ಸಾಗರ: ಇಲ್ಲಿನ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಸರ್ವ ಸದಸ್ಯರ ಸಭೆಯಲ್ಲಿ ಈಚೆಗೆ ನಡೆದಿರುವ ಹಲ್ಲೆ ನಡೆದಿರುವ ಪ್ರಕರಣಕ್ಕೆ ಶಾಸಕ ಹರತಾಳು ಹಾಲಪ್ಪ ಅವರೇ ನೇರವಾಗಿ ಕಾರಣರಾಗಿದ್ದಾರೆ ಎಂದು ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಆರೋಪಿಸಿದ್ದಾರೆ.
ಹಲ್ಲೆಗೊಳಗಾದ ಸಂಸ್ಥೆಯ ಕಾರ್ಯದರ್ಶಿ ಜಗದೀಶ ಗೌಡ ಅವರ ಮನೆಗೆ ಬುಧವಾರ ತೆರಳಿ ಯೋಗಕ್ಷೇಮ ವಿಚಾರಿಸಿದ ನಂತರ ಮಾತನಾಡಿದ ಅವರು ಎಂಡಿಎಫ್ ಸಂಸ್ಥೆಯ ಆಂತರಿಕ ವಿಚಾರದಲ್ಲಿ ಶಾಸಕ ಹಾಲಪ್ಪ ಅವರು ಅನಗತ್ಯವಾಗಿ ಮೂಗು ತೂರಿಸಿದ್ದಾರೆ. ಸರ್ವ ಸದಸ್ಯರ ಸಭೆಗೆ ಹಾಜರಾಗಲು ಸಂಸ್ಥೆಯ ನಿಯಮಗಳ ಪ್ರಕಾರ ಅವರಿಗೆ ಅವಕಾಶವೇ ಇಲ್ಲದೆ ಇದ್ದರೂ ತಮ್ಮ ಅಧಿಕಾರ ದರ್ಪ ತೋರಿ ಗೊಂದಲಕ್ಕೆ ಕಾರಣರಾಗಿದ್ದಾರೆ’ ಎಂದು ದೂರಿದರು.
ಶಾಸಕ ಹಾಲಪ್ಪ ಅವರಿಗೆ ಸಂಸ್ಥೆಯ ಮೇಲೆ ನಿಜವಾದ ಕಾಳಜಿ ಇದ್ದಿದ್ದರೆ ಅಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಸರ್ಕಾರದಿಂದ ಉನ್ನತ ಮಟ್ಟದ ತನಿಖೆ ನಡೆಸಬಹುದಿತ್ತು. ಅದನ್ನು ಬಿಟ್ಟು ಸಭೆಯಲ್ಲಿ ತಮ್ಮ ಬೆಂಬಲಿಗ ಗೂಂಡಾ ಪಡೆಯನ್ನು ಬಿಟ್ಟು ಸಂಸ್ಥೆಯ ಪದಾಧಿಕಾರಿಗಳ ಮೇಲೆ ಅಮಾನುಷ ಹಲ್ಲೆ ನಡೆಸಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಶಾಸಕ ಹಾಲಪ್ಪ ಅವರು ಇತ್ತೀಚಿನ ದಿನಗಳಲ್ಲಿ ತಮಗೆ ಅಧಿಕಾರದ ಬಲ ಇದೆ ಎಂದು ಎಲ್ಲರ ಮೇಲೂ ದರ್ಪ ತೋರಿಸಲು ಮುಂದಾಗಿದ್ದಾರೆ. ಊರಿನ ಎಲ್ಲಾ ಸಂಘ ಸಂಸ್ಥೆಗಳ ವಿಷಯದಲ್ಲೂ ಅನಗತ್ಯವಾಗಿ ಹಸ್ತಕ್ಷೇಪ ಮಾಡುತಿದ್ದಾರೆ.ತಮ್ಮ ಬೆಂಬಲಿಗರ ಮೂಲಕ ಜಾತಿ ಜಾತಿಗಳ ನಡುವೆ ವೈಷಮ್ಮ ಬಿತ್ತುವ ಕೆಲಸಕ್ಕೆ ಮುಂದಾಗಿರುವುದು ವಿಪರ್ಯಾಸದ ಸಂಗತಿಯಾಗಿದೆ ಎಂದರು.
ಸಾಗರದಲ್ಲಿ ಈಚೆಗೆ ನಡೆದ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಸರ್ವ ಸದಸ್ಯರ ಸಭೆಯಲ್ಲಿ ಹಲ್ಲೆಗೊಳಗಾದ ಸಂಸ್ಥೆಯ ಕಾರ್ಯದರ್ಶಿ ಜಗದೀಶ ಗೌಡ ಅವರ ಮನೆಗೆ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಬುಧವಾರ ತೆರಳಿ ಯೋಗಕ್ಷೇಮ ವಿಚಾರಿಸಿದರು.
ಈ ಸಂಧರ್ಭದಲ್ಲಿ ಗಣಪತಿ ಮಂಡಗಳಲೆ, ಅಶೋಕ್ ಬೇಳೂರು, ಸಂತೋಷ್ ಸದ್ಗುರು, ರವಿ ದೊಡ್ಮನೆ,ಬಸವರಾಜ್ ಕುಗ್ವೆ ಹಾಗೂ ಇನ್ನಿತರರಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್