ಸಮನ್ವಯ ಕವಿ ನಾಡೋಜ ಚೆನ್ನವೀರ ಕಣವಿ ನಿಧನ

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಂತ ನಾಡೋಜ ಚೆನ್ನವೀರ ಕಣವಿ (93), ಇಂದು ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.

ಅನಾರೋಗ್ಯದಿಂದಾಗಿ ಜನವರಿ 14ರಿಂದ ಧಾರವಾಡದ ಎಸ್ ಡಿ ಎಂ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ನಾಡೋಜ ಚೆನ್ನವೀರ ಕಣವಿ ದಾಖಲಾಗಿ, ಪಡೆಯುತ್ತಿದ್ದರು. ನಿನ್ನೆ ಅವರ ಸ್ಥಿತಿ ಗಂಭೀರಗೊಂಡಿರೋದಾಗಿ ತಿಳಿಸಲಾಗಿತ್ತು. ಈ ಬಳಿಕ ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ಇನ್ನಿಲ್ಲವಾಗಿದ್ದಾರೆ.

ಅಂದಹಾಗೇ, ಚೆನ್ನವೀರ ಕಣವಿ ಕನ್ನಡದ ಸಮನ್ವಯ ಕವಿ, ಸುನೀತಗಳ ಸಾಮ್ರಾಟ್‌ಎಂದು ಪ್ರಸಿದ್ಧಿರಾದ ಕನ್ನಡದ ಖ್ಯಾತ ವಿದ್ವಾಂಸ ಮತ್ತು ಹೊಸಗನ್ನಡ ಕಾವ್ಯದ ಪ್ರಮುಖ ಕವಿಗಳಲ್ಲಿ ಒಬ್ಬರಾಗಿದ್ದರು.

ಚನ್ನವೀರ ಕಣವಿಯವರು ಗದಗ ಜಿಲ್ಲೆಯ ಹೊಂಬಳ ಗ್ರಾಮದಲ್ಲಿ 1928 ರ ಜೂನ್ 28ರಂದು ಜನಿಸಿದರು. ತಂದೆ ಸಕ್ಕರೆಪ್ಪ ಮತ್ತು ತಾಯಿ ಪಾರ್ವತವ್ವ. ತಂದೆ ಸಕ್ಕರೆಪ್ಪ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದರು. ಧಾರವಾಡದಲ್ಲಿಯೆ ಮಾಧ್ಯಮಿಕ ಹಾಗು ಕಾಲೇಜು ಶಿಕ್ಷಣ ಪೂರೈಸಿ ಕಣವಿಯವರು 1952ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪದವಿ ಪಡೆದು ಆಗ ತಾನೆ ಆರಂಭವಾಗಿದ್ದ ವಿಶ್ವವಿದ್ಯಾಲಯದ ಪ್ರಸಾರಾಂಗ ವಿಭಾಗದ ಕಾರ್ಯದರ್ಶಿಯಾಗಿದ್ದರು.

1956ರ ವೇಳೆಗೆ ಅದೇ ವಿಭಾಗದ ನಿರ್ದೇಶಕರಾಗಿ 1983 ರವರೆಗೆ ಸೇವೆ ಸಲ್ಲಿಸಿದರು. ಅವರ ಪತ್ನಿ ಶಾಂತಾದೇವಿ ಅವರು ಕೂಡ ಸಾಹಿತ್ಯ ಸಂಸ್ಕೃತಿಯ ಒಲವುಳ್ಳ ದೊಡ್ಡ ಮನೆತನದಿಂದ ಬಂದವರು.

