ್ಯಾಂಗ್ ನಡೆಸಿದೆ. ಶಿವಮೊಗ್ಗ ಎಂದರೆ ರೌಡಿಗಳ ಬ್ರೀಡಿಂಗ್ ಸೆಂಟರ್ ಎಂದು ಹೇಳಲಾಗುತ್ತಿದೆ.

ಆದರೆ ಸುಂಸ್ಕೃತ ಜಿಲ್ಲೆ ಶಿವಮೊಗ್ಗ, ಹಂತಕರ ಜಿಲ್ಲೆಯಾಗಿ ಕಳಂಕ ತಟ್ಟಲು ಪೊಲೀಸ್ ಇಲಾಖೆ ಎಷ್ಟರ ಮಟ್ಟಿಗೆ ಪಾತ್ರವಹಿಸಿದೆ ಎಂದು ತಿಳಿಯಲು ಅಡಿಮಗ್ ನಡೆಸಲಾಗುತ್ತಿದೆ. ಡಿಜಿಗೆ ಮೊನ್ನೆನೇ ಪತ್ರಕೊಟ್ಟು ವಿಚಾರಣೆ ನಡೆಸಲು ಸೂಚಿಸಿದೆ ಈ ರೀತಿ ಅಪರಾಧದಲ್ಲಿ ಖಾಯಂ ಆಗಿ ಉಳಿಯಲು ಹೇಗೆ ಪೊಲೀಸ್  ಇಲಾಖೆ ಬಿಟ್ಟಿದ್ದಾರೆ ಎಂಬುದು ತಿಳಿಯಬೇಕಿದೆ ಎಂದರು.

ಈ ಹಂತಕರ ಗ್ಯಾಂಗ್ ನ್ನು ಊರಿನಲ್ಲಿ ತಿರುಗಲು ಹೇಗೆ ಬಿಟ್ಟಿದ್ದಾರೆ. ಇವರನ್ನು ನಿಯಂತ್ರಿಸಲು ಯಾಕೆ ಇಲಾಖೆ ಕೈಯಲ್ಲಿ ಆಗಿಲ್ಲ. ಹಂತಕರಾಗಿ ಬೆಳೆಯುವಲ್ಲಿ ಪೊಲೀಸರ ಪಾಲೇನಿದೆ? ಎಂಬುದನ್ನ ಪತ್ತೆಹಚ್ಚಬೇಕಿದೆ.

ಯಾವುದೇ ಘಟನೆ ಆದಾಗ‌ ಪೊಲೀಸರ ವೈಫಲ್ಯ, ಸರ್ಕಾರದ ವೈಫಲ್ಯವೆಂಬ ಮಾತು ಕೇಳಿ ಬರುತ್ತಿದೆ. ಅಪರಾಧವನ್ನ ತಡೆಯುವಂತಹವರು ಅಪರಾಧ ಜಗತ್ತಿನಲ್ಲಿ ಕೈಜೋಡಿಸಿದರೆ ತಡೆಯುವವರು ಯಾರು ಎಂಬ ಪ್ರಶ್ನೆ ಉದ್ಭವವಾಗುತ್ತದೆ. ಹಾಗಾಗಿ ಈ ಆದೇಶ ಹೊರಡಿಸಲಾಗಿದೆ ಎಂದರು.

ಇದನ್ನ ತಡೆಯಲು ಆಡಿಟಿಂಗ್ ವರದಿ ಕೇಳಲಾಗಿದೆ. ಅಪರಾಧಿ ಜಗತ್ತಿನಲ್ಲಿ ಪೊಲೀಸರ ಪಾತ್ರ ಕಂಡುಬಂದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಪೊಲೀಸ್ ಇಲಾಖೆಯಲ್ಲಿಯೇ ಇರದಂತೆ ನೋಡಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಇದರ ಜೊತೆಗೆ ಎಸ್ಪಿ ಅವರ ವರ್ಗಾವಣೆ ಊಹಾ ಪೂಹಾವೆಂದು ಸ್ಪಷ್ಟಪಡಿಸಿದರು.

ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ 👇👇👇


ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

6 hours ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

6 hours ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

6 hours ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

12 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

13 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

1 day ago