ಅದ್ದೂರಿಯಾಗಿ ಜರುಗಿದ ಹೊಂಬುಜ ಜಗನ್ಮಾತೆ ಪದ್ಮಾವತಿ ಅಮ್ಮನವರ ರಥೋತ್ಸವ

 ಜೈನರ ಜೈನ ದಕ್ಷಿಣ ಕಾಶಿಯೆಂದೆ ಪ್ರಖ್ಯಾತಿ ಹೊಂದಿರುವ ಇತಿಹಾಸ ಪ್ರಸಿದ್ದ ಹೊಂಬುಜ ಜಗನ್ಮಾತೆ ಪದ್ಮಾವತಿ ಅಮ್ಮನವರ ರಥೋತ್ಸವವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸಂಪನ್ನವಾಗಿ ಜರುಗಿತು.



ದೇವಸ್ಥಾನದಿಂದ ಮಹಾಮಾತೆ ಪದ್ಮಾವತಿ ದೇವಿಯನ್ನು ಹೊತ್ತು ತಂದು ರಥೋತ್ಸವದಲ್ಲಿ ವಿರಾಜಮಾನವಾಗಿ ಕುಳ್ಳಿರಿಸಿ ಅಮ್ಮನವರ ರಥೋತ್ಸವಕ್ಕೂ ಮುನ್ನಾ ಉತ್ಸವ ಮೂರ್ತಿಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ಜಗತ್ಪಾಲ್‌ಇಂದ್ರರವರು ಮತ್ತು ಇತರ ವೃಂದದವರುಗಳು ವಿಶೇಷ ಪೂಜೆ ಸಲ್ಲಿಸಿದರು. ಅಲಂಕೃತ ರಥದಲ್ಲಿ ದೇವಿಯನ್ನು ಪ್ರತಿಷ್ಠಾಪಿಸಿ ಧಾರ್ಮಿಕ ವಿಧಿವಿಧಾನಗಳು ಬಲಿಪೂಜೆಯ ನಂತರ ಮೂಲನಕ್ಷತ್ರದಲ್ಲಿ ಮಧ್ಯಾಹ್ನ 1.15 ಕ್ಕೆ ಮಠದ ಪೀಠಾಧ್ಯಕ್ಷರಾದ ಜಗದ್ಗುರು ಡಾ.ಶ್ರೀಮದ್ ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಜಿ ಮಾರ್ಗದರ್ಶನದಲ್ಲಿ ಸಾವಿರಾರು ಭಕ್ತರುಗಳ ಸಮ್ಮುಖದಲ್ಲಿ ರಥವನ್ನು ಎಳೆದು ಸಂಭ್ರಮಿಸಿದರು.

ಶ್ರೀಗಳು ಚಾಲನೆ ನೀಡುತ್ತಿದ್ದಂತೆ ನೆರೆದ ಭಕ್ತರ ರಥ ಎಳೆಯುವ ಸಂದರ್ಭದಲ್ಲಿ ಪದ್ಮಾವತಿ ಮಾತಾಕಿ ಜೈ ಜಯಘೋಷ ಮೊಳಗಿಸುತ್ತಾ ಈ ಭಾರಿಯ ದೇವಿ ಜಗನ್ಮಾತೆ ಸಮೃದ್ದ ಮಳೆ-ಬೆಳೆ ಕರುಣಿಸುವಂತೆ ಪ್ರಾರ್ಥಿಸಿ ರಥಕ್ಕೆ ಬಾಳೆಹಣ್ಣು ಬೀರಿ ಪ್ರಾರ್ಥಿಸಿದರು.

ಮಳೆ ಬೆಳೆ ಸಂವೃದ್ದವಾಗಲಿ ದೇಶದೆಲ್ಲಡೆ ಶಾಂತಿ ಸೌಹಾರ್ದತೆಯಿಂದ ಧರ್ಮದ ಸಹಿಷ್ಣಥೆಯೊಂದಿಗೆ ಎಲ್ಲರೂ ಒಂದಾಗಿ ರಥೋತ್ಸವವನ್ನು ಆಚರಿಸುವಂತಾಗಬೇಕು ಎಂದರು.

ಈ ಸಂದರ್ಭದಲ್ಲಿ ಕಂಬದಹಳ್ಳಿ ಜೈನ ಮಠದ ಸ್ವಸ್ತಿ ಶ್ರೀ ಭಾನುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಸ್ವಾಮೀಜಿ ಮತ್ತು ಆರತಿಪುರ ಮಠದ ಸ್ವಸ್ತಿ ಶ್ರೀ ಸಿದ್ದಾಂತ ಕೀರ್ತಿ ಭಟ್ಟಾರಕರು ರಥೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.


ಕೋವಿಡ್‌ನಿಂದಾಗಿ ಎರಡು ವರ್ಷ ರಥೋತ್ಸವವನ್ನು ಸರ್ಕಾರದ ನಿಯಮದಂತೆ ನಿಬಂಧನೆಯಿಂದಾಗಿ ರಥೋತ್ಸವವನ್ನು ರದ್ದುಗೊಳಿಸಲಾಗಿತ್ತು. ಆದರೆ ಈ ಭಾರಿ ನಿರೀಕ್ಷೆಗೂ ಮೀರಿದ ಸಾವಿರಾರು ಭಕ್ತರು ಮಧ್ಯಾಹ್ನದ ಬಿರು ಬಿಸಿಲನ್ನೂ ಲೆಕ್ಕಿಸದೆ ಸಾವಿರಾರು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.

ಮಠದ ಗಜರಾಜನ ಗಾಂಭೀರ್ಯ ನಡಿಗೆಯೊಂದಿಗೆ ಸಾಗರದ ಶಿವಪ್ಪನಾಯ್ಕ ಮಹಿಳಾ ಕಲಾ ತಂಡದವರಿಂದ ಡೊಳ್ಳು ಪ್ರದರ್ಶನದೊಂದಿಗೆ ರಥೋತ್ಸವವು ದೇವಸ್ಥಾನದಿಂದ ಹೊರಟು ಅಂಚೆ ಕಛೇರಿ ಮಾರ್ಗದಿಂದ ಪ್ರಮುಖ ರಸ್ತೆಯಲ್ಲಿ ತಳಿರು ತೋರಣಗಳ ಮತ್ತು ರಂಗೋಲಿಯ ಸ್ವಾಗತದೊಂದಿಗೆ ಭಕ್ತರ ದೇವಿಯನ್ನು ಸ್ವಾಗತಿ ಹಣ್ಣು ಕಾಯಿ ಸಮರ್ಪಿಸುತ್ತಿರುವುದು ವಿಶೇಷವಾಗಿತ್ತು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

6 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

6 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

8 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

1 day ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

1 day ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

1 day ago