ಜಿಲ್ಲಾ ಹಿಂದುಳಿದ ವರ್ಗ ಅಧಿಕಾರಿ ಕುಮಾರ್ ಹುಚ್ಚುತನಕ್ಕೆ ಬಲಿಪಶುಗಳಾದ ಮಹಿಳಾ ಅಡುಗೆಯವರು: ಹಣ್ಣು ತಿಂದವರಿಗಿಂತ ಸಿಪ್ಪೆ ತಿಂದವರಿಗೆ ಶಿಕ್ಷೆಯಾದ ಆನಂದಪುರ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ಹಾಸ್ಟೆಲಿನಲ್ಲಿ ನಡೆದ ರೋಚಕ ಸ್ಟೋರಿ

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಸಿದ್ದೇಶ್ವರ ಕಾಲೊನಿಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ಹಾಸ್ಟೆಲ್ ವಾರ್ಡನ್ ಮಮತಾ ವಿದ್ಯಾರ್ಥಿಗಳಿಗೆ ನೀಡಿದ ಮೂವತ್ತು ಕ್ಕೂ ಹೆಚ್ಚು ಬೆಡ್ ಶೀಟ್ ಗಳನ್ನು ಬಚ್ಚಿಟ್ಟಿದ್ದರು.ಇದರಿಂದ ಮನನೊಂದ ವಿದ್ಯಾರ್ಥಿಗಳು ಹಾಸ್ಟೆಲ್ ನಲ್ಲಿ ಅವ್ಯವಹಾರ ನಡೆದಿದೆಯೆಂದು ಬಂದಂತಹ ಜನಪ್ರತಿನಿಧಿಗಳೆದರು  ದೂರಿದ್ದರು ಜನ ಜನಪ್ರತಿನಿಧಿಗಳ ಎದುರು ವಿದ್ಯಾರ್ಥಿಗಳು ಹಾಸ್ಟೆಲ್ ನ ವಾರ್ಡನ್ ಮಮತಾ ವಿರುದ್ಧ ಹಲವು ದೂರುಗಳನ್ನು ನೀಡಿದ್ದರು. ಬೆಡ್ ಶೀಟ್ ಗಳನ್ನು ಕಳೆದ 1ವರ್ಷದಿಂದ ನೀಡಿಲ್ಲ ಹಾಗೂ ಬಕೆಟ್ ಹಾಗೂ ಜಗ್ಗು…

Read More

ಮಾಜಿ ಶಾಸಕ ಬೇಳೂರು ಗೋಪಾಲ ಕೃಷ್ಣರವರ ಹುಟ್ಟು ಹಬ್ಬದ ಅಂಗವಾಗಿ ಮಾನವೀಯತೆ ಮರೆದ ಅಭಿಮಾನಿ ಬಳಗ.

ಹೊಸನಗರ ತಾಲ್ಲೂಕಿನ ನಿಟ್ಟೂರು ಸಮೀಪದ ಗ್ರಾಮ ಪಂಚಾಯಿತಿಯ ಮಾವಿನ ಗುಡ್ಡದಲ್ಲಿ ಹಲವು ವರ್ಷಗಳಿಂದ ಮೇಲ್ಛಾವಣಿ ಇಲ್ಲದೆ ಸಂಪೂರ್ಣ ದುರಸ್ಥಿಯಾದ ಚಿಕ್ಕ ಮನೆಯಲ್ಲಿ ವಾಸವಾಗಿದ್ದ,  ವೃದ್ಧ ದಂಪತಿಗಳಿಗೆ ಇಂದು ಕೆಪಿಸಿಸಿ ವಕ್ತಾರರು, ಮಾಜಿ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರ ಜನ್ಮದಿನದ ಅಂಗವಾಗಿ ಗೋಪಾಲಕೃಷ್ಣ ಬೇಳೂರು ರವರ ಅಭಿಮಾನಿ ಬಳಗದಿಂದ ಇಂದು ಮೇಲ್ಛಾವಣಿ ಹಾಕಿಕೊಡಲಾಯಿತು.  ಮಕ್ಕಳಿಲ್ಲದ ವೃದ್ಧ ದಂಪತಿಗಳಾದ ತಿಮ್ಮಪ್ಪ ಮತ್ತು ಚೌಡಮ್ಮ  ಬೇರೆಯವರ ಹೊಲ ಗದ್ದೆಗಳಲ್ಲಿ ದುಡಿಯುವ ಮೂಲಕ ತಮ್ಮ ದಿನ ನಿತ್ಯದ ಬದುಕಿಗೆ ಅವಶ್ಯಕತೆ ಇರುವ ಆಹಾರ…

