ಈ ಬಾರಿಯ ಕೇಂದ್ರ ಸರಕಾರದ ಬಜೆಟ್ ನಿರಾಶಾದಾಯಕ : ಅರ್ ಎ ಚಾಬುಸಾಬ್
ರಿಪ್ಪನ್ ಪೇಟೆ : ಕೇಂದ್ರ ಸರ್ಕಾರದ ಈ ವರ್ಷದ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಬಡವರ ಮತ್ತು ಮಧ್ಯಮ ವರ್ಗದವರ ನಿರೀಕ್ಷೆಯನ್ನು ಹುಸಿ ಯನ್ನಾಗಿ ಮಾಡಿದೆ ಎಂದು ರಾಜ್ಯ ಜ್ಯಾತ್ಯಾತೀತ ಜನತಾದಳದ ಮಾಜಿ ಪ್ರಧಾನ ಕಾರ್ಯದರ್ಶಿ ಅರ್ ಎ ಚಾಬುಸಾಬ್ ಅಸಮಧಾನ ವ್ಯಕ್ತಪಡಿಸಿದ್ದಾರೆ. ಜಗತ್ತನ್ನೇ ತಲ್ಲಣಗೊಳಿಸಿದ ಕೊರೊನಾ ಸೋಂಕಿನಿಂದ ಎರಡು ವರ್ಷಗಳಿಂದ ಲಕ್ಷಾಂತರ ಮಂದಿ ಸತ್ತಿದ್ದಾರೆ, ಕೋಟ್ಯಾಂತರ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ, ಜನರಿಗೆ ಏನಾದ್ರೂ ಕೊಡುಗೆ ಸಿಗುತ್ತೆ ಎಂಬ ನಿರೀಕ್ಷೆಯಿತ್ತು, ಆದರೆ ಈ ಬಜೆಟ್ ಬಡವರ, ಜನಸಾಮಾನ್ಯರ ಪರ…