ದಿಗ್ವಿಜಯ ನ್ಯೂಸ್​ ನ ಸುದ್ದಿ ಸಂಪಾದಕ ಪ್ರಶಾಂತ್​ ರಿಪ್ಪನ್ ಪೇಟೆ ರವರಿಗೆ “ಆರೂಢ ಶ್ರೀ” ಪ್ರಶಸ್ತಿ ಪ್ರದಾನ :

  ಖಾನಾಪುರ ತಾಲೂಕಿನ ಚಿಕ್ಕಮುನವಳ್ಳಿ ಗ್ರಾಮದ ಶ್ರೀ ಆರೂಢ ಮಠದ ಶ್ರೋ ಬ್ರ ಬೃಹ್ಮಲೀನ ಸದ್ಗುರು ಶ್ರೀ ಸದಾಶಿವಾನಂದ ಮಹಾಸ್ವಾಮಿಗಳವರ 12ನೇ ವರ್ಷದ ಪುಣ್ಯಸ್ಮರಣೆ ಹಾಗೂ 42ನೇ ಅಖಿಲ ಕರ್ನಾಟಕ ವೇದಾಂತ ಪರಿಷತ್ ಸಮಾರಂಭದಲ್ಲಿ ದಿಗ್ವಿಜಯ ವಾಹಿನಿಯ ನಿರೂಪಕ , ನಿರ್ಮಾಪಕರಾದ ಪ್ರಶಾಂತ್ ರಿಪ್ಪನ್ ಪೇಟೆ ಅವರಿಗೆ ‘ ಆರೂಢ ಶ್ರೀ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ ಶ್ರೀ ಷ ಬ್ರ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಮಾತನಾಡಿ ಪ್ರಶಾಂತ ರಿಪ್ಪನ್ ಪೇಟೆ ಅವರಿಗೆ…

Read More

ಹೊಸನಗರ ವಿಧಾನಸಭಾ ಕ್ಷೇತ್ರ ಮರು ಸ್ಥಾಪನೆಗೆ ಆಗ್ರಹಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ :

ಹೊಸನಗರ ವಿಧಾನಸಭಾ ಕ್ಷೇತ್ರವು ತಾಲ್ಲೂಕಿನಲ್ಲಿ 2001 ರ ಹಿಂದೆ ಅಸ್ತಿತ್ವದಲ್ಲಿತ್ತು. ಆದರೆ ನಂತರದ ವಿಧಾನಸಭಾ ಕ್ಷೇತ್ರಗಳ ಮರುವಿಂಗಡಣೆಯ ಸಮಯದಲ್ಲಿ ಹೊಸನಗರ ಕ್ಷೇತ್ರವನ್ನು ತೀರ್ಥಹಳ್ಳಿ ಮತ್ತು ಸಾಗರ ಕ್ಷೇತ್ರಕ್ಕೆ ಸೇರಿಸಿ ಹೊಸನಗರ ತಾಲ್ಲೂಕು ವಿಧಾನಸಭಾ ಕ್ಷೇತ್ರವನ್ನು ಕೈಬಿಡಲಾಗಿತ್ತು. ಇಂದು ಹೊಸನಗರ ತಾಲ್ಲೂಕಿನ ಎಲ್ಲ ಪಕ್ಷದ ನಾಯಕರು ಪಕ್ಷಾತೀತವಾಗಿ ಪಾಲ್ಗೊಂಡು ಮಾಜಿ ಶಾಸಕ ಬಿ.ಸ್ವಾಮಿರಾವ್‌ ರವರ ನೇತೃತ್ವದಲ್ಲಿ ಹಳೇ ಕೋರ್ಟ್ ರಸ್ತೆಯಲ್ಲಿ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿ ಹೊಸನಗರದ ತಹಶೀಲ್ದಾರ್‌ ಕಛೇರಿ ಮೂಲಕ ಸರ್ಕಾರಕ್ಕೆ ಮನವಿ ಪತ್ರವನ್ನು ಸಲ್ಲಿಸಿದರು….

