ಭದ್ರಾವತಿ : ಇಲ್ಲಿನ ಬೊಮ್ಮನಕಟ್ಟೆಯ ಲಕ್ಷ್ಮಮ್ಮ ಎಂಬುವವರು ಕಳೆದ ವರ್ಷ ನವೆಂಬರ್ ನಲ್ಲಿ ಹೊಳೆಸಿದ್ದಾಪುರ ವಾಸಿ ಕೌಶಿಕ್ ಎಂಬುವವರಿಗೆ ಬೊಮ್ಮನಕಟ್ಟೆಯಲ್ಲಿರುವ ಮನೆಯನ್ನು ಮಾರಾಟ ಮಾಡಿ ಹಣವನ್ನು ಪಡೆದು ಈಗ ಹೈಡ್ರಾಮ ನಡೆಸುತ್ತಿರುವ ಘಟನೆ ನಡೆದಿದೆ.
ಹೌದು !! ಮನೆಯನ್ನು ಕಾನೂನು ಪ್ರಕಾರವಾಗಿ 31ಲಕ್ಷ 32000 ಸಾವಿರ ರೂಗಳಿಗೆ ವ್ಯಾಪಾರ ಮಾಡಿ ಹಣ ಪಡೆದು ಭದ್ರಾವತಿ ನೋಂದಣಿ ಕಛೇರಿಯಲ್ಲಿ ಸ್ವತಃ ಅವರೇ ನೋಂದಣಿ ಮಾಡಿಕೊಟ್ಟು ಈಗ ಹೈಡ್ರಾಮ ನಡೆಸಿ ದೇಶಕ್ಕಾಗಿ 20 ವರ್ಷ ಸೈನ್ಯದಲ್ಲಿ ಕಾರ್ಯ ನಿರ್ವಹಿಸಿ ಈಗ ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಂಜುನಾಥ್ ರವರ ತೇಜೋವಧೆ ನಡೆಸುವ ಹುನ್ನಾರ ಮಾಡುತಿದ್ದಾರೆ.
ನಡೆದಿದ್ದಾರು ಏನು ???
ಮೊನ್ನೆ ದಿನ ಬೊಮ್ಮನಕಟ್ಟೆಯಲ್ಲಿ ಕೌಶಿಕ್ ಒಡೆತನದ ಮನೆಯ ಬಳಿ ಹಳೆಯ ಮಾಲೀಕರಾದ ಲಕ್ಷ್ಮಮ್ಮ ಎಂಬುವವರು ಬಂದು ತೀರಾ ಹೈಡ್ರಾಮ ನಡೆಸಿದ್ದಾರೆ.ಈ ಸಂಧರ್ಭದಲ್ಲಿ ಗಲಾಟೆ,ಹೊಡೆದಾಟ ಜೊತೆಗೆ ಅಪ್ರಾಪ್ತೆಯ ಮೇಲೆ ದೌರ್ಜನ್ಯ ಮಾಡಿದ್ದಾರೆ ಹಾಗೆ ಹೀಗೆ ಎಂದು ವಿಭಿನ್ನ ಕಥೆ ಕಟ್ಟಿ ದೂರು ಕೂಡ ದಾಖಲಿಸಿದ್ದಾರೆ.
ಕಾರಣ ಲಕ್ಷ್ಮಮ್ಮ ರವರಿಂದ ಮನೆ ಖರೀದಿ ಮಾಡಿರುವ ಹಳೆಸಿದ್ದಾಪುರ ನಿವಾಸಿ ಕೌಶಿಕ್ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಂಜುನಾಥ್ ಎಂಬುವವರ ಪುತ್ರ.ಮಂಜುನಾಥ್ ರವರಿಗೆ ಅವರದೇ ಇಲಾಖೆಯಲ್ಲಿ ಕೆಲ ಹಿತಶತ್ರುಗಳಿದ್ದು ಅವರ ಕುಮ್ಮಕ್ಕು ಕೂಡಾ ಇದೆ ಎನ್ನಲಾಗುತ್ತಿದೆ.
ಹೈಡ್ರಾಮ ಯಾಕೆ ????
ಬೊಮ್ಮನಕಟ್ಟೆಯ ಮನೆಯ ಹಳೆ ಮಾಲೀಕರಾದ ಲಕ್ಷ್ಮಮ್ಮ ಅವರ ಒಪ್ಪಿಗೆಯಲ್ಲಿಯೇ ಮನೆ ಮಾರಾಟ ಮಾಡಿದ್ದು ಈಗ ಅವರ ಹಿಂದೆ ಜಿಲ್ಲೆಯ ಚಾಲಾಕಿ ಮಹಿಳೆಯೊಬ್ಬಳ ಕರಿನೆರಳು ಇದೆ ಎಂದು ಬೊಮ್ಮನಕಟ್ಟೆ ನಿವಾಸಿಗಳು ಮಾತನಾಡಿಕೊಳ್ಳುತಿದ್ದಾರೆ.
ಒಟ್ಟಾರೆಯಾಗಿ ಇಲ್ಲಿನ ಮೂಲ ಸಮಸ್ಯೆಯ ಚಿತ್ರಣವನ್ನು ಪೊಲೀಸ್ ಇಲಾಖೆ ಕೂಲಂಕುಷವಾಗಿ ಪರಿಶೀಲಿಸಿದರೆ ಸಾಕು ಯಾರ ತಪ್ಪು ಯಾರ ಸರಿ ಎಂಬುವುದು ತಿಳಿಯುತ್ತದೆ.ಹಾಗೇಯೆ ಕ್ಷುಲ್ಲಕ ಆರೋಪಗಳಿಗೆ ಬೆಂಬಲಿಸದೇ ದೇಶಕ್ಕಾಗಿ ಭಾರತೀಯ ಸೇನೆಯಲ್ಲಿ 20 ವರ್ಷಗಳ ಸೇವೆ ಸಲ್ಲಿಸಿ ಈಗ ಪೊಲೀಸ್ ಇಲಾಖೆಯಲ್ಲಿ ನಿಷ್ಟಾವಂತರಾಗಿ ಕಾರ್ಯನಿರ್ವಹಿಸುತ್ತಿರುವ ಮಂಜುನಾಥ್ ರವರಿಗೆ ಗೌರವ ಸೂಚಿಸುವುದು ಕೂಡಾ ಇಲಾಖೆಯ ಬಹುಮುಖ್ಯ ಜವಬ್ದಾರಿಯಾಗಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್