ಹರತಾಳು ಗ್ರಾಮ ಪಂಚಾಯ್ತಿಯಲ್ಲಿ ಮಂಗಳವಾರ ಆಯೋಜಿಸಿದ್ದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಗೆ ಗ್ರಾಪಂ ಅಧ್ಯಕ್ಷರ ಸರ್ವಾಧಿಕಾರಿ ಧೋರಣೆ ಖಂಡಿಸಿ ಉಪಾಧ್ಯಕ್ಷರು ಮತ್ತು 6 ಜನ ಸದಸ್ಯರು ಗೈರಾಗಿದ್ದರು.
8 ಸದಸ್ಯ ಬಲದ ಹರತಾಳು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕಲ್ಲಿ ಯೋಗೇಂದ್ರಪ್ಪ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ ಹಮ್ಮಿಕೊಳ್ಳಲಾಗಿತ್ತು
ಅಧ್ಯಕ್ಷರಾದ ಕಲ್ಲಿ ಯೋಗೇಂದ್ರಪ್ಪ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ ವಸತಿ ಮನೆ ಹಂಚಿಕೆಯಲ್ಲಿ ತಾರತಮ್ಯ ಮಾಡುವ ಮೂಲಕ ಸದಸ್ಯ ಸ್ಥಾನಕ್ಕೆ ಹಕ್ಕು ಚ್ಯುತಿ ತರುವ ಪ್ರಯತ್ನ ಮಾಡಿದ್ದಾರೆ .ನರೇಗಾ ಯೋಜನೆ ಮತ್ತು ಅನುದಾನ ಹಂಚಿಕೆಯಲ್ಲೂ ತಾರತಮ್ಯ ಮಾಡಲಾಗುತ್ತಿದೆ ಅಲ್ಲದೆ ಕೆಡಿಪಿ ಸಭೆ ನಿಗದಿ ಪಡಿಸುವ ಸಂಬಂಧ ಮುಂಚಿತವಾಗಿ ಸಾಮಾನ್ಯ ಸಭೆಯಲ್ಲಿ ಚರ್ಚಿಸದೆ ಏಕಾಏಕಿ ಸಭೆ ಗೊತ್ತು ಮಾಡಿದ್ದಾರೆ ಎಂದು ಸದಸ್ಯರು ಆರೋಪಿಸಿ ಸಭೆಗೆ ಗೈರಾಗಿದ್ದಾರೆ.
8ಸದಸ್ಯ ಬಲದ ಹರತಾಳು ಗ್ರಾಮ ಪಂಚಾಯಿತಿನಲ್ಲಿ 5 ಜನ ಹೊಸ ಸದಸ್ಯರಿದ್ದಾರೆ. ಸದಸ್ಯರಿಗೆ ಕೆಡಿಪಿ ಸಭೆ ಸೇರಿದಂತೆ ಗ್ರಾಮ ಪಂಚಾಯಿತಿ ಕಾರ್ಯವೈಖರಿ ಇನ್ನಷ್ಟೆ ತಿಳಿಯಬೇಕಿದೆ. ಕೆಡಿಪಿ ಸಭೆಯಲ್ಲಿ ಯಾರು ಭಾಗವಹಿಸುತ್ತಾರೆ ? ನಮ್ಮ ವಾರ್ಡ್ ನ ಕುಂದುಕೊರತೆ ಏನು? ಯಾವ ಕುಂದುಕೊರತೆಯನ್ನು ಸಭೆಯಲ್ಲಿ ಪ್ರಸ್ತಾಪಿಸಬಹುದು ? ಈ ಎಲ್ಲದರ ಬಗ್ಗೆ ಮುಂಚಿತವಾಗಿ ಚರ್ಚಿಸಬೇಕಿತ್ತು ಆದರೆ ಅಧ್ಯಕ್ಷರು ಅದಕ್ಕೆ ಅವಕಾಶ ನೀಡಿಲ್ಲ ಸದಸ್ಯರಿಗೆ ಗೌರವ ಸಿಗದ ಹಿನ್ನಲೆಯಲ್ಲಿ ಗೈರಾಗಿದ್ದೇವೆ ಎಂದು ಸದಸ್ಯರು ಸ್ಪಷ್ಟಪಡಿಸಿದ್ದಾರೆ.
ಅಧ್ಯಕ್ಷರಾದ ಕಲ್ಲಿ ಯೋಗೇಂದ್ರಪ್ಪ, ಪಿಡಿಒ ಚೇತನ್ ದೇವಾಂಗ, ಸಿಡಿಪಿಒ ನಸೀಮಾಬಾನು, ತೋಟಗಾರಿಕೆ ಅಧಿಕಾರಿ ಚಂದ್ರಶೇಖರ್, ಕೃಷಿ ಅಧಿಕಾರಿ ಸೈಯದ್, ಗ್ರಾಮಲೆಕ್ಕಾಧಿಕಾರಿ ಶೋಭಾ, ಸಿಆರ್ ಪಿ ಸುಧಾಕರ್ ಸಭೆಯಲ್ಲಿ ಭಾಗವಹಿಸಿದ್ದರು.
8 ಸದಸ್ಯ ಬಲ ಇರುವ ಹರತಾಳು ಗ್ರಾಪಂ ನಲ್ಲಿ ಉಪಾಧ್ಯಕ್ಷೆ ನಾಗರತ್ನ ವಾಸುದೇವ, ಸದಸ್ಯರಾದ ಸಾಕಮ್ಮ ಮನೋಹರ್, ನಾರಿ ರವಿ, ಕಣಕಿ ನಾರಾಯಣಪ್ಪ, ಪ್ರೇಮ ಪುರುಷೋತ್ತಮ, ಸತ್ಯವತಿ ಚಂದ್ರಪ್ಪ, ಶಿವಮೂರ್ತಿ ಗೈರಾಗಿದ್ದರು.
ರವಿ. ಹರತಾಳು ಗ್ರಾಪಂ ಸದಸ್ಯ
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್