Breaking
13 Jan 2026, Tue

ಹಿಂದೂ ಕಾರ್ಯಕರ್ತ ಹರ್ಷನ ಕೊಲೆ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಹಾಗೂ SDPI,PFI,CFI ಎಂಬ ಸಮಾಜಘಾತುಕ ಸಂಘಟನೆಗಳನ್ನು ನಿಷೇದಿಸುವಂತೆ ರಿಪ್ಪನ್ ಪೇಟೆ ಬಜರಂಗದಳ ಆಗ್ರಹ :

ರಿಪ್ಪನ್ ಪೇಟೆ : ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷನನ್ನು ಕೊಲೆ ಮಾಡಿದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಹಾಗೂ ಸಮಾಜ ಘಾತುಕ  ಸಂಘಟನೆಗಳಾದ sdpi,pfi ಹಾಗೂ cfi ಸಂಘಟನೆಗಳನ್ನು ರಾಜ್ಯಾದ್ಯಂತ ನಿಷೇಧಿಸುವಂತೆ ಒತ್ತಾಯಿಸಿ ರಿಪ್ಪನ್ ಪೇಟೆ ವಿಶ್ವ ಹಿಂದೂ ಪರಿಷತ್,ಬಜರಂಗದಳ ಸಂಘಟನೆಗಳು ರಾಜ್ಯ ಸರ್ಕಾರವನ್ನು ಆಗ್ರಹಿಸಿ ಇಂದು ರಿಪ್ಪನ್ ಪೇಟೆ ವಿನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿ ನಂತರ ಮೆರವಣಿಗೆ ಮೂಲಕ ನಾಡಕಛೇರಿಗೆ ತೆರಳಿ ಉಪ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.


ಇತ್ತೀಚಿನ ದಿನಗಳಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಎಸ್ ಡಿಪಿಐ, ಪಿಎಫ್ ಐ ಮತ್ತು ಪಿಎಫ್ ಐ ಗೂಂಡಾಗಳು ಹಲ್ಲೆ, ಕೊಲೆ ಮುಂತಾದ ಕಾನೂನು ಬಾಹಿರ ಚಟುವಟಿಕೆಗಳನ್ನು ಮಾಡುತ್ತಾ ಬಂದಿರುತ್ತಾರೆ .ಇದರ ಮುಂದುವರೆದ ಭಾಗವಾಗಿ ನಿನ್ನೆ ಶಿವಮೊಗ್ಗದ ಬಜರಂಗದಳ ಕಾರ್ಯಕರ್ತರನ್ನು ಅಮಾನುಷವಾಗಿ ಭೀಕರವಾಗಿ ಕೊಲೆ ಮಾಡಿತ್ತು ಇದರಿಂದ ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಎಲ್ಲಾ ಪ್ರಯತ್ನಗಳನ್ನು ಮೇಲ್ಕಂಡ ಸಂಘಟನೆಗಳು ಮಾಡುತ್ತಿದ್ದು ಕೂಡಲೇ ಹರ್ಷನನ್ನು ಕೊಲೆ ಮಾಡಿದ ಆರೋಪಿಗಳನ್ನು ಬಂಧಿಸಿ ಹಾಗೂ ಎಸ್ ಡಿಪಿಐ ಪಿಎಫ್ ಐ ಮತ್ತು ಪಿಎಫ್ ಐ ಸಂಘಟನೆಯನ್ನು ನಿಷೇಧಿಸಿ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವಂತೆ ಅಗ್ರಹಿಸಲಾಯಿತು.

ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷನ ಕೊಲೆ ಆರೋಪಿಗಳನ್ನು ಬಂಧಿಸುವಲ್ಲಿ ವಿಳಂಬ ನೀತಿ ಅನುಸರಿಸಿದಲ್ಲಿ ಮುಂದೆ ವಿಶ್ವ ಹಿಂದು ಪರಿಷತ್, ಬಜರಂಗದಳ ಹಾಗೂ ಇನ್ನಿತರ ಹಿಂದೂ ಸಂಘಟನೆಗಳು ಉಗ್ರವಾದ ಹೋರಾಟವನ್ನು ಮಾಡುವುದು ಅನಿವಾರ್ಯವಾಗುತ್ತದೆ ಎಂದು ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದರು.

ಈ ಸಂಧರ್ಭದಲ್ಲಿ ಬಜರಂಗದಳ ರಿಪ್ಪನ್ ಪೇಟೆ ಘಟಕದ ಅಧ್ಯಕ್ಷರಾದ ದೇವರಾಜ್ ,ಕಾರ್ಯದರ್ಶಿ ರಾಘವೇಂದ್ರ,ಸಹ ಕಾರ್ಯದರ್ಶಿ ಮಂಜು ಸಿಂಗ್,ರಂಜನ್ ಕುಮಾರ್ , ಗ್ರಾಪಂ ಸದಸ್ಯರಾದ ನಿರೂಪ್ ಕುಮಾರ್,ಸುಂದರೇಶ್, ಮುಖಂಡರಾದ ಬೆಳ್ಳೂರು ತಿಮ್ಮಪ್ಪ, ಜಂಬಳ್ಳಿ ಗಿರೀಶ್,ಕೃಷ್ಣೋಜಿರಾವ್,
ಕಾರ್ತಿಕ್ ,ಅರ್ಜುನ್ ಹಾಗೂ ಇನ್ನಿತರರಿದ್ದರು..

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Leave a Reply

Your email address will not be published. Required fields are marked *

Exit mobile version