ಬಿಜೆಪಿಯವರ ಮಾತನ್ನು ಕೇಳುವ ಪೊಲೀಸರು ಕೇಸರಿ ಸಮವಸ್ತ್ರ ತೊಡಲಿ : ಮಾಜಿ ಸಚಿವ ಕಿಮ್ಮನೆ ರತ್ನಾಕರ್

ತೀರ್ಥಹಳ್ಳಿ:ಕೇಂದ್ರ ಮತ್ತು ರಾಜ್ಯ ಎರಡು ಕಡೆಗಳಲ್ಲಿ   ಆಡಳಿತ ನಡೆಸುತ್ತಿರುವ ಬಿಜೆಪಿ ಪಕ್ಷ   ಸಮಾಜದ ಸ್ವಾಸ್ಥ್ಯ ಕಾಪಾಡುವ ಬದಲಿಗೆ ಪ್ರತಿದಿನ ಜನರ ಹೃದಯ ಕೊಲ್ಲುವ ಕೆಲಸವನ್ನು ಮಾಡುತ್ತಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದರು.

ಶುಕ್ರವಾರ ಪಟ್ಟಣದ ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ಹಿಜಾಬ್  ನಿಂದ ಪ್ರಾರಂಭವಾದ ಘಟನೆ ಇಂದು ವ್ಯಾಪಾರಕ್ಕೆ ನಿರ್ಬಂಧ ಹಾಕುವ ಮಟ್ಟಕ್ಕೆ ಬಂದು ನಿಂತಿದೆ.ಸಮಾಜವನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಒಬ್ಬ ನಾಯಕರು ಬಿಜೆಪಿ ಪಕ್ಷದಲ್ಲಿ ಇಲ್ಲ ಮೋದಿಗೂ ಪುಟಿನ್ ಗೂ ಯಾವುದೇ ವ್ಯತ್ಯಾಸವಿಲ್ಲ ಮೋದಿ ಆಡಳಿತಕ್ಕೆ ಬಂದ 8ವರ್ಷದಿಂದ ಧರ್ಮಕ್ಕೆ ಸಂಬಂಧಿಸಿದ ಕಾನೂನುಗಳು ತಂದಿದೆ ಹೊರತು ಜನಪರವಾದ ಯಾವುದೇ ಕಾರ್ಯಕ್ರಮಗಳನ್ನು ತಂದಿರುವ ಉದಾಹರಣೆ ಇಲ್ಲ,ಬೆಲೆ ಏರಿಕೆ ನಿರುದ್ಯೋಗ ಸಮಸ್ಯೆ ಬಗ್ಗೆ ಯಾವ ಕ್ರಮವನ್ನೂ ಕೇಂದ್ರ ರಾಜ್ಯ ಸರ್ಕಾರ  ಕೈಗೊಂಡಿಲ್ಲ ಪ್ರತಿದಿನ ಬೆಲೆ ಏರಿಕೆಯಿಂದ ಸಾರ್ವಜನಿಕರು ಹೈರಾಣಾಗಿ ಹೋಗಿದ್ದಾರೆ ಇನ್ನೂ ನಿರುದ್ಯೋಗಿಗಳು ಸಾಯುವ ಪರಿಸ್ಥಿತಿ ಬಂದು ತಲುಪಿದ್ದಾರೆ  ಎಂದು ಬಿಜೆಪಿ ಆಡಳಿತ ಹಾಗೂ ಗೃಹ ಸಚಿವರ ವಿರುದ್ಧ ತಮ್ಮ ಮಾತಿನ ಸುರಿಮಳೆಗೈದರು .

ಇನ್ನು ತಾಲ್ಲೂಕಿನಲ್ಲಿ ಗೃಹ ಸಚಿವರ ಬೆಂಬಲಿಗರು ಅಕ್ರಮ ಮರಳು ಗಣಿಗಾರಿಕೆಯಲ್ಲಿ  ತೊಡಗಿದ್ದು ಬುಕ್ಲಾಪುರದ ಸರ್ಕಾರಿ ಕ್ವಾರೆ ಹೆಸರಿನಲ್ಲಿ ಯಾವುದೇ ಪರವಾನಿಗೆ ಇಲ್ಲದೆ ದಿನಕ್ಕೆ ಲಕ್ಷಾಂತರ ರೂಪಾಯಿ ಮರಳು ಅಕ್ರಮ ಸಾಗಣೆ ಆಗುತ್ತಿದೆ. ನನ್ನ ಅವಧಿಯಲ್ಲಿ 23 ಕ್ವಾರೆ ಇದ್ದು ಮರಳು ಕೊರೆಯವರಿಗೂ ನನಗೂ ಸಂಪರ್ಕವೇ ಇರಲಿಲ್ಲ. ಅಂದು ಬೆಳಿಗ್ಗೆ ಎದ್ದಾಗ ನಾವು ಜಮೀನಿಗೆ ಹೊದರೆ ಆರಗ ಮರಳು ಕ್ವಾರೆಗೆ  ಹೋಗುತ್ತಿದ್ದರು. ಇಂದು ಮರಳು ಕ್ವಾರೆ ಬಗ್ಗೆ ಸಚಿವರ ಮಾತೆ ಇಲ್ಲವಾಗಿದೆ.

