ತೀರ್ಥಹಳ್ಳಿಯಲ್ಲಿ ಪ್ರತಿದಿನ ನೆಡೆಯುತ್ತಿದ್ದ ಪ್ರಸಿದ್ಧ ತುಂಗಾ ಆರತಿ ನಿಂತಿದ್ದು ಹೇಗೆ…? ಯಾರಿಂದ….?

ತೀರ್ಥಹಳ್ಳಿ : ಪ್ರಧಾನಿ ನರೇಂದ್ರ ಮೋದಿ ಕಾಶಿಯ ವಿಶ್ವನಾಥ ದೇವಸ್ಥಾನದಲ್ಲಿ ಗಂಗಾ ಆರತಿ ಮಾಡಿದ್ದ ಹಾಗೆ ಕರ್ನಾಟಕ ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಮಲೆನಾಡಿನ ತೀರ್ಥಹಳ್ಳಿಯಲ್ಲಿ ಕುರುವಳ್ಳಿಯ ಕಾಶಿ ದೀಕ್ಷಿತ್ ಇವರ ನೇತೃತ್ವದಲ್ಲಿ ತುಂಗಾ ಆರತಿಯನ್ನು ಮಾಡಲಾಯಿತು. ಇದಕ್ಕೆ ತೀರ್ಥಹಳ್ಳಿಯ ಜನಪ್ರತಿನಿಧಿಗಳಿಂದ ಹಾಗೂ ಸಾರ್ವಜನಿಕರಿಂದ ಪ್ರಶಂಸೆ ಕೂಡ ವ್ಯಕ್ತವಾಯಿತು. 

ನಂತರ ತೀರ್ಥಹಳ್ಳಿಯ ತಹಸೀಲ್ದಾರ್ ಡಾ. ಶ್ರೀಪಾದ್ ಇವರ ಮಾರ್ಗದರ್ಶನದಲ್ಲಿ ತೀರ್ಥಹಳ್ಳಿಯಲ್ಲಿ ಪ್ರತಿದಿನ ಸಂಜೆ ಮುಜರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳ ಅರ್ಚಕರು ಒಂದೊಂದು ತಿಂಗಳು ತುಂಗೆಗೆ ಆರತಿ ನೆಡೆಸಲಿ ಎಂದು ಮೌಖಿಕವಾಗಿ ಆದೇಶದ ರೂಪದಲ್ಲಿ ತಿಳಿಸಿದ್ದರು. 

ಆದರೆ ತಾಲೂಕು ಆಡಳಿತ ಮೊದಮೊದಲಿಗೆ ಇದರ ಬಗ್ಗೆ ಹೆಚ್ಚಿನ ಗಮನ ವಹಿಸಿ ನಂತರ ಇದರ ಬಗ್ಗೆ ಗಮನ ವಹಿಸದ  ಕಾರಣ ಸತತವಾಗಿ 6 -8 ತಿಂಗಳ ಕಾಲ ಅತ್ಯಂತ ವಿಜೃಂಭಣೆಯಿಂದ ನೆಡೆದುಕೊಂಡು ಬಂದಿದ್ದ ತುಂಗಾ ಆರತಿ ಕಾರ್ಯಕ್ರಮಕ್ಕೆ ಸತತ 3 ತಿಂಗಳಿನಿಂದ ಬ್ರೇಕ್ ಬಿದ್ದಿದೆ. ಕಾಶಿ ದೀಕ್ಷಿತ್ ಅವರು ಈ ತುಂಗಾ ಆರತಿಯನ್ನು ತುಂಬಾ ಅಚ್ಚುಕಟ್ಟಾಗಿ ನೆಡೆಸಿಕೊಡುತ್ತಿದ್ದರು. ಆದರೆ ನಂತರದಲ್ಲಿ ತುಂಗಾ ಆರತಿ ಮಾಡಲು ತಮ್ಮ ಸಮಯ ಬಂದಾಗ ಕೆಲವೊಂದು ಅರ್ಚಕರು ಇದರ ಬಗ್ಗೆ ಆಸಕ್ತಿ ವಹಿಸಲಿಲ್ಲವೋ ಅಥವಾ ಇದಕ್ಕೆ ತಾಲೂಕು ಆಡಳಿತ ಗಮನ ವಹಿಸದೇ  ನಿರ್ಲಕ್ಷ್ಯ ವಹಿಸಿತೋ ಗೊತ್ತಿಲ್ಲ ಒಟ್ಟಿನಲ್ಲಿ ಅತ್ಯಂತ ವಿಜೃಂಭಣೆಯಿಂದ ನೆಡೆಯುತ್ತಿದ್ದ ತೀರ್ಥಹಳ್ಳಿಯ  ತುಂಗಾ ಆರತಿ ಕಾರ್ಯಕ್ರಮಕ್ಕೆ ಬ್ರೇಕ್ ಬಿದ್ದಿದೆ. 

ಅದೇನೇ ಆಗಲಿ ಯಾರಿಂದ ಆದರೂ ಕಾರ್ಯಕ್ರಮ ನಿಂತಿರಲಿ ಈಗ ಬರುವ ಯುಗಾದಿ ಹಬ್ಬದಿಂದ ಮತ್ತೊಮ್ಮೆ ತೀರ್ಥಹಳ್ಳಿಯಲ್ಲಿ ತುಂಗಾ ಆರತಿ ಕಾರ್ಯಕ್ರಮ ಮುಂದುವರಿಯಲಿ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.


ವಿಶೇಷ ವರದಿ : ಅಕ್ಷಯ್ ಕುಮಾರ್

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು Ripponpete: Akhila Karnataka Building Workers Organization district president…

12 hours ago

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ Ripponpete's Apeksha K. secured second place and runner-up…

15 hours ago

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined…

15 hours ago

ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ

ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ College student threatened and robbed of…

1 day ago

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…

1 day ago

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

2 days ago