Breaking
12 Jan 2026, Mon

ರಿಪ್ಪನ್ ಪೇಟೆಯಲ್ಲಿ ಹಾಡಹಗಲೇ ಮಹಿಳೆಯ ಸರಗಳ್ಳತನ :

ರಿಪ್ಪನ್‌ಪೇಟೆ : ಪಟ್ಟಣದ ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಬಳಿ ಜನನಿಬಿಡ ಪ್ರದೇಶದಲ್ಲಿಯೋ ಮಹಿಳೆಯೊಬ್ಬರ ಚಿನ್ನದ ಮಾಂಗಲ್ಯ  ಸರವನ್ನು ಇಬ್ಬರು ಯುವಕರು ಕಸಿದುಕೊಂಡು ಹೋಗಿರುವ ಘಟನೆ ನಡೆದಿದೆ.


ಪಟ್ಟಣದ ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಬಳಿ ಸಣ್ಣ ದಿನಸಿ ಅಂಗಡಿ ಇಟ್ಟುಕೊಂಡಿರುವ ಜಯಮ್ಮ ಎಂಬುವವರು  ಸರ ಕಳೆದು ಕೊಂಡವರು.

ನಡೆದಿದ್ದೇನು ???

ಇಂದು ಸಂಜೆ 4.30 ರ ಸಮಯ ಜಯಮ್ಮ ರವರು ತಮ್ಮ ಮೈಲಾರಲಿಂಗೇಶ್ವರ ಜನರಲ್ ಸ್ಟೋರ್ ನಲ್ಲಿ ಒಬ್ಬರೇ ಇದ್ದಾಗ ಕೆಟಿಎಂ ಡ್ಯೂಕ್ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ನೀರನ್ನು ಕೇಳಿದ್ದಾರೆ ಜಯಮ್ಮರವರು ನೀರುಕೊಡುತ್ತಿದ್ದಂತೆ ಏಕಾಏಕಿ ದಾಳಿ ಮಾಡಿದ ಯುವಕ ಕುತ್ತಿಗೆಗೆ ಕೈ ಹಾಕಿ ಸರವನ್ನು ಎಳೆದು ಕ್ಷಣಮಾತ್ರದಲ್ಲಿ ಪರಾರಿಯಾಗಿದ್ದಾರೆ.  ಈ ಸಂದರ್ಭದಲ್ಲಿ ಗಾಬರಿಗೊಳಗಾಗದೆ ಜೋರಾಗಿ ಕೂಗಿಕೊಂಡ ಹಿನ್ನೆಲೆಯಲ್ಲಿ ಅಕ್ಕಪಕ್ಕದವರನ್ನು ಸೇರಿದ್ದಾರೆ ಅಷ್ಟರಲ್ಲಾಗಲೇ ಕೆಟಿಎಂ ಡ್ಯೂಕ್ ಬೈಕ್ ನಲ್ಲಿ ಬಂದಿದ್ದ ಯುವಕರು ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ಸುಮಾರು ಅರುವತ್ತು ಸಾವಿರ ರೂ ಮೌಲ್ಯದ 12 ಗ್ರಾಂ ಚಿನ್ನದ ಸರ ಕಳೆದುಕೊಂಡಿದ್ದೇನೆ ಎಂದು ಜಯಮ್ಮ ತಮ್ಮ ಅಳಲನ್ನು ತೊಡಿಕೊಳ್ಳುತ್ತಿದ್ದಾರೆ.ಕುತ್ತಿಗೆಗೆ  ಕೈ ಹಾಕಿ ಎಳೆದ ರಭಸಕ್ಕೆ ಮಾಂಗಲ್ಯಸರ ಎರಡು ತುಂಡಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಕಾರ್ಯಪ್ರವೃತ್ತರಾಗಿದ್ದು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ

ಇತ್ತೀಚೆಗೆ ಸಾಗರದಲ್ಲಿ ಶಿಕ್ಷಕಿಯ ಸರ ಅಪಹರಣ ಮಾಡಿರುವ ಘಟನೆ ಮಾಸುವ ಮುನ್ನವೇ ಈ ಘಟನೆ ನಡೆದಿದ್ದು ಮಲೆನಾಡಿಗರಲ್ಲಿ ಆತಂಕ ಸೃಷ್ಟಿಸಿದೆ.


ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇👇👇


About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Leave a Reply

Your email address will not be published. Required fields are marked *

Exit mobile version