ಅಕಾಲಿಕ ಮರಣಕ್ಕೆ ತುತ್ತಾದ ರಾಷ್ಟ್ರಮಟ್ಟದ ವಾಲಿಬಾಲ್ ಕ್ರೀಡಾಪಟು : ಮೃತ ಬಾಲಕನ ಕುಟುಂಬಕ್ಕೆ ಸರ್ಕಾರದಿಂದ 5ಲಕ್ಷ ಆರ್ಥಿಕ ನೆರವು

ರಿಪ್ಪನ್ ಪೇಟೆ ಸಮೀಪದ ಹಾರಂಬಳ್ಳಿ ಗ್ರಾಮದ ರಾಷ್ಟ್ರ ಮಟ್ಟದ ವಾಲಿಬಾಲ್ ಕ್ರೀಡಾಪಟು ಭರತ್ ರಾಜ್ (ಬೆಳ್ಳಿ) ಎಂಬ ಬಾಲಕ 21-10-2021 ರಂದು ಹಾರಂಬಳ್ಳಿ ಮನೆಯ ಸಮೀಪ ಪ್ರಕೃತಿ ವಿಕೋಪದಲ್ಲಿ ಮೃತಪಟ್ಟಿದ್ದನು.

ಇಂದು ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ಹಾಲಪ್ಪ ನವರು ಮೃತ ಭರತ್ ರಾಜ್ ರವರ ತಾಯಿ ಶ್ರೀಮತಿ ಲಕ್ಷ್ಮಿ ವಾಸುದೇವ ರವರಿಗೆ ಪ್ರಕೃತಿ ವಿಕೋಪ ನಿಧಿಯಿಂದ ಮಂಜೂರಾದ 5 ಲಕ್ಷ ರೂ ಗಳ ಪರಿಹಾರದ ಆದೇಶ ಪ್ರತಿಯನ್ನು ಹಸ್ತಾಂತರಿಸಿ, ಸಾಂತ್ವನ ಹೇಳಿದರು.

ಇಂದು ಪುರಪ್ಪೆಮನೆಯಲ್ಲಿ ನಡೆದ ಕಂದಾಯ ಇಲಾಖೆಯ ದಾಖಲೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ಕಾರ್ಯ ಕ್ರಮದಲ್ಲಿ ಭರತ್ ರಾಜ್ ಅವರ ಪೋಷಕರಿಗೆ 5ಲಕ್ಷ ರೂ ಗಳ ಪರಿಹಾರದ ಆದೇಶ ಪ್ರತಿಯನ್ನು ವಿತರಿಸಲಾಯಿತು.

ಸಾಗರ ಉಪವಿಭಾಗಧಿಕಾರಿಗಳು, ತಹಶೀಲ್ದಾರರು, ಚುನಾಯಿತ ಪ್ರತಿನಿಧಿಗಳು,ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.


ಮಿಂಚಿ ಮರೆಯಾದ ಅದ್ಭುತ ಪ್ರತಿಭೆ ಬೆಳ್ಳಿ( ಭರತ್ ರಾಜ್)

ರಿಪ್ಪನ್ ಪೇಟೆ  ಪಟ್ಟಣದ ಮೇರಿ ಮಾತಾ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಈ ವಿದ್ಯಾರ್ಥಿ ಹಾರಂಬಳ್ಳಿ ಗ್ರಾಮದ ನಿವಾಸಿ ವಾಸುದೇವ್ ಎಂಬವರ ಪುತ್ರ ಭರತ್ ರಾಜ್ ಅಲಿಯಾಸ್ ಬೆಳ್ಳಿ ಎಂಬಾತ ತನ್ನ ಅದ್ಭುತ ಪ್ರತಿಭೆಯಿಂದ ರಿಪ್ಪನ್ ಪೇಟೆಯ ಮನೆಮಾತಾಗಿದ್ದ.


ಇತ್ತೀಚೆಗೆ ಆಕಸ್ಮಿಕವಾಗಿ ತಮ್ಮ ಮನೆಯ ಹತ್ತಿರ ಇರುವ ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ಬಾರದ ಲೋಕಕ್ಕೆ ಹೋಗಿದ್ದಾನೆ.ಇಡೀ ಶಾಲೆಯಲ್ಲಿ ಈತ ಅತ್ಯಂತ ಚಟುವಟಿಕೆಯಿಂದ ಇದ್ದ ವಿದ್ಯಾರ್ಥಿಯಾಗಿದ್ದ, ಎಲ್ಲಾ ಸ್ನೇಹಿತರ ಜೊತೆಗೆ ಉತ್ತಮ ಸಂಬಂಧ ಇಟ್ಟುಕೊಂಡು ಎಲ್ಲರ ಪ್ರೀತಿಗೆ ಪಾತ್ರನಾಗಿದ್ದ.


