ಸಾಗರ ತಾಲ್ಲೂಕು ಕುಗ್ವೆ ಬಳಿಯ ತಿರುವಿನಲ್ಲಿ ಬಸ್ ಮತ್ತು ದ್ವಿಚಕ್ರ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಬಸ್ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಸಾಗರ ಸಮೀಪದ ತಲವಾಟ ಗ್ರಾಮ ಪಂಚಾಯಿತಿ ಇಡುವಾಣಿ ಗ್ರಾಮದ ವಾಸಿಯಾದ ದ್ವಿಚಕ್ರ ವಾಹನ ಸವಾರ ಅನಿಲ್ ಎಂಬುವವನು ಮೃತಪಟ್ಟಿದ್ದು.ಮೃತ ವ್ಯಕ್ತಿಯ ತಂದೆ ಈಶ್ವರ ಎಂಬುವವರು ಗಂಭೀರ ಗಾಯಗೊಂಡಿದ್ದು ಸಾಗರ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.