Read More

ಹಿಂದೂ ಕಾರ್ಯಕರ್ತ ಹರ್ಷನ ಕೊಲೆ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಹಾಗೂ SDPI,PFI,CFI ಎಂಬ ಸಮಾಜಘಾತುಕ ಸಂಘಟನೆಗಳನ್ನು ನಿಷೇದಿಸುವಂತೆ ರಿಪ್ಪನ್ ಪೇಟೆ ಬಜರಂಗದಳ ಆಗ್ರಹ :

ರಿಪ್ಪನ್ ಪೇಟೆ : ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷನನ್ನು ಕೊಲೆ ಮಾಡಿದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಹಾಗೂ ಸಮಾಜ ಘಾತುಕ  ಸಂಘಟನೆಗಳಾದ sdpi,pfi ಹಾಗೂ cfi ಸಂಘಟನೆಗಳನ್ನು ರಾಜ್ಯಾದ್ಯಂತ ನಿಷೇಧಿಸುವಂತೆ ಒತ್ತಾಯಿಸಿ ರಿಪ್ಪನ್ ಪೇಟೆ ವಿಶ್ವ ಹಿಂದೂ ಪರಿಷತ್,ಬಜರಂಗದಳ ಸಂಘಟನೆಗಳು ರಾಜ್ಯ ಸರ್ಕಾರವನ್ನು ಆಗ್ರಹಿಸಿ ಇಂದು ರಿಪ್ಪನ್ ಪೇಟೆ ವಿನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿ ನಂತರ ಮೆರವಣಿಗೆ ಮೂಲಕ ನಾಡಕಛೇರಿಗೆ ತೆರಳಿ ಉಪ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಇತ್ತೀಚಿನ ದಿನಗಳಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರನ್ನು…

Read More

ಸಚಿವ ಈಶ್ವರಪ್ಪ ಹೇಳಿಕೆ ಖಂಡಿಸಿ ಹೊಸನಗರದಲ್ಲಿ ಪ್ರತಿಭಟನೆ : ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹ

ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ರವರ ಹೇಳಿಕೆಯನ್ನು ಖಂಡಿಸಿ ಹೊಸನಗರ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಟ್ಟಣದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸಿ ತಾಲ್ಲೂಕು ಕಛೇರಿ ಎದುರು ಪ್ರತಿಭಟನೆ ನಡೆಸುವುದರ ಮೂಲಕ ತಹಶೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಮನವಿ ಸಲ್ಲಿಸುತ್ತಾ ಮಾತನಾಡಿದ ಎರಗಿ ಉಮೇಶ್, ರಾಷ್ಟ್ರ ಭಕ್ತರು ಎಂದು ಪ್ರಚಾರಕ್ಕೆ ಸೀಮಿತವಾಗಿರುವ ರಾಜ್ಯದ ಉನ್ನತ ಹುದ್ದೆಯನ್ನು ಅಲಂಕರಿಸಿದ ಕೆ ಎಸ್ ಈಶ್ವರಪ್ಪ ರಾಷ್ಟ್ರ ದ್ರೋಹಿ ಹೇಳಿಕೆ ನೀಡಿದ್ದಾರೆ….

