ಕಲ್ಲೂರು ಗ್ರಾಮದಲ್ಲಿ ಶಾಂತವೇರಿ ಗೋಪಾಲಗೌಡರ ಜನ್ಮಶತಮಾನೋತ್ಸವ:

ಲಕ್ಷಾಂತರ ಜನರ ಬದುಕಿಗೆ ಭರವಸೆ  ತುಂಬಿದ, ಭೂಮಿ ಹಕ್ಕು ಕೊಡಿಸಲು ಮಲೆನಾಡಿನಲ್ಲಿ ಹೊತ್ತಿಸಿದ ಕಿಡಿ ರಾಜ್ಯಾದ್ಯಂತ ಹರಡಿ ಸಮ ಸಮಾಜದ ಬದುಕಿಗೆ ಕಟ್ಟಿದ ಹೊಸ ಕನಸನ್ನು ನನಸು ಮಾಡಲು ಸಾಧ್ಯ ಎಂದು ತೋರಿಸಿಕೊಟ್ಟ ಕರ್ನಾಟಕ ರಾಜಕಾರಣದಲ್ಲಿ ತಮ್ಮದೇ ಆದ ವಿಶೇಷ ಛಾಪು ಮೂಡಿಸಿರುವ ಶಾಂತವೇರಿ ಗೋಪಾಲಗೌಡರ ಚಿಂತನೆಗಳು ಇಂದಿಗೂ ಪ್ರಸ್ತುತ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದರು.

 ಭಾನುವಾರ ಸಂಜೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲೂರು ಗ್ರಾಮದಲ್ಲಿ ನಡೆದ ಶಾಂತವೇರಿ ಗೋಪಾಲಗೌಡರ ಜನ್ಮಶತಮಾನೋತ್ಸವ ಕಾರ್ಯಕ್ರಮದಲ್ಲಿ ಶಾಂತವೇರಿ ಗೋಪಾಲಗೌಡರ ನೂತನ ಸಮುದಾಯ ಭವನವನ್ನು ಉದ್ಘಾಟಿಸಿ ಮಾತನಾಡಿದ ಅವರು ಶಾಂತವೇರಿ ಗೋಪಾಲಗೌಡರ ರಾಜಕಾರಣವೆಂಬುದು ಬರಿಯ ಘೋಷಣೆಯ ನೀರಸವಾದ ಹೋರಾಟವಾಗಿರಲಿಲ್ಲ. ಇವರ ಉಳುವವನೇ ಹೊಲದೊಡೆಯ ಉದ್ಘೋಷಣೆಯ ಮೂಲಕ ರಾಜ್ಯದಲ್ಲಿ ಭೂ ಸುಧಾರಣೆ ಜಾರಿಗೆ ಬಂದಿತು. ಸುಮಾರು 7.30 ಲಕ್ಷಕ್ಕಿಂತಲೂ ಹೆಚ್ಚು ರೈತ ಕುಟುಂಬಗಳು ಭೂಮಾಲೀಕತ್ವ ಪಡೆಯಲು ಸಾಧ್ಯವಾಯುತು  ಎಂದರು.

 ಶಾಂತವೇರಿ ಗೋಪಾಲಗೌಡರ ಒಡನಾಡಿಗಳು ಹಾಗೂ ಮಾಜಿ ಸಚಿವರು ಆದ ಕಾಗೋಡು ತಿಮ್ಮಪ್ಪ ಮಾತನಾಡಿ ಕರ್ನಾಟಕದಲ್ಲಿ ಸಮಾಜವಾದಿ ರಾಜಕಾರಣವನ್ನು ತಳಮಟ್ಟದಿಂದ ರೂಪಿಸಿ ಚಳುವಳಿಯ ರಾಜಕಾರಣ ಮತ್ತು ಶಾಸನಸಭೆಯ ರಾಜಕಾರಣ ಎರಡನ್ನೂ ಬೆಸೆದ ಧೀಮಂತ ರಾಜಕಾರಣಿ ಶಾಂತವೇರಿ ಗೋಪಾಲಗೌಡರು ಆಗಿದ್ದರು. ಕರ್ನಾಟಕದ ರಾಜಕಾರಣ ಗೋಪಾಲಗೌಡ ರಲ್ಲಿ ನಿಷ್ಟುರ ಪ್ರಾಮಾಣಿಕ ರಾಜಕಾರಣಿಯ ಮಾದರಿಯನ್ನು ಆಗಾಗ್ಯೆ ಹುಡುಕುತ್ತಿರುತ್ತದೆ. ಶಾಂತವೇರಿ ಗೋಪಾಲಗೌಡರ ಹಲವಾರು ಜನಪರ ಚಳುವಳಿಗಳು ಹಾಗೂ ಹೋರಾಟಗಳು ಅವರಲ್ಲಿ ದಣಿವರಿಯದ ಚಳುವಳಿಯ ಸ್ಪೂರ್ತಿ ಮೂಲವನ್ನು ಹುಡುಕುತ್ತಿರುತ್ತದೆ ಎಂದರು.

 ಮಾಜಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮಾತನಾಡಿ ಸಾಭಿಮಾನ ಹೋರಾಟ ಪ್ರಾಮಾಣಿಕತೆಯ ಸಂಕೇತ ಸಮಾಜವಾದಿ ನಾಯಕ ಶಾಂತವೇರಿ ಗೋಪಾಲಗೌಡ ರವರು ಲಕ್ಷಾಂತರ ಜನರ ಬದುಕಿಗೆ ಭರವಸೆ ತುಂಬಿದರು. ತಮ್ಮ ಬದುಕಿನ ಕ್ಷಣ ಕ್ಷಣವನ್ನು ಜನರಿಗಾಗಿ ತೊಡಗಿಸಿಕೊಂಡ  ಮಹಾನ್ ಚೇತನ ರಾಗಿದ್ದರು ಶಾಂತವೇರಿ ಗೋಪಾಲಗೌಡರು  ಎಂದರು.

 ಶಾಂತವೇರಿ ಗೋಪಾಲಗೌಡರ ಜನ್ಮಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಬಿ. ಸ್ವಾಮಿ ರಾವ್. ಹಿರಿಯ ಸಮಾಜವಾದಿ ಪುಟ್ಟಯ್ಯ ಮಲೆನಾಡು ಪ್ರತಿನಿಧಿ ಮಂಡಳಿ ಮಾಜಿ ಅಧ್ಯಕ್ಷ ಪದ್ಮನಾಭ ಭಟ್. ಹೆದ್ದರಿಪೂರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಿತಾ ಗಂಗಾಧರ್. ಜೆಡಿಎಸ್ ರಾಜ್ಯ ಮುಖಂಡ ಆರ್. ಎ.ಬಾಬುಸಾಬ್   ಇನ್ನಿತರರಿದ್ದರು.

 ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್ ವಹಿಸಿದ್ದರು.

 ರಿಪ್ಪನ್ ಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಶ್ರೀಪತಿ ಹಳಗುಂದ  ಸಮಸಮಾಜ ಮತ್ತು ಶಾಂತವೇರಿ ಗೋಪಾಲಗೌಡರ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

5 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

6 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

7 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

1 day ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

1 day ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

1 day ago