ಚನ್ನವೀರ ಕಣವಿಯವರು ವಿಮರ್ಶೆಯನ್ನು ಬರೆದಿದ್ದರಾದರೂ ಪ್ರಧಾನವಾಗಿ ಅವರು ಕವಿಯಾಗಿದ್ದರು. ಚೆನ್ನವೀರ ಕಣವಿಯವರು ಕವಿಯಾಗಿ ಪ್ರಕಟವಾಗಿದ್ದು ನವೋದಯದ ‘ನಡುಹಗಲ’ ಕಾಲದಲ್ಲಿ. ಬೇಂದ್ರೆ, ಕುವೆಂಪು, ಪು.ತಿ.ನ, ಮಧುರಚೆನ್ನ ಮೊದಲಾದವರ ಕಾವ್ಯ ಹೊಸದಾಗಿ ಕಾವ್ಯ ರಚನೆಗೆ ತೊಡಗುವವರನ್ನು ಗಾಢವಾಗಿ ಪ್ರಭಾವಿಸುತ್ತಿದ್ದ ಕಾಲ ಅದು.
ಕಣವಿ ಅವರ ಪ್ರಾರಂಭದ ರಚನೆಗಳಲ್ಲಿ ಇಂಥ ಪ್ರಭಾವಗಳ ನೆಲೆಯನ್ನು ಗುರುತಿಸಬಹುದಾಗಿದ್ದು, ಅವರ ಕಾವ್ಯದಲ್ಲಿ ರಮ್ಯ ಮನೋಧರ್ಮ, ಆದರ್ಶಪ್ರಿಯತೆ, ವ್ಯಕ್ತಿತ್ವ ನಿರ್ಮಾಣದ ಹಂಬಲಗಳು ವಿಶೇಷವಾಗಿ ಕಂಡು ಬರುತ್ತವೆ. 1949ರಲ್ಲಿ ಪ್ರಕಟವಾದ ‘ಕಾವ್ಯಾಕ್ಷಿ’, 1950ರಲ್ಲಿ ಪ್ರಕಟವಾದ ‘ಭಾವಜೀವಿ’ ಸಂಗ್ರಹಗಳಲ್ಲಿ ಈ ಎಲ್ಲ ಅಂಶಗಳನ್ನೂ ಗುರುತಿಸಬಹುದು.
1953ರಲ್ಲಿ ಕಣವಿಯವರ ಮೂರನೆಯ ಸಂಗ್ರಹ ‘ಆಕಾಶಬುಟ್ಟಿ’ ಪ್ರಕಟವಾಯಿತು. ಈ ಸಂಗ್ರಹದಲ್ಲಿ ಕಣವಿ ಅವರ ಆಸಕ್ತಿಗಳು ವಿಸ್ತಾರಗೊಳ್ಳುತ್ತಿರುವ ಸೂಚನೆಗಳಿವೆ. ಸಾಮಾಜಿಕತೆ ಈ ಸಂಗ್ರಹದಲ್ಲಿ ಗುರುತಿಸಲೆಬೇಕಾದ ಬಹುಮುಖ್ಯ ಅಂಶವಾಗಿದೆ. ಸಮಾಜದ ದೋಷಗಳನ್ನು ಕವಿ ಇಲ್ಲಿ ವ್ಯಗ್ರರಾಗಿ ಟೀಕೆಗೆ ಗುರಿ ಮಾಡುತ್ತಾರೆ. ವ್ಯಂಗ್ಯದ ಧಾಟಿ ಇಂಥ ಸಂದರ್ಭಗಳಲ್ಲಿ ಮುಖ್ಯವಾಗುತ್ತಿತ್ತು.

ಬಸವರಾಜ ಕಟ್ಟೀಮನಿ, ನಿರಂಜನ, ಎಕ್ಕುಂಡಿ ಮೊದಲಾದವರ ಸ್ನೇಹ ಸಂಪರ್ಕ ಮತ್ತು ಆಗ ಪ್ರಚಲಿತವಿದ್ದ ಪ್ರಗತಿಶೀಲ ಸಾಹಿತ್ಯ ಚಳವಳಿ ಅವರನ್ನು ಪ್ರಭಾವಿಸಿರಬಹುದು. ಆಕಾಶಬುಟ್ಟಿ ಸಂಗ್ರಹದಲ್ಲಿರುವ ಪ್ರಜಾಪ್ರಭುತ್ವ ಎಂಬ ಕವಿತೆ ಯನ್ನು ನಾವಿಲ್ಲಿ ವಿಶೇಷವಾಗಿ ನೆನೆಯಬೇಕು. ಪ್ರತಿಮಾನಿಷ್ಠವಾದ ಈ ಕವಿತೆ ಕಣವಿ ಅವರ ಮುಂದಿನ ಕಾವ್ಯದ ಮುನ್ಸೂಚನೆಯಂತಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

7 hours ago

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

14 hours ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

16 hours ago

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

19 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

24 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

1 day ago