ಹೊಸನಗರ ವಿಧಾನಸಭೆ ಕ್ಷೇತ್ರ ಪುನರ್ ಸ್ಥಾಪಿಸುವ ಹೋರಾಟಕ್ಕೆ ಮತ್ತೆ ಕಹಳೆ ಮೊಳಗಿದ್ದು,ನಾಳೆ ಹೊಸನಗರದ ಹಳೆ ಕೋರ್ಟ್ ಸರ್ಕಲ್ ನಲ್ಲಿ ರಸ್ತೆ ತಡೆ ಹಮ್ಮಿಕೊಳ್ಳಲಾಗಿದೆ.
ಹೊಸನಗರ ವಿಧಾನಸಭಾ ಕ್ಷೇತ್ರ ಕಳೆದುಕೊಂಡು ಹಲವು ವರುಷಗಳೇ ಕಳೆದು ಹೋಗಿದೆ. ಹೊಸನಗರ ಕ್ಷೇತ್ರ ರಾಜ್ಯದ ಅತಿ ದೊಡ್ಡ ಕ್ಷೇತ್ರವಾಗಿದೆ. 175 ಕಿ.ಮೀ. ಉದ್ದವಿರುವ ಈ ಕ್ಷೇತ್ರ ಈಗ ಸಾಗರ ಹಾಗೂ ತೀರ್ಥಹಳ್ಳಿ ಕ್ಷೇತ್ರಗಳಿಗೆ ಹಂಚಿ ಹೋಗಿದ್ದರಿಂದ ಹೊಸನಗರ ತಾಲೂಕು ಅನಾಥವಾಗಿ ಪರಿಣಮಿಸಿದೆ.
2001 ರ ಕುಲದೀಪ್ ಸಿಂಗ್ ಕಮಿಟಿ ವರದಿ ಪ್ರಕಾರ ಜನಸಂಖ್ಯಾ ಆಧಾರದ ಮೇಲೆ ಹೊಸನಗರವನ್ನ ವಿಧಾನಸಭಾ ಪಟ್ಟಿಯಿಂದ ಕೈ ಬಿಡಲಾಯಿತು.
ಆದರೆ ಕೆಲವು ತಿಂಗಳುಗಳಿಂದ ಮತ್ತೆ ಹೊಸನಗರ ವಿಧಾನಸಭಾ ಕ್ಷೇತ್ರ ಹಿಂಪಡೆಯುವ ಹೋರಾಟದ ಕಿಚ್ಚು ಹತ್ತಿಕೊಂಡಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇಷ್ಟೇ ಅಲ್ಲದೆ ಕಳೆದ ಮೂರ್ನಾಲ್ಕು ತಿಂಗಳ ಹಿಂದೆ ಬೃಹತ್ ಹೋರಾಟವು ನೆಡೆದಿತ್ತು.
ಈಗ ಕೊರೊನಾ ಆರ್ಭಟ ಕಡಿಮೆಯಾಗುತ್ತಿದ್ದಂತೆ ಮತ್ತೆ ಹೊಸನಗರ ವಿಧಾನಸಭಾ ಕ್ಷೇತ್ರದ ಹೋರಾಟಕ್ಕೆ ಪುಷ್ಟಿ ದೊರೆತಂತಾಗಿದ್ದು ನಾಳೆ ಹೊಸನಗರದ ಕೋರ್ಟ್ ವೃತ್ತದ ಬಳಿ ರಸ್ತೆ ತಡೆ ಹಮ್ಮಿಕೊಂಡಿದ್ದು ಪಕ್ಷ ಜಾತಿ ಎನ್ನದೇ ಎಲ್ಲರೂ ಹೋರಾಟಕ್ಕೆ ಕೈ ಜೋಡಿಸಿದ್ದಾರೆ.
ಈ ಹೋರಾಟಕ್ಕೆ ತಾಲೂಕಿನ ಹಿರಿಯ ಮಾಜಿ ಶಾಸಕರಾದ ಬಿ ಸ್ವಾಮಿ ರಾವ್, ಮಾಜಿ ಶಾಸಕರಾದ ಜಿ ಡಿ ನಾರಾಯಣಪ್ಪ , ಕಲಗೊಡು ರತ್ನಾಕರ್, ಸುರೇಶ್ ಸ್ವಾಮಿರಾವ್, ವೀರೇಶ್ ಆಲವಳ್ಳಿ,ಬಿ ಜಿ ಚಂದ್ರಮೌಳಿ, ಹಾಗೂ ಎಲ್ಲ ಪಕ್ಷಗಳ ಮುಖಂಡರು ಭಾಗವಹಿಸಲಿದ್ದಾರೆ.
ಅತಿ ಹೆಚ್ಚು ಸಂಖ್ಯೆಯಲ್ಲಿ ಎಲ್ಲರೂ ಈ ಪ್ರತಿಭಟನೆಗೆ ಭಾಗವಹಿಸಬೇಕೆಂದು ಆಯೋಜಕರು ಮನವಿ ಮಾಡಿದ್ದಾರೆ.
ರಾಜ್ಯ ಕ್ಕೆ ಬೆಳಕು ನೀರು ಕೊಟ್ಟ ಊರು ಇಂದು ತನ್ನ ಅಸ್ತಿತ್ವ ಕ್ಕಾಗಿ ಹೋರಾಟ ಮಾಡುವ ಪರಿಸ್ಥಿತಿ ಬಂದು ಒದಗಿದೆ ಎನ್ನುವುದೆ ಒಂದು ದುರುದೃಷ್ಟಕರ ಸಂಗತಿ
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್