ಶಿವಮೊಗ್ಗ : ಕರುನಾಡು ರಾಜ್ಯ ವನ್ನಿಯಕುಲ ಕ್ಷತ್ರೀಯ ಮಹಾಸಭಾದ ರಾಜ್ಯ ಸಂಘದ ವತಿಯಿಂದ ಶುಕ್ರವಾರ ಎಂ ಆರ್ ಎಸ್ ಸರ್ಕಲ್ ನ ಇಂಜಿನಿಯರ್ ಸಭಾಂಗಣದಲ್ಲಿ ವನ್ನಿಕುಲ ಕ್ಷತ್ರೀಯ ಸಮುದಾಯದ ಮೂಲಪುರುಷ ಶ್ರೀ ವೀರರುದ್ರ ವನ್ನಿ ಮಹಾರಾಜರ ಜಯಂತಿಯನ್ನು ಆಚರಿಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಮಹಾಸಭಾದ ರಾಜ್ಯಾಧ್ಯಕ್ಷರಾದ ಶ್ರೀ ಕೆ ನಂದಕುಮಾರ್ ಗೌಂಡರ್ ಮಾತನಾಡಿ ಇಲ್ಲಿಯವರೆಗೂ ನಮ್ಮ ಸಮುದಾಯದವರು ಜಯಂತಿ ಆಚರಣೆಯನ್ನು ಮಾಡುತ್ತಿರಲಿಲ್ಲ ಆದರೆ ಕರುನಾಡು ರಾಜ್ಯ ವನ್ನಿಯಕುಲ ಕ್ಷತ್ರೀಯ ಮಹಾಸಭಾ ಉದಯದ ನಂತರ ಈ ಆಚರಣೆಯನ್ನು ಕಳೆದ ವರ್ಷದಿಂದ ಆರಂಭಿಸಿದ್ದು ಮುಂದಿನ ದಿನದಲ್ಲಿ ಸರ್ಕಾರವು ಎಲ್ಲಾ ಸಮುದಾಯದ ಮಹಾನ್ ಪುರುಷರ ಜಯಂತಿ ಆಚರಣೆಗೆ ಘೋಷಣೆ ಮಾಡಿರುವಂತೆ ಈ ವೀರ ರುದ್ರವನ್ನಿ ಮಹಾರಾಜರ ಜಯಂತಿ ಆಚರಣೆಗೆ ಸರ್ಕಾರ ಘೋಷಣೆ ಮಾಡಬೇಕಾಗಿದೆ ಈ ನಿಟ್ಟಿನಲ್ಲಿ ನಮ್ಮ ಹೋರಾಟ ಸಾಗಬೇಕಾಗಿದೆ ಎಂದರು.
ನಂತರ ಮಾತನಾಡಿದ ಮಹಾಸಭಾದ ರಾಜ್ಯಮಹಾಪ್ರಧಾನ ಕಾರ್ಯದರ್ಶಿ ಜಿ.ವಿ.ಗಣೇಶಪ್ಪ ವನ್ನಿಕುಲ ಕ್ಷತ್ರಿಯ ಸಮಾಜದ 60 ರಿಂದ 70 ಲಕ್ಷ ಜನಸಂಖ್ಯೆ ಇದ್ದರೂ ಸಹ ಯಾವುದೇ ತರಹದ ರಾಜಕೀಯ ಸ್ಥಾನಮಾನಗಳನ್ನು ಪಡೆಯದೇ ಸಮಾಜ ಕಡೆಗಣಿಸಲ್ಪಟ್ಟಿದೆ.1200 ವರ್ಷಕ್ಕೂ ಹೆಚ್ಚು ಕಾಲ ದೇಶವನ್ನಾಳಿದ ಸಮಾಜಕ್ಕೆ ಯಾವುದೇ ಸ್ಥಾನಮಾನ ನೀಡದೇ ಕಡೆಗಣಿಸಿರುವುದು ನಮ್ಮನ್ನಾಳುವ ಸರ್ಕಾರದ ದ್ವಿಮುಖ ನೀತಿಯನ್ನು ಬಿಂಬಿಸುತ್ತದೆ.ಎಲ್ಲಾ ಜಯಂತಿಗಳನ್ನು ಸರ್ಕಾರ ಹೇಗೆ ಆಚರಿಸುತ್ತಿದೆಯೋ ಅದೇ ತರಹ ಮುಂದಿನ ದಿನಗಳಲ್ಲಿ ಶ್ರೀ ವೀರರುದ್ರ ವನ್ನಿಕುಲ ಮಹರಾಜರ ಜಯಂತಿಯನ್ನು ಸರ್ಕಾರವೇ ಆಚರಿಸಬೇಕೆಂದು ಸಮಾಜದ ಪರವಾಗಿ ಸರ್ಕಾರಕ್ಕೆ ಒತ್ತಾಯಿಸುತ್ತಿದ್ದೇವೆ ಎಂದರು.
ಈ ಸಂಧರ್ಭದಲ್ಲಿ ಮಹಾಸಭಾದ ಉಪಾಧ್ಯಕ್ಷರಾದ ಚಂದ್ರು,ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಟಿ.ಪೆರುಮಾಳ್,ರಮೇಶ್,ಖಜಾಂಚಿ ವಿ.ಮುರುಗೇಶ್,ಸಹಕಾರ್ಯದರ್ಶಿ ಪಿ.ರವಿಕುಮಾರ್,ಭದ್ರಾವತಿಯ ಮಣಿಗೌಂಡರ್,ಉಮಾಪತಿ,ಶ್ರೀನಿವಾಸ,ನಾಗರಾಜ,ಮೋಕ್ಷಾನಂದಾ ಹಾಗೂತಾಲೂಕ್ ಅಧ್ಯಕ್ಷ ರಾಜು,ಮುಖಂಡರಾದ ಮತ್ತೂರು ಗೋಪಾಲ್,ಮಿಳಗಟ್ಟ ಪರುಶುರಾಮ,ಯುವ ಮುಖಂಡ ಅಯ್ಯಪ್ಪ,ಆಯನೂರು ಕಾರ್ಯಧ್ಯಕ್ಷ ಅಣ್ಣಪ್ಪ ಹಾಗೂ ರಾಜ್ಯ ಪಧಾದಿಕಾರಿಗಳಾದ ಕಾರ್ಯಧ್ಯಕ್ಷ ಚಂದ್ರು ಉಪಾಧ್ಯಕ್ಷರಾದ ಶಶಿಕುಮಾರ್ ಚಂದ್ರಶೇಖರ್ ಚಿನ್ನೀಕೃಷ್ಣ,ಹೈಕೋರ್ಟ್ ವಕೀಲೆಯಾದ ಶ್ರೀಮತಿ ಗೀತಾ ಚಕ್ರವರ್ತಿ,ರೇಣುಕಾದೇವಿ ಮತ್ತು ಸಮುದಾಯದ ಎಲ್ಲಾ ಮುಖಂಡರುಗಳು ಭಾಗವಹಿಸಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್