Read More

ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ಹೃದಯಾಘಾತದಿಂದ ನಿಧನ :

‘ಕನ್ನಡದ ಕಬೀರ’ ಎಂದೇ ಹೆಸರಾಗಿದ್ದ ಪದ್ಮಶ್ರೀ ಪುರಸ್ಕೃತ ಇಬ್ರಾಹೀಂ ಎನ್‌. ಸುತಾರ(76) ಹೃದಯಾಘಾತದಿಂದ ಶನಿವಾರ ಬೆಳಗ್ಗೆ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪೂರ ಪಟ್ಟಣದಲ್ಲಿ ನಿಧನರಾಗಿದ್ದಾರೆ. ಇಬ್ರಾಹಿಂ ಸುತಾರ ಅವರು ಕಳೆದ ಕೆಲವು ದಿನಗಳಿಂದ ಹೃದಯದ ನೋವಿನಿಂದ ಬಳಲುತ್ತಿದ್ದರು. ಇದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಶನಿವಾರ ಬೆಳಗ್ಗೆ ಅವರಿಗೆ ಮತ್ತೆ ಲಘು ಹೃದಯಾಘಾತವಾಗಿದೆ. ಕೂಡಲೇ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಇಬ್ರಾಹಿಂ ಸುತಾರ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಬಾಗಲಕೋಟ ಜಿಲ್ಲೆಯ, ಮುಧೋಳ ತಾಲ್ಲೂಕಿನ ಮಹಾಲಿಂಗಪುರದ ಶ್ರೀ ಇಬ್ರಾಹೀಮ ಎನ್. ಸುತಾರ ಅವರು ದಿನಾಂಕ…

Read More

ಹೊಸನಗರ ವಿಧಾನಸಭಾ ಕ್ಷೇತ್ರ ಪುನರ್ ಸ್ಥಾಪಿಸುವಂತೆ ಒತ್ತಾಯಿಸಿ ನಾಳೆ ರಸ್ತೆ ತಡೆ :

ಹೊಸನಗರ ವಿಧಾನಸಭೆ ಕ್ಷೇತ್ರ ಪುನರ್ ಸ್ಥಾಪಿಸುವ ಹೋರಾಟಕ್ಕೆ ಮತ್ತೆ ಕಹಳೆ ಮೊಳಗಿದ್ದು,ನಾಳೆ ಹೊಸನಗರದ ಹಳೆ ಕೋರ್ಟ್ ಸರ್ಕಲ್ ನಲ್ಲಿ ರಸ್ತೆ ತಡೆ ಹಮ್ಮಿಕೊಳ್ಳಲಾಗಿದೆ. ಹೊಸನಗರ ವಿಧಾನಸಭಾ ಕ್ಷೇತ್ರ ಕಳೆದುಕೊಂಡು ಹಲವು ವರುಷಗಳೇ ಕಳೆದು ಹೋಗಿದೆ. ಹೊಸನಗರ ಕ್ಷೇತ್ರ ರಾಜ್ಯದ ಅತಿ ದೊಡ್ಡ ಕ್ಷೇತ್ರವಾಗಿದೆ. 175 ಕಿ.ಮೀ. ಉದ್ದವಿರುವ ಈ ಕ್ಷೇತ್ರ ಈಗ ಸಾಗರ ಹಾಗೂ ತೀರ್ಥಹಳ್ಳಿ ಕ್ಷೇತ್ರಗಳಿಗೆ ಹಂಚಿ ಹೋಗಿದ್ದರಿಂದ ಹೊಸನಗರ ತಾಲೂಕು ಅನಾಥವಾಗಿ ಪರಿಣಮಿಸಿದೆ. 2001 ರ ಕುಲದೀಪ್ ಸಿಂಗ್ ಕಮಿಟಿ ವರದಿ ಪ್ರಕಾರ ಜನಸಂಖ್ಯಾ…

Read More

ನಾಳೆ ರಿಪ್ಪನ್ ಪೇಟೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?

ರಿಪ್ಪನ್ ಪೇಟೆ ಸೇರಿದಂತೆ ಸುತ್ತಮುತ್ತಲಿನ ಹಲವು ಊರುಗಳಲ್ಲಿ ನಾಳೆ 05/02/22 ರಂದು ಬೆಳಿಗ್ಗೆ 9-30 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್ ಪೇಟೆ  110/11 ಕೆ ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣ ಕಾರ್ಯವಿರುವ ನಿಮಿತ್ತ  ನಾಳೆ ಬೆಳಿಗ್ಗೆ 9-30 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ??? ರಿಪ್ಪನ್ ಪೇಟೆ,ಹೆದ್ದಾರಿಪುರ,ಕೆಂಚನಾಲ,ಗರ್ತಿಕೆರೆ, ಬೆಳ್ಳೂರು,ಅರಸಾಳು,ಕೋಡೂರು ಮತ್ತು ಚಿಕ್ಕಜೇನಿ ಗ್ರಾಮ…