ಈತ ತನ್ನ ಪ್ರಾಥಮಿಕ ವಿದ್ಯಾಭ್ಯಾಸವನ್ನು ರಿಪ್ಪನ್ ಪೇಟೆಯ ಗುಡ್ ಶಫರ್ಡ್ ಶಾಲೆಯಲ್ಲಿ ಹಾಗೂ ಹೈಸ್ಕೂಲ್ ವಿದ್ಯಾಭ್ಯಾಸವನ್ನು ಮೇರಿ ಮಾತಾ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ.ವಿಧಿಯ ಆಟಕ್ಕೆ ಬಲಿಯಾಗಿ ಅದ್ಭುತ ಪ್ರತಿಭೆ ಬಾಳಿ ಬೆಳಕಾಗ ಬೇಕಿದ್ದ ಈತನ ಜೀವನದಲ್ಲಿ ವಿಧಿರಾಯ ಕರೆದುಕೊಂಡು ಹೋದ.


ಈತನ ಪ್ರತಿಭೆಗೆ ಬೆರಗಾದವರು ಅಷ್ಟಿಷ್ಟಲ್ಲ. ಈತ ಪ್ರಾಥಮಿಕ ಶಾಲೆಯಲ್ಲಿ ತಾಲೂಕು ,ಜಿಲ್ಲೆ, ವಿಭಾಗಿಯ ಮಟ್ಟ ,ಹಾಗೂ ರಾಜ್ಯ ಮಟ್ಟದಲ್ಲಿ ಕಬ್ಬಡ್ಡಿ ಹಾಗೂ ವಾಲಿಬಾಲ್ ಪಂದ್ಯಾವಳಿಯಲ್ಲಿ ಅಪ್ರತಿಮ ಸಾಧನೆ ತೋರಿಸಿ ಶಾಲೆಗೆ, ಊರಿಗೆ ,ಶಿಕ್ಷಕರಿಗೆ ಕೀರ್ತಿ ತಂದ ಹೆಸರು ಈತನಿಗೆ ಸಲ್ಲುತ್ತದೆ.

ವೈಯಕ್ತಿಕವಾಗಿ ಈತ ಅತ್ಯಂತ ನಯ ,ವಿನಯ ಸೌಮ್ಯ ಗುಣ ರಕ್ತಗತವಾಗಿ ಬಂದಿದೆ. ಈತನ  ಮೃದು ಸ್ವಭಾವ ಎಲ್ಲರನ್ನು ಪ್ರೀತಿ ಕೊಡಿಸುವಂತೆ ಮಾಡಿದೆ. ಈತನ ಮರಣ ಇಡೀ ಶಾಲೆಗೆ, ಶಿಕ್ಷಕರಿಗೆ, ಕ್ರೀಡಾ ರಂಗಕ್ಕೆ, ತುಂಬಲಾರದ ನಷ್ಟವಾಗಿದೆ.ಚಿಗುರುವ ಕುಡಿ ಅರಳುವ ಮುನ್ನವೇ ಬಾಡಿ ಹೋಗಿದ್ದು ಇಡೀ ಕುಟುಂಬಕ್ಕೆ ನುಂಗಲಾರದ ತುತ್ತಾಗಿದೆ.

ಈತನ ಪ್ರೀತಿಗೆ ,ಇವನ ನಯ, ವಿನಯ ಗುಣಗಳಿಗೆ , ಶಿಕ್ಷಕರು ಸಾರ್ವಜನಿಕರು, ಅಕ್ಕಪಕ್ಕದವರು, ಇವನನ್ನು, ಪ್ರೀತಿಯಿಂದ” ಬೆಳ್ಳಿ ”ಎಂದು ಕರೆಯುತ್ತಿದ್ದರು.


ವೀಡಿಯೋ ಇಲ್ಲಿ ವೀಕ್ಷಿಸಿ 👇👇👇👇
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…

6 hours ago

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶ

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…

19 hours ago

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…

21 hours ago

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…

1 day ago

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…

1 day ago

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…

1 day ago