ತರಗತಿಯಲ್ಲಿ ಹಿಜಾಬ್ ಧರಿಸಿ ವಿಧ್ಯಾರ್ಥಿನಿಯರು ಹಾಜರ್ : ಸಿಹಿ ಹಂಚಿ, ಹಿಜಾಬ್ ಗೆ ಅಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಮುಖಂಡರು

ರಿಪ್ಪನ್‌ಪೇಟೆ: ಶಾಸಕ ಹರತಾಳು ಹಾಲಪ್ಪರ ಹುಟ್ಟು ಹಬ್ಬದ ಪ್ರಯುಕ್ತ ಪಟ್ಟಣದ ಬಿಜೆಪಿ ಕಾರ್ಯಕರ್ತರು ಶ್ರೀಸಿದ್ಧಿವಿನಾಯಕ ಸ್ವಾಮಿಗೆ ವಿಶೇಷ ಪೂಜೆ ನೆರವೇರಿಸಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಮಕ್ಕಳಿಗೆ ಸಿಹಿ ವಿತರಿಸುವ ಸಂದರ್ಭದಲ್ಲಿ ಹಿಜಾಬ್‌ಗೆ ಆಕ್ಷೇಪವ್ಯಕ್ತ ಪಡಿಸಿರುವ ಘಟನೆ ಇಂದು ನಡೆದಿದೆ.
ವಿಶೇಷ ಪೂಜೆಯ ನಂತರ ಪಕ್ಕದ ಸರ್ಕಾರಿ ಶಾಲೆಗೆ ತೆರೆಳಿದ ಬಿಜೆಪಿ ಮುಖಂಡರ ತಂಡ ತರಗತಿಯ ಒಳಗಡೆ ಮಕ್ಕಳಿಗೆ ಸಿಹಿ ಹಂಚುವ ಸಮಯದಲ್ಲಿ ಕೆಲವಿದ್ಯಾರ್ಥಿನಿಯರು ಹಿಜಾಬ್ ಧರಿಸಿರುವುದು ಗಮನಿಸಿದ್ದಾರೆ. ಅಸಮಧಾನಗೊಂಡ ಮುಖಂಡರು ಮುಖ್ಯಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡು ಶಾಲಾ ಕೊಠಡಿಯಲ್ಲಿ ಕೆಲ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಹಿಜಾಬ್ ಹಾಕಿರುವುದನ್ನು ವಿರೋಧಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನ್ಯಾಯಾಲಯದ ಮಧ್ಯಂತರ ಆದೇಶವನ್ನು ಕಟ್ಟನಿಟ್ಟಾಗಿ ಪಾಲಿಸಲೆ ಬೇಕು ಎಂದು ತಾಕೀತು ಮಾಡಿದ ನಂತರ ಸಮಾಧಾನಿತರಾಗದ ಮುಖಂಡರು ಪೊಲೀಸ್ ಠಾಣೆಗೆ ತೆರಳಿ ಇಲಾಖಾ ಅಧಿಕಾರಿಗಳಿಗೆ ಶಾಲೆಯಲ್ಲಿ ಹಿಜಾಬ್ ನಿರ್ಬಂಧಿಸುವಂತೆ ಮೌಖಿಕವಾಗಿ ಒತ್ತಾಯಿಸಿದ್ದಾರೆ.
ಈ ಘಟನೆಯ ಮಾಹಿತಿ ಅರಿತ ಕೆಲ ಪೋಷಕರು ಶಾಲೆ ಎದುರು ಜಮಾವಣೆಗೊಂಡು ಪ್ರಾಥಮಿಕ ಶಾಲೆಗಳಿಗೆ ನಿಯಮ ಅನ್ವಯವಾಗುವುದಿಲ್ಲ. ಉದ್ದೇಶ ಪೂರ್ವಕವಾಗಿ ಕೆಲವರು ಅನಗತ್ಯ ಗೊಂದಲ ಸೃಷ್ಠಿಸುತ್ತಿದ್ದಾರೆ. ಎಂದಿನಂತೆಯೇ ಮುಂದೆಯೂ ಎಲ್ಲಾ ಮಕ್ಕಳು ಒಟ್ಟಿಗೆ ಸೇರಿ ಕಲಿಯುವಂತಾಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಘಟನೆಯ ವಿಷಯ ತಿಳಿದ ಹೊಸನಗರ ವೃತ್ತ ನಿರೀಕ್ಷಕ ಮಧುಸೂದನ್ ಸ್ಥಳಕ್ಕಾಗಮಿಸಿ ಪೋಷಕರು, ಶಿಕ್ಷಕರು ಹಾಗೂ ಆಕ್ಷೇಪಿತರೊಂದಿಗೆ ಸಮಾಲೋಚನೆ ನಡೆಸಿ, ಘಟನೆಯನ್ನು ತಹಬದಿಗೆ ತರಲು ಸಫಲರಾದರು.
“ಶಾಲೆಯಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು ಹಿಜಾಬ್ ಧರಿಸಿರುವುದು ಕಂಡುಬಂದ ಹಿನ್ನೆಲೆಯಲ್ಲಿ ನ್ಯಾಯಾಲಯದ ಮಧ್ಯಂತರ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದ್ದೇವೆ. ನಿಮ್ಮ ಈ ಅಸಮರ್ಥ ಧೋರಣೆಯಿಂದ ಸಮಸ್ಯೆ ದೊಡ್ಡದು ಮಾಡಬೇಡಿ, ಕೂಡಲೆ ಕ್ರಮ ವಹಿಸಬೇಕೆಂದು ಸಲಹೆ ನೀಡಿದ್ದೇವೆ” ಎಂದು ಬಿಜೆಪಿ ಮುಖಂಡ ಆರ್.ಟಿ. ಗೋಪಾಲ್ ಹೇಳಿದರು.
ಈ ಸಂಧರ್ಭದಲ್ಲಿ ಮಾತನಾಡಿದ ಪೋಷಕರಾದ ಮೈಮುನಾ “ಮುಸಲ್ಮಾನರು ಇತ್ತೀಚೆಗೆ ಆಕಾಶದಿಂದ ಇಳಿದವರಲ್ಲ. ಹಿಂದಿನಿಂದಲೂ ಸಮಾಜದಲ್ಲಿ ಎಲ್ಲರೂ ಒಟ್ಟಾಗಿಯೇ ಬಾಳುತ್ತಿದ್ದೇವೆ. ಶಾಲೆಗಳಲ್ಲಿ ಗೊಂದಲ ಸೃಷ್ಠಿಸುವುದು ಸರಿಯಲ್ಲ. ಒಂದರಿಂದ ೮ ನೇ ತರಗತಿವರೆಗೆ ಹಿಜಾಬ್ ಬಗ್ಗೆ ಸ್ಪಷ್ಟತೆಯಿಲ್ಲ. ನಮ್ಮ ಮಕ್ಕಳ ಶಿಕ್ಷಣಕ್ಕೆ ಅನಾವಶ್ಯಕ ತೊಂದರೆ ನೀಡಬೇಡಿ” ಎಂದರು.
“ನ್ಯಾಯಾಲಯದ ಆದೇಶವನ್ನು ಪಾಲಿಸುವಂತೆ ಈ ಮೊದಲೆ ಎಲ್ಲರಿಗೂ ಸೂಚನೆ ನೀಡಲಾಗಿತ್ತು. ಇಲಾಖ ಅಧಿಕಾರಿಗಳಿಂದ ಯಾವುದೇ ಸ್ಪಷ್ಟ ಸಂದೇಶ ಬಂದಿರಲಿಲ್ಲ.” ಎಂದು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಮುಖ್ಯ ಶಿಕ್ಷಕಿ ಲೋಲಾಕ್ಷಿ ಹೇಳಿದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…

17 hours ago

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…

17 hours ago

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…

17 hours ago

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್ ಕತ್ತರಿಸಬೇಕೋ?

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…

20 hours ago

ಈದ್ ಮಿಲಾದ್ ಹಬ್ಬ ಶಾಂತಿಯುತ ಆಚರಣೆಗೆ ಪೊಲೀಸ್ ಸೂಚನೆ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ

ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…

23 hours ago

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…

24 hours ago