Read More

ಭದ್ರಾವತಿ ನಗರದಲ್ಲಿ ಇಂದಿನಿಂದ ನಿಷೇಧಾಜ್ಞೆ ಜಾರಿ : ಶಾಲೆಗಳಿಗೆ ರಜೆ ಘೋಷಣೆ

ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಬೆನ್ನಿಗೆ ಶಿವಮೊಗ್ಗ ನಗರ ಪ್ರಕ್ಷುಬ್ದಗೊಂಡಿದೆ. ಮುಂಜಾಗ್ರತ ಕ್ರಮವಾಗಿ ಭದ್ರಾವತಿ ಪಟ್ಟಣದಲ್ಲಿಯು  ಜಾರಿಗೊಳಿಸಲಾಗಿದೆ. ಈ ಸಂಬಂಧ ತಹಶೀಲ್ದಾರ್ ಪ್ರದೀಪ್ ರವರು ಆದೇಶ ಹೊರಡಿಸಿದ್ದಾರೆ. ಫೆ.21ರ ಬೆಳಗ್ಗೆ 8 ಗಂಟೆಯಿಂದ ಫೆ.22ರ ರಾತ್ರಿ 10 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿಜನರು ಗುಂಪುಗೂಡುವಂತೆ ಇಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಭದ್ರಾವತಿ ನಗರದಲ್ಲಿಯು ರಾತ್ರಿ 11 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ದ್ವಿಚಕ್ರ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ರಾತ್ರಿ 9 ಗಂಟೆ ನಂತರ ಅಂಗಡಿ ಮುಂಗಟ್ಟು…

Read More

ಭಜರಂಗದಳದ ಕಾರ್ಯಕರ್ತನ ಭೀಕರ ಹತ್ಯೆ : ಶಿವಮೊಗ್ಗದಲ್ಲಿ ಪರಿಸ್ಥಿತಿ ಉದ್ವಿಗ್ನ !!! ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ

ಶಿವಮೊಗ್ಗದ ಕಾಮತ್ ಪೆಟ್ರೋಲ್ ಬಂಕ್ ಸಮೀಪದ ಭಾರತೀ ಕಾಲೋನಿಯಲ್ಲಿ ಭಾನುವಾರ ತಡರಾತ್ರಿ ಬಜರಂಗದಳ ಕಾರ್ಯಕರ್ತ ಹರ್ಷ (26)ಎಂಬಾತನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.  ಸ್ವಿಫ್ಟ್ ಕಾರಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಹರ್ಷನನ್ನು ಭಾರತಿ ನಗರದ ರವಿವರ್ಮ ಬೀದಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ದೊಡ್ಡಪೇಟೆ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ. ಮೃತ ಹರ್ಷ ಭಜರಂಗದಳ ಸೇರಿದಂತೆ ಹಾಗೂ ಹಿಂದೂ ಸಂಘಟನೆಯಲ್ಲಿ ಸಕ್ರಿಯ ಕಾರ್ಯಕರ್ತನಾಗಿದ್ದು,ಕೊಲೆಗೆ ಖಚಿತ ಕಾರಣ ತಿಳಿದು ಬಂದಿಲ್ಲ. ವೈಯಕ್ತಿಕ ದ್ವೇಷದ ಮೇಲೆ ಕೊಲೆ…

Read More

ಡಿ ಕೆ ಶಿವಕುಮಾರ್ ಶಿವಮೊಗ್ಗ ಎಸ್ಪಿ ಲಕ್ಷ್ಮಿ ಪ್ರಸಾದ್​ಗೆ ವಿಧಾನಸೌಧದಿಂದ ಕರೆ ಮಾಡಿದ ಹೇಳಿದ್ದೇನು ಗೊತ್ತಾ ?? ಈ ಸುದ್ದಿ ನೋಡಿ

ಸಚಿವ ಈಶ್ವರಪ್ಪರವರನ್ನು ಬೈಕ್ ರೃಾಲಿ ಮೂಲಕ ಸ್ವಾಗತಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ಏಕಿಲ್ಲ? ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಫೋನ್ ಮಾಡಿ ಕೇಳಿದ್ದಾರೆ. ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ ರಾಷ್ಟ್ರಧ್ವಜದ ಕುರಿತಾಗಿ ನೀಡಿದ್ದ ವಿವಾದಾತ್ಮಕ ಹೇಳಿಕೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಸುಮಾರು 15 ಯುವ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಶಿವಮೊಗ್ಗದಲ್ಲಿ ಸೆಕ್ಷನ್ 144 ಅನ್ವಯ ಜಾರಿಯಲ್ಲಿದ್ದ ನಿಷೇಧಾಜ್ಞೆ ಉಲ್ಲಂಘನೆ…

Read More

ಕನ್ನಡ ಚಲನಚಿತ್ರದ ಹಿರಿಯ ನಟ ‘ಕಲಾತಪಸ್ವಿ’ ರಾಜೇಶ್ ನಿಧನ :

ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್(86) ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಉಸಿರಾಟದ ಸಮಸ್ಯೆಯಿಂದಾಗಿ ಅವರನ್ನು ಫೆಬ್ರವರಿ 9 ರಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ನಿಧನರಾಗಿದ್ದಾರೆ. ರಾಜೇಶ್ ಅವರು ಏಪ್ರಿಲ್ 15, 1935 ರಲ್ಲಿ ಬೆಂಗಳೂರಿನಲ್ಲಿ ಜನಿಸಿದರು. ಪಿಡಬ್ಲ್ಯೂಡಿ ಇಲಾಖೆಯಲ್ಲಿ ಶೀಘ್ರಲಿಪಿ ಮತ್ತು ಬೆರಳಚ್ಚುಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಹೈಸ್ಕೂಲಿನ ದಿನಗಳಿಂದಲೇ ಅವರಿಗೆ ರಂಗಭೂಮಿಯ ಸೆಳೆತ ಅಪಾರವಾಗಿತ್ತು. ಅಂದಿನ ರಂಗಭೂಮಿ ಕಲಾವಿದರಾದ ತ್ಯಾಗರಾಜ ಭಾಗವತರ್, ಟಿ. ಆರ್. ಮಹಾಲಿಂಗಂ ಅಂತಹ ಕಲಾವಿದರ…

Read More

ಕಾಂಗ್ರೇಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಬೇಕಾದರೇ ಮುಖಂಡರುಗಳು ಪಕ್ಷದ ಇಚ್ಛಾನುಸಾರ ಸಂಘಟನೆ ಮಾಡಿ : ಕಾಗೋಡು ತಿಮ್ಮಪ್ಪ

ರಿಪ್ಪನ್‍ಪೇಟೆ: ಹಳೆಯ ಕಾಲ ಹೋಗಿದೆ, ಮೊದಲಿನ ಸ್ಥಿತಿ ಈಗಿಲ್ಲ ಕಾಂಗ್ರೇಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಬೇಕೆಂದರೆ ಮುಖಂಡರುಗಳು ಪಕ್ಷದ ಇಚ್ಛಾನುಸಾರ ಸಂಘಟನೆ ಮಾಡಬೇಕು ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಕಾಂಗ್ರೇಸ್ ಕಾರ್ಯಕರ್ತರಿಗೆ ತಾಕೀತು ಮಾಡಿದರು. ಪಟ್ಟಣದ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾಂಗ್ರೇಸ್ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ ಮುಖಂಡರುಗಳು ಕನಿಷ್ಟ ಒಂದು ತಿಂಗಳುಗಳ ಕಾಲ ಪ್ರತಿ ಬೂತ್‍ಗೆ ಹೋಗಿ ಕ್ರಿಯಾಶೀಲ ಕನಿಷ್ಟ 5 ಜನ ಕಾರ್ಯಕರ್ತರನ್ನು ಗುರುತಿಸಿ ಅವರ ಮುಖಾಂತರ ಸದಸ್ಯತ್ವ…

Read More

ಕಾಡು ಹಂದಿ ಭೇಟೆ : ಮಾಂಸ ಸಹಿತ ಐವರ ಬಂಧನ

ಕಾಡುಹಂದಿ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಐವರನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಹೆಡದಾಳು ಗ್ರಾಮದಲ್ಲಿ ನಡೆದಿದೆ. ಹೆಡದಾಳು ಗ್ರಾಮದ ಮಧುಕುಮಾರ್, ಈರೇಶ ಜಯಪ್ಪ, ಕೃಷ್ಣ, ವಿಜಯ ಕುಮಾರ್ ಬಂಧಿತ ಆರೋಪಿಗಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲಕ್ಷ್ಮೀಪುರ ಸಮೀಪದ ಲಕ್ಯಾ ಕ್ರಾಸ್ ಬಳಿ ಆಲ್ಟೋ ಕಾರನ್ನು ತಡೆದು ಶೋಧಿಸಿದಾಗ ಕಾಡು ಹಂದಿ ಮಾಂಸ ಪತ್ತೆಯಾಗಿದ್ದು, ಬಂಧಿತರಿಂದ 23 ಕೆಜಿ ಮಾಂಸ, ಬಂದೂಕು, ಸಜೀವ ಗುಂಡುಗಳು, ಕತ್ತಿ ಇತರೆ ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದೆ.

Read More