ರಿಪ್ಪನ್ ಪೇಟೆ : ಇಲ್ಲಿನ ಹಾಸ್ಟೆಲ್ ರಸ್ತೆಯಲ್ಲಿರುವ ನ್ಯಾಯಬೆಲೆ ಅಂಗಡಿಯ ಮಾಲೀಕರು ಅಕ್ರಮವಾಗಿ ಬಡವರಿಗೆ ನೀಡಬೇಕಾಗಿದ್ದ ಸರ್ಕಾರದ ಉಚಿತ ಪಡಿತರ ಸುಮಾರು ಏಳು ಕ್ವಿಂಟಾಲ್ 50 ಕೆಜಿ ಅಕ್ಕಿಯನ್ನು ಕದ್ದು ಆಟೋದಲ್ಲಿ ಅಕ್ರಮವಾಗಿ ಸಾಗಿಸುವಾಗ ಸಾರ್ವಜನಿಕರು ಶಿವಮೊಗ್ಗ ರಸ್ತೆಯ ಖಾಸಗಿ ರೈಸ್ ಮಿಲ್ ನ ಆವರಣದಲ್ಲಿ ತಡೆಹಿಡಿದು ನಿಲ್ಲಿಸಿದ ಪ್ರಸಂಗ ಇಂದು ಮಧ್ಯಾಹ್ನ ನಡೆದಿದೆ.
ಇಂದು ಮದ್ಯಾಹ್ನ ಖಾಸಗಿ ಆಟೋ ಗೆ 25 ಕೆಜಿ ಪ್ರಮಾಣದಲ್ಲಿ 30 ಚೀಲ ಪಡಿತರ ಅಕ್ಕಿಯನ್ನು ತುಂಬುತ್ತಿರುವುದನ್ನು ಗಮನಿಸಿದ ವಿನಾಯಕ ನಗರದ ರಾಘವೇಂದ್ರ ಬಾಳಿಗ ಎಂಬುವವರು ಎಲ್ಲಾ ಸಾರ್ವಜನಿಕರ ಗಮನಕ್ಕೆ ತಂದಿದ್ದಾರೆ.ನಂತರ ಆಟೋವನ್ನು ಹಿಂಬಾಲಿಸಿ ಶಿವಮೊಗ್ಗ ರಸ್ತೆಯ ಖಾಸಗಿ ರೈಸ್ ಮಿಲ್ ನಲ್ಲಿ ಇಳಿಸುತ್ತಿರುವ ಸಂಧರ್ಭದಲ್ಲಿ ಮಾಜಿ ಗ್ರಾಪಂ ಸದಸ್ಯ ನಾಗೇಂದ್ರ , ವಿಶ್ವನಾಥ್ ಹಾಗೂ ಇನ್ನಿತರ ಸಾರ್ವಜನಿಕರೊಂದಿಗೆ ತೆರಳಿ ತಡೆ ಹಿಡಿದು ಸಂಬಂಧ ಪಟ್ಟವರಿಗೆ ಮಾಹಿತಿ ನೀಡಿದ್ದಾರೆ.
ನಂತರ ಸ್ಥಳಕ್ಕಾಗಮಿಸಿದ ಗ್ರಾಪಂ ಸದಸ್ಯ ಸುಂದರೇಶ್ ,ಅಶ್ವಿನಿ ರವಿಶಂಕರ್ ಸ್ಥಳವನ್ನು ಪರಿಶೀಲಿಸಿ ಅಧಿಕಾರಿಗಳಿಗೆ ಮಾಹಿತಿ ಮುಟ್ಟಿಸಿದರು.
ಸದರಿ ನ್ಯಾಯಬೆಲೆ ಅಂಗಡಿಯ ಮಾಲೀಕ ಬಡವರ ಪಾಲಿನ ಅಕ್ಕಿಗಳನ್ನು ರೈಸ್ ಮಿಲ್ ಗಳಲ್ಲಿ ಪಾಲಿಶ್ ಮಾಡಿಸಿ ಅದನ್ನು ಬ್ರಾಂಡೆಡ್ ಚೀಲಗಳಲ್ಲಿ ತುಂಬಿ ಸಾವಿರಾರು ರೂಪಾಯಿಗಳಿಗೆ ಅಂಗಡಿಗಳಿಗೆ ಮಾರಾಟ ಮಾಡಿ ಅಧಿಕ ಲಾಭ ಮಾಡುತ್ತಿರುವುದು ಈ ಮಾಲೀಕರಿಗೆ ಹೊಸತೇನಲ್ಲ. ಈ ತರಹದ ಅಕ್ರಮ ದಂಧೆಗಳು ಬಹಳಷ್ಟಿದೆ ಎಂದು ರಾಘವೇಂದ್ರ ಬಾಳಿಗ ದೂರಿದ್ದಾರೆ.
ನಂತರ ಅಧಿಕಾರಿಗಳಿಗೆ ದೂರು ಸಲ್ಲಿಸಿ ಆಟೋ ಹಾಗೂ ಅಕ್ಕಿಯನ್ನು ಅಧಿಕಾರಿಗಳು ವಶಪಡಿಸಿಕೊಂಡು ದೂರು ದಾಖಲಿಸಿದ್ದಾರೆ.
ಘಟನಾಸ್ಥಳಕ್ಕೆ ಹೊಸನಗರ ಆಹಾರ ನಿರೀಕ್ಷಕ ಬಾಲಚಂದ್ರ ಪೊಲೀಸ್ ಅಧಿಕಾರಿಗಳು ಕಂದಾಯ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
ಇದೇ ಸಂದರ್ಭದಲ್ಲಿ ಬಡವರ ಹೊಟ್ಟೆಯ ಮೇಲೆ ಬರೆ ಎಳೆಯುವ ಇಂತಹ ಹಲವು ಭ್ರಷ್ಟರಿಗೆ ಶಿಕ್ಷೆ ಆಗದಿದ್ದಲ್ಲಿ ಉಗ್ರ ಪ್ರತಿಭಟನೆ ಮಾಡುವುದು ಅನಿವಾರ್ಯ ಎಂದು ಸಾರ್ವಜನಿಕರು ಎಚ್ಚರಿಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್