Read More

ಹನಿಟ್ರ್ಯಾಪ್ : ನಗ್ನ ವೀಡಿಯೋ ಮಾಡಿ ಹಣಕ್ಕಾಗಿ ಬೆದರಿಸುತ್ತಿದ್ದ ಶಿವಮೊಗ್ಗ ಮೂಲದ ಮಹಿಳೆ ಸೇರಿ ಇಬ್ಬರು ಬಂಧನ

ಹನಿ ಟ್ರಾಪ್‌ ಮಾಡುತ್ತಿದ್ದ ಓರ್ವ ಮಹಿಳೆ ಸೇರಿ ಮೂವರನ್ನು ಶಿರಸಿಯ ಹೊಸ ಮಾರುಕಟ್ಟೆ ಪೊಲೀಸ್‌ ಠಾಣಾ ವ್ಯಾಪ್ತಿಯ ಪೊಲೀಸರು ಬಂಧಿಸಿದ್ದಾರೆ.  ಯುವಕನೊಬ್ಬನ ನಗ್ನ ಫೋಟೋ ಹಾಗೂ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡುತ್ತೇವೆ ಎಂದು ಯುವಕನಿಗೆ ಹೆದರಿಸಿದ್ದಾರೆ. ಶಿರಸಿ ಉಂಚಳ್ಳಿಯ ಅಜಿತ್ ಶ್ರೀಕಾಂತ್ ನಾಡಿಗ್ (25), ಬನವಾಸಿ ರಸ್ತೆಯ ಗೊಲಕೇರಿ ಓಣಿಯ ಧನುಷ್ಯ ಕುಮಾರ್ ಯಾನೆ ದಿಲೀಪ್ ಕುಮಾರ್ ಶೆಟ್ಟಿ (25) ಹಾಗೂ ಶಿವಮೊಗ್ಗದ ಗೋಪಾಳ ರಂಗನಾಥ್ ಬಡಾವಣೆಯ ಪದ್ಮಜಾ ಡಿ.ಎನ್. ಬಂಧಿತ ಆರೋಪಿಗಳು. ಆರೋಪಿ ಅಜಿತ್ ಜತೆ…

Read More

ಹೃದಯಾಘಾತದಿಂದ ಗ್ರಾಮ ಪಂಚಾಯತ್ ಅಧ್ಯಕ್ಷ ವಿನಯ್ ಗೌಡ್ರು ನಿಧನ

ಸೈದೂರು ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಬಿಜೆಪಿ ಪ್ರಮುಖರಾಗಿದ್ದ ವಿನಯ್ ಗೌಡ್ರು (35) ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ತಂದೆ, ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ವಿನಯ್ ಗೌಡ್ರು 12/05/21 ರಂದು ತಾಳಗುಪ್ಪ ಹೋಬಳಿಯ ಸೈದೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು. ಮೃತರ ಅಂತ್ಯಕ್ರಿಯೆಯನ್ನು ಇಂದು ರಾತ್ರಿ 10 ಕ್ಕೆ ಅವರ ಸ್ವಗ್ರಾಮವಾದ ತಡಗಳಲೆ ಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Read More

ಬಿದರಹಳ್ಳಿಯಲ್ಲಿ ಮಗು ಸಮೇತ ತಾಯಿ ಆತ್ಮಹತ್ಯೆ ಪ್ರಕರಣ : ಅಮಾಯಕ ಮಗುವಿನ ಹತ್ಯೆಗೆ ಹೊಣೆ ಯಾರು……!?

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅಮೃತ ಗ್ರಾಮ ಪಂಚಾಯಿತಿಯ ಬಿದರಹಳ್ಳಿ ಗ್ರಾಮದ ಸಮೀಪದ ಚಿಟ್ಟೆ ಗೆದ್ದೆಯ ಮುದ್ದುಮುಖದ ನಾಲ್ಕು ವರ್ಷದ  ತನ್ವಿ ಎಂಬ ಪುಟ್ಟ ಮುದ್ದು ಕಂದಮ್ಮನ ಹತ್ಯೆಗೆ ಹೊಣೆ ಯಾರು. ಅಜ್ಜ-ಅಜ್ಜಿಯೋ?. ತಂದೆಯೋ?  ಅಥವಾ ಲೋಕದ ಅರಿವಿಲ್ಲದ ಚಂದದ ಮುಗ್ಧ ಬಾಲಕಿಯನ್ನು ವೇಲಿನಿಂದ ಸೊಂಟಕ್ಕೆ ಕಟ್ಟಿ ಬಾವಿಗೆ ಹಾರಿದ ತಾಯಿ ವಿದ್ಯಾ ಕಾರಣವಾದರೆ ??? 2014 ರಲ್ಲಿ ಚಿಟ್ಟೆಗೆದ್ದೆ ಯ ಲೋಹಿತ ಎಂಬುವರೊಂದಿಗೆ ಮದುವೆಯಾಗಿದ್ದ  ವಿದ್ಯಾ ಅತ್ತೆ ಮಾವ ಮತ್ತು ಗಂಡನ ಕಿರುಕುಳದಿಂದ ಬೇಸತ್ತು ಮೇಲಿನಿಂದ…

