ಇಡೀ ರಾಷ್ಟ್ರದಲ್ಲಿ ಸುದ್ದಿಯಾಗಿ, ಪ್ರಪಂಚದ ಗಮನ ಸೆಳೆದು ರಾಜ್ಯಾದ್ಯಂತ ಕಳೆದೆರಡು ತಿಂಗಳಿಂದ ಸಂಘರ್ಷದ ವಾತಾವರಣ ಹುಟ್ಟುಹಾಕಿದ್ದ ಹಿಜಾಬ್ ವಿವಾದಕ್ಕೆ ಸಂಬಂಧಿಸಿದ ಮಹತ್ವದ ತೀರ್ಪನ್ನು ಮಂಗಳವಾರ ಬೆಳಗ್ಗೆ 10.30 ಕ್ಕೆ ಪ್ರಕಟಿಸುವುದಾಗಿ ಕರ್ನಾಟಕ ಹೈಕೋರ್ಟ್ ಹೇಳಿದೆ.
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧಿಸಿರುವ ಕ್ರಮ ಹಾಗೂ ಈ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ 11ನೇ ದಿನಗಳ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ ಕೃಷ್ಣ ಎಸ್. ದೀಕ್ಷಿತ್ ಹಾಗೂ ನ್ಯಾ. ಖಾಜಿ ಜೈಬುನ್ನಿಸಾ ಅವರಿದ್ದ ತ್ರಿಸದಸ್ಯ ನ್ಯಾಯಪೀಠ ತೀರ್ಪು ಕಾಯ್ದಿರಿಸಿತ್ತು.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಲ್ಲಿಕೆಯಾಗಿದ್ದ 10ಕ್ಕೂ ಹೆಚ್ಚು ಮುಖ್ಯ ಅರ್ಜಿಗಳು 25ಕ್ಕೂ ಹೆಚ್ಚು ಮಧ್ಯಂತರ ಅರ್ಜಿಗಳನ್ನು ಸತತ 11 ದಿನಗಳ ಕಾಲ 25 ತಾಸುಗಳಿಗೂ ಹೆಚ್ಚು ಸಮಯ ಹೈಕೋರ್ಟ್ ವಿಚಾರಣೆ ನಡೆಸಿತ್ತು.ಅರ್ಜಿದಾರರು ಅಲ್ಲದೇ ಸರ್ಕಾರ, ಕಾಲೇಜು ಅಭಿವೃದ್ಧಿ ಸಮಿತಿ, ಶಿಕ್ಷಕರು ಸೇರಿದಂತೆ ಉಳಿದ ಪ್ರತಿವಾದಿಗಳ ಪರವಾಗಿ ಒಟ್ಟು 25ಕ್ಕೂ ಹೆಚ್ಚು ವಕೀಲರು ತಮ್ಮ ವಾದಗಳನ್ನು ಮಂಡಿಸಿದ್ದರು.
ಉಡುಪಿಯ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನಲ್ಲಿ ಹಿಜಾಬ್ ನಿರ್ಬಂಧಿಸಿರುವುದನ್ನು ಪ್ರಶ್ನಿಸಿ ಕಾಲೇಜಿನ ಐವರು ವಿದ್ಯಾರ್ಥಿನಿಯರು, ಸಮವಸ್ತ್ರದ ಜೊತೆಗೆ ಹಿಜಾಬ್ ಧರಿಸಿ ತರಗತಿಗಳಿಗೆ ಹಾಜರಾಗಲು ಅನುಮತಿ ನೀಡುವಂತೆ ಕೋರಿ ಕುಂದಾಪುರದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಅರ್ಜಿಗಳನ್ನು ಸಲ್ಲಿಸಿದ್ದರು. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧಿಸಿ ರಾಜ್ಯ ಸರ್ಕಾರ ಫೆ.5ರಂದು ಹೊರಡಿಸಿರುವ ಆದೇಶವನ್ನೂ ಅರ್ಜಿಗಳಲ್ಲಿ ಪ್ರಶ್ನಿಸಲಾಗಿತ್ತು.
ನಾಳೆ ಹಿಜಾಬ್ ತೀರ್ಪು.. ಬೆಂಗಳೂರಲ್ಲಿ ಇಂದಿನಿಂದ 1 ವಾರ ನಿಷೇಧಾಜ್ಞೆ
ನಾಳೆ ಹಿಜಾಬ್ ಕೇಸ್ ಕುರಿತು ಹೈಕೋರ್ಟ್ ತನ್ನ ತೀರ್ಪು ನೀಡಲಿದೆ. ಹೈಕೋರ್ಟ್ ತ್ರಿಸದಸ್ಯ ಪೀಠ ಹಿಜಾಬ್ ಕೇಸ್ ಕುರಿತು ತೀರ್ಪು ನೀಡಲಿರುವ ಕಾರಣ ಯಾವುದೇ ಅನಾಹುತ ಸಂಭವಿಸಿದಂತೆ ಬೆಂಗಳೂರಿನ ಎಲ್ಲಾ ಡಿಸಿಪಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕಮಲ್ ಪಂತ್ ಸಂವಾದ ನಡೆಸಿದ್ದಾರೆ.
ಸಭೆ ಬಳಿಕ ಎಲ್ಲಾ ಶಾಲಾ ಕಾಲೇಜುಗಳ ಬಳಿ ಭದ್ರತೆ ಹೆಚ್ಚಳಕ್ಕೆ ಸೂಚನೆ ನೀಡಿದ್ದಾರೆ.
ಈ ಸಂಬಂಧ ಮಾತಾಡಿದ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್, ಇಂದಿನಿಂದ 1 ವಾರ ಕಾಲ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಯಾವುದೇ ಅನಾಹುತ ಸಂಭವಿಸದಂತೆ ಅಗತ್ಯ ಕ್ರಮಗಳನ್ನ ಕೈಗೊಳ್ಳಲಾಗಿದೆ. ನಗರದಲ್ಲಿ ಭದ್ರತೆಗಾಗಿ 10,000ಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಲಾಗುವುದು ಎಂದರು.
ಯಾವುದೇ ಪ್ರತಿಭಟನೆಗೆ ಅವಕಾಶವಿಲ್ಲ. ಹೆಚ್ಚುವರಿಯಾಗಿ ಕೆಎಸ್ಆರ್ಪಿ, ಸಿಎಆರ್ ತುಕಡಿ ನಿಯೋಜನೆ ಮಾಡಲಾಗುತ್ತೆ. ಹೈಕೋರ್ಟ್ ಆದೇಶ ಎಲ್ಲರೂ ಗೌರವಿಸಬೇಕು ಎಂದು ಹೇಳಿದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್