ರಿಪ್ಪನ್ ಪೇಟೆ : ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯದಿಂದ ಕೆದಲುಗುಡ್ಡೆ ಗ್ರಾಮದಲ್ಲಿ ಜಾನುವಾರುಗಳು ಸಾವನ್ನಪ್ಪುತ್ತಿದ್ದು ಮೆಸ್ಕಾಂ ಇಲಾಖೆ ಅಧಿಕಾರಿಗಳು ಜಾಣ ಕುರುಡುತನ ತೋರಿಸುತ್ತಿದ್ದಾರೆ ಎಂದು ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷರಾದ ರವೀಂದ್ರ ಕೆರೆಹಳ್ಳಿ ಆರೋಪಿಸಿದ್ದಾರೆ
ಕೆದಲು ಗುಡ್ಡೆಯ ಗಣೇಶ್ ಎಂಬುವವರಿಗೆ ಸೇರಿದ ಹಸುವೊಂದು ಮೊನ್ನೆ ಕೆದಲು ಗುಡ್ಡೆ ಗ್ರಾಮದಲ್ಲಿ ಅಳವಡಿಸಿರುವ ಟ್ರಾನ್ಸ್ ಫರ್ಮ್ ಶಾರ್ಟ್ ಸರ್ಕ್ಯೂಟ್ ಆಗಿ ಅರ್ಥಿಂಗ್ ಆಗಿರುವುದರಿಂದ ಮೃತಪಟ್ಟಿದೆ.ಈ ಬಗ್ಗೆ ಮೆಸ್ಕಾಂ ಇಲಾಖೆಯ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿರುವುದಿಲ್ಲ.
ರೈತರು ಕಷ್ಟಪಟ್ಟು ಸಾಕಿ ಸಲುಹಿದ ಗೋವುಗಳು ಈ ರೀತಿಯಾಗಿ ಸಾವನ್ನಪ್ಪುತ್ತಿರುವುದು ಖೇದಕರ ಸಂಗತಿಯಾಗಿದೆ ಮೆಸ್ಕಾಂ ಇಲಾಖೆಯ ಸಿಬ್ಬಂದಿಗಳು ಹಾಗೂ ಅಧಿಕಾರಿಗಳು ಕೇವಲ ಬಿಲ್ ಬಾಕಿ ವಸೂಲಾತಿ ಮತ್ತು ಸಂಬಳ ಹೊರತುಪಡಿಸಿ ಸಿಗುವ ಲಾಭದಾಯಕವಾದ ಜಂಗಲ್ ಕಟ್ಟಿಂಗ್ ಗೆ ಮೀಸಲಾಗಿದ್ದರೆಯೇ ಹೊರತು ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಇನ್ನೊಂದು ವಾರದಲ್ಲಿ ಕೆದಲುಗುಡ್ಡೆ ಗ್ರಾಮದ ಟ್ರಾನ್ಸ್ ಫಾರ್ಮರ್ ಸಮಸ್ಯೆಯನ್ನು ಬಗೆಹರಿಸದಿದ್ದರೆ ರಿಪ್ಪನ್ ಪೇಟೆ ಮೆಸ್ಕಾಂ ಇಲಾಖೆಯ ಎದುರು ಉಗ್ರವಾದ ಹೋರಾಟ ನಡೆಸಲಾಗುವುದೆಂದು ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದರು.
ಮಾಹಿತಿ ನೀಡಿದರೂ ಸ್ಪಂದಿಸಿದ ಮೆಸ್ಕಾಂ ಇಲಾಖೆ :
ಕಳೆದೆರಡು ತಿಂಗಳಲ್ಲಿ ಈ ಟ್ರಾನ್ಸ್ ಫಾರ್ಮರ್ ಸುತ್ತಮುತ್ತ ಜಾನುವಾರುಗಳು ಸಾವನ್ನಪ್ಪುತ್ತಿದ್ದು ಈ ಬಗ್ಗೆ ರಿಪ್ಪನ್ ಪೇಟೆಯ ಮೆಸ್ಕಾಂ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರೆ ಅವರು ಯಾವುದೇ ಕ್ರಮ ಕೈಗೊಳ್ಳದೆ ದಿವ್ಯ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಕೆದಲುಗುಡ್ಡೆ ಗ್ರಾಮಸ್ಥರಾದ ಗಣೇಶ್ ಆರೋಪಿಸಿದ್ದಾರೆ.
ನರಬಲಿಗೆ ಕಾಯುತ್ತಿದೆಯೋ ಮೆಸ್ಕಾಂ ಇಲಾಖೆ :
ಒಟ್ಟಾರೆಯಾಗಿ ಗೋವುಗಳನ್ನು ಕಷ್ಟಪಟ್ಟು ಸಾಕುವಂತಹ ರೈತರ ಶಾಪ ಜಡ್ಡುಗಟ್ಟಿರುವ ಮೆಸ್ಕಾಂ ಅಧಿಕಾರಿಗಳಿಗೆ ತಟ್ಟದೇ ಬಿಡುವುದಿಲ್ಲ.ಇಂತಹ ಸ್ಥಳಗಳಲಿ ಮನುಷ್ಯರ ಹೆಣ ಬೀಳುವವರೆಗೂ ಬಿಳಿಯಾನೆಯಂತಹ ಅಧಿಕಾರಿಗಳು ಎಚ್ಚೆತ್ತುಕೊಳ್ಳುವುದಿಲ್ಲ..
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್