Read More

ಹೊಸನಗರದ ಒಟ್ಟೂರ ಕೆರೆಯು ಸರ್ವ ಜನಾಂಗದ ಶಾಂತಿಯ ತೋಟವೆಂಬಂತ್ತೆ ಹಿಂದೂ,ಮುಸಲ್ಮಾನ್,ಕ್ರೈಸ್ತ ಸೇರಿದಂತೆ ವಿವಿಧ ಧರ್ಮಗಳನ್ನೊಳಗೊಂಡ ಕೆರೆಯಾಗಿದೆ : ಮೂಲೆಗದ್ದೇ ಶ್ರೀಗಳು

ಹೊಸನಗರ:- 03, ಇಂದು ಒಟ್ಟೂರು ಕೆರೆಯ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಭಿವೃದ್ಧಿ ಯೋಜನೆ, ಮೂಲೆಗದ್ದೆ ಮಠದ ಶ್ರೀಗಳಿಂದ, ಮಸೀದಿಯ ಗುರುಗಳು ಚರ್ಚ್ ನ ಫಾದರ್, ಸಾ,ರ ಸಂಸ್ಥೆ, ಪಟ್ಟಣ ಪಂಚಾಯಿತಿ, ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಿಂದ ಹೂಳೆತ್ತುವ ರ್ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.  ಚಾಲನೆ ನೀಡಿ ಮಾತನಾಡಿದ ತಾಲ್ಲೂಕಿನ ಮೂಲೆಗದ್ದೆ ಮಠದ ಶ್ರೀ ಮ,ನಿ,ಪ್ರಾ, ಚನ್ನಬಸವ ಮಹಾ ಸ್ವಾಮಿಗಳು ಮಾತನಾಡಿ. ಒಟ್ಟೂರ ಕೆರೆಯು ಸರ್ವ ಜನಾಂಗದ ಶಾಂತಿಯ ತೋಟವೆಂಬಂತ್ತೆ ಹಿಂದೂ, ಮುಸಲ್ಮಾನ್, ಕ್ರೈಸ್ತ ಸೇರಿದಂತೆ ವಿವಿಧ…

Read More

ವಿವಾಹಿತ ಮಹಿಳೆ ನಾಪತ್ತೆ : ಸುಳಿವು ಪತ್ತೆಗೆ ಮನವಿ

2021 ರ ಏಪ್ರಿಲ್ 13 ರಂದು ಅನುಷಾ ಕೋಂ ಆನಂದ, 26 ವರ್ಷ, ಗೃಹಿಣಿ ಈಕೆ ನಗರದ ಹೊಸಮನೆ 06 ನೇ ಕ್ರಾಸ್‍ನಲ್ಲಿರುವ ತನ್ನ ನಿವಾಸದಿಂದ ಕಾಣೆಯಾಗಿರುತ್ತಾರೆ.       ಅಂದು ರಾತ್ರಿ 8 ಗಂಟೆ ಹೊತ್ತಿಗೆ ಮನೆಯಿಂದ ಹೊರಗೆ ಹೋದವಳು ಹಿಂತಿರುಗಿ ಬಂದಿರುವುದಿಲ್ಲ. ಅಕ್ಕ ಪಕ್ಕ, ನೆಂಟರ ಮನೆ ಹೀಗೆ ಎಲ್ಲೆಡೆ ಹುಡುಕಿದರೂ ಪತ್ತೆಯಾಗಿರುದಿಲ್ಲ. ಕಾಣೆಯಾದ ಮಹಿಳೆ ಅನುಷಾ 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕೋಲು ಮುಖ, ಎಣ್ಣೆಗೆಂಪು ಮೈಬಣ್ಣ ಹೊಂದಿದ್ದು, ಕಾಣೆಯಾದ…

Read More