ಹೊಸನಗರ : ಸರ್ಕಾರವೇ ರಚಿಸಿದ ಶ್ರೀನಿವಾಸಾಚಾರಿ ಸಮಿತಿ ವರದಿ ಅನುಷ್ಠಾನ ಹಾಗೂ ಗುತ್ತಿಗೆ, ಹೊರಗುತ್ತಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಇಂದು ಹೊಸನಗರ ತಾಲ್ಲೂಕಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಪ್ಪು ಪಟ್ಟಿ ಕಟ್ಟಿಕೊಂಡು ಕರ್ತವ್ಯ ನಿರ್ವಹಿಸುವುದರ ಮೂಲಕ ಹೊರಗುತ್ತಿಗೆದಾರರು ಸಾಂಕೇತಿಕವಾಗಿ ಮುಷ್ಕರಕ್ಕೆ ಕರೆ ನೀಡಿದ ಘಟನೆ ಇಂದಿನಿಂದ ನಡೆಯುತ್ತಿದೆ.
2019 -20, 2020-21ರ ಸಮಯದಲ್ಲಿ ಕೋವೀಡ್-19 ವಿರುದ್ಧ ಹೋರಾಟಕ್ಕಾಗಿ ಗುತ್ತಿಗೆ, ಹೊರಗುತ್ತಿಗೆ ನೌಕರರನ್ನು ನಿಯೋಜನೆ ಮಾಡಿಸಿಕೊಂಡ ನೌಕರರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆರೋಗ್ಯ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಅಡಿಯಲ್ಲಿ ರಾಜ್ಯದಾದ್ಯಂತ ಕರ್ತವ್ಯ ನಿರ್ವಹಿಸುತ್ತಿರುವ ಸುಮಾರು 30 ಸಾವಿರಕ್ಕೂ ಅಧಿಕ ಗುತ್ತಿಗೆ ಮತ್ತು ಹೊರಗೆ ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದು, ಸಮಾನ ಕೆಲಸಕ್ಕೆ ಸಮಾನ ವೇತನ, ಸೇವಾ ಭದ್ರತೆ, ವರ್ಗಾವಣೆ, ಆರೋಗ್ಯ ಮತ್ತು ಜೀವ ವಿಮೆ ಸೇರಿದಂತೆ ವಿವಿಧ ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಗುತ್ತಿಗೆ, ಹೊರಗುತ್ತಿಗೆ ನೌಕರರ ಸಂಘದಿಂದ ಸರ್ಕಾರಕ್ಕೆ ಒತ್ತಾಯಿಸುವುದಲ್ಲದೇ ಸಾಂಕೇತಿಕವಾಗಿ ಕಪ್ಪು ಪಟ್ಟಿ ಧಾರಣೆ ಮಾಡುವುದರ ಮೂಲಕ ಮುಷ್ಕರಕ್ಕೆ ಇಳಿಯುವ ಎಲ್ಲಾ ಮುನ್ಸೂಚನೆಯನ್ನು ತೋರ್ಪಡೆಗೊಳಿಸುವಲ್ಲಿ ಅನೇಕರು ಮುಂದಾಗಿದ್ದಾರೆ.
ಈ ಸಾಂಕೇತಿಕ ಮುಷ್ಕರಕ್ಕೆ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಗುತ್ತಿಗೆ ಮತ್ತು ಹೊರ ಗುತ್ತಿಗೆ ನೌಕರರಾಗಿ ಕೆಲಸ ನಿರ್ವಹಿಸುತ್ತಿರುವ ಸಂಘದ ಗೌರವಾಧ್ಯಕ್ಷರಾದ ಸೌಮ್ಯ ಹೆಬ್ಬಾರ್, ಅಧ್ಯಕ್ಷರಾದ ಪ್ರಶಾಂತ್.ಟಿ.ಕೆ, ಉಪಾಧ್ಯಕ್ಷರಾದ ಚಂದ್ರಪ್ಪ, ಕಾರ್ಯದರ್ಶಿ ಲಿಖಿತ್ ರಾಜ್, ಸಂಚಾಲಕರಾದ ಮಾಲಿನಿ, ಖಜಾಂಚಿ ಡಾ!ಫ್ರಭು ಸ್ವಾಮಿ ಸೇರಿದಂತೆ ಅನೇಕರಿದ್ದರು.
ವರದಿ :- ಪುಷ್ಪಾ ಜಾಧವ್ ಹೊಸನಗರ
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್