ಬಂದೂಕು ತರಬೇತಿ ಹೆಸರಿನಲ್ಲಿ
ಅವರ ಬೆಂಬಲಿಗರು ಹಣ ಹೊಡೆಯುತ್ತಿದ್ದಾರೆ .ನನ್ನ ಅವಧಿಯಲ್ಲಿ ಕೂಡ ಬಂದೂಕು ತರಬೇತಿಯನ್ನು ನಡೆಸಿದ್ದು ಕಾರ್ಯಕ್ರಮಕ್ಕೆ 1200 ವೆಚ್ಚ ತಗಲಿತ್ತು ಆದರೆ ಇಂದು ತರಬೇತಿ ಹೆಸರಿನಲ್ಲಿ ಬಿಜೆಪಿ ಪ್ರಮುಖರು 26  ಲಕ್ಷಕ್ಕೂ ಹೆಚ್ಚು ಹಣ ಸಂಗ್ರಹಿಸಿದ್ದಾರೆ
ಇದಕ್ಕೆ ಸೂಕ್ತ ದಾಖಲೆ ಎಸ್ ಪಿ, ಡಿವೈಎಸ್ಪಿ ಕೊಡದಿದ್ದರೆ ಪಟ್ಟಣದ ಪೊಲೀಸ್ ಠಾಣೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನು ನೀಡಿದರು. ನಾಲ್ಕು ವರ್ಷಗಳ ಅವಧಿಯಲ್ಲಿ ಇವರು ಎಷ್ಟು ಬಗರ್ ಹುಕುಂ ಅರ್ಜಿ ಮಂಜೂರು ಮಾಡಿದ್ದಾರೆ ಎಂದು ಜನರಿಗೆ ತಿಳಿಸಲಿ ಇದರ ಬಗ್ಗೆ ದಿನ ನಿತ್ಯ ಹೋರಾಟ ಮಾಡಬೇಕು. ಆನೆ ಹಿಡಿಯುವ ಬಗ್ಗೆ ಆರಗ ನನ್ನ ಅವಧಿಯಲ್ಲಿ ಆಗುಂಬೆಯಿಂದ ತೀರ್ಥಹಳ್ಳಿ ವರೆಗೆ ಕಪ್ಪೆ ಯಾತ್ರೆ ಮಾಡಿದ್ದರು. ಆದರೆ ಇವರ ಆಳ್ವಿಕೆಯ ಅವಧಿಯಲ್ಲಿ ತಾಲೂಕಿನ ಆಗುಂಬೆ, ಉಂಬ್ಳೇಬೈಲು ಕಡೆಗಳಲ್ಲಿ ನಿತ್ಯ ಆನೆಗಳು ಓಡಾಡುತ್ತಲೇ ಇದ್ದು  ಈಗ ಆನೆ ಹಿಡಿಯುವ ಗೋಜಿಗೆ ಹೋಗದೆ ಆನೆಯಿಂದ ರೈತರ ತೋಟ, ಜಮೀನುಗಳಲ್ಲಿ ತೊಂದರೆ ಆದವರಿಗೆ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಮುಂದಾಗಿಲ್ಲ. ತೀರ್ಥಹಳ್ಳಿ ವಿಧಾನಸಭಾ  ಕ್ಷೇತ್ರದಲ್ಲಿನ ಪೋಲಿಸ್ ಠಾಣೆಯಲ್ಲಿ  ಬಿಜೆಪಿಯವರು ದೂರು ಕೊಟ್ಟರೆ ಕೇಸು ದಾಖಲಿಸುತ್ತಾರೆ.

ಬೇರೆ ವ್ಯಕ್ತಿಗಳು ಯಾರೇ ದೂರು  ನೀಡಿದರೂ ಯಾವುದೇ ಕ್ರಮ ಕೈಗೊಳ್ಳುವುದು ಇಲ್ಲ ನಮ್ಮವರನ್ನು ಬಿಡಿ ಎದುರು ಗಡೆಯವರನ್ನು ಒಳಗೆ ಹಾಕಿ ಎಂದು ಸಚಿವರು ಹೇಳುತ್ತಾರೆ ಗೃಹ ಸಚಿವರು ಹೇಳಿದ ಹಾಗೆ ಕೇಳುವ ಕ್ಷೇತ್ರದ ಪೊಲೀಸರಿಗೆ ಕೇಸರಿ ಸಮವಸ್ತ್ರ ನೀಡಲಿ ಎಂಬುದಾಗಿ ಪತ್ರಿಕಾಗೋಷ್ಠಿಯಲ್ಲಿ ಆಡಳಿತ ನಾಯಕರ ದುರಾಡಳಿತ ವಿರುದ್ಧ ಹರಿಹಾಯ್ದರು.

ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಸದಸ್ಯ ಜಿ ಎಸ್ ನಾರಾಯಣ್ ರಾವ್,
ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ರಾದ ಕೆಸ್ತೂರು ಮಂಜುನಾಥ್
ತೀರ್ಥಹಳ್ಳಿ ಪಟ್ಟಣ ಪಂಚಾಯತ್ ಅಧ್ಯಕ್ಷೆ ಶಬನಮ್,
ಉಪಾಧ್ಯಕ್ಷ ಜಯಪ್ರಕಾಶ್ ಶೆಟ್ಟಿ ,ವಿಲಿಯಂ ಮಾರ್ಟಿಸ್, ಎಲ್ಲಪ್ಪ
ಸೇರಿದಂತೆ ಇತರರು ಉಪಸ್ಥಿತರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್ ವರದಿ ಅನ್ವಯ? ಇಲ್ಲಿದೆ ಸಂಪೂರ್ಣ ಪಟ್ಟಿ

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್…

4 hours ago

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?…

11 hours ago

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ Former Karnataka Education Minister and Tiptur…

1 day ago

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ Sagara Rural Police arrested…

1 day ago

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan…

1 day ago

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in…

1 day ago