ರಾಜ್ಯ ರಾಜಕೀಯದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ಹೋರಾಟ, ಜನಸೇವೆ ಮೂಲಕ ಇಡೀ ಕ್ಷೇತ್ರದ ಮನೆ ಮಾತಾಗಿರುವ ರಾಜಕಾರಣಿ.
ಇಂದು ಹರತಾಳು ಹಾಲಪ್ಪ ರವರ ಜನ್ಮ ದಿನದ ಪ್ರಯುಕ್ತ,
ಕೆರೆಹಳ್ಳಿ ಹೋಬಳಿಯ ಬಿಜೆಪಿ ಮಹಾಶಕ್ತಿ ಕೇಂದ್ರ ವತಿಯಿಂದ ರಿಪ್ಪನಪೇಟೆಯ ಇತಿಹಾಸ ಪ್ರಸಿದ್ದ ಶ್ರೀ ಸಿದ್ದೀವಿನಾಯಕ ದೇವಸ್ಥಾದಲ್ಲಿ ವಿಶೇಷ ಪೂಜೆ ಸಲ್ಲಿಸಿ,ಶಾಸಕರಿಗೆ ಉತ್ತಮ ಆರೋಗ್ಯ, ದೀರ್ಘಯುಷ್ಯ, ಉನ್ನತ ಅಧಿಕಾರ ಹಾಗೂ ಸಾರ್ವಜನಿಕ ಸೇವೆ ಮಾಡಲು ಹೆಚ್ಚಿನ ಅವಕಾಶಗಳು ಲಭಿಸಲೆಂದು ಪ್ರಾರ್ಥಿಸಲಾಯಿತು.
ಈ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್ ಬಡವರು, ನಿರ್ಗತಿಕರು, ದೀನದಲಿತರ ಸೇವೆ ಮಾಡುವ ಯಾವುದೇ ವ್ಯಕ್ತಿಗೆ ಸಮಾಜ ಸೇವೆಯೊಂದಿಗೆ ರಾಜಕೀಯ ಇಚ್ಛಾಶಕ್ತಿ ಇದ್ದಲ್ಲಿ ಎಂತಹ ಅಡೆತಡೆಗಳನ್ನಾದರೂ ಮೆಟ್ಟಿ ನಿಂತು ಸಾಧಿಸಬಲ್ಲರು ಎಂಬುದಕ್ಕೆ ರಾಜ್ಯ ರಾಜಕೀಯದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಹರತಾಳು ಹಾಲಪ್ಪ ಸಾಕ್ಷಿಯಾಗಿದ್ದಾರೆ ಎಂದರು.
ಈ ಸಂಧರ್ಭದಲ್ಲಿ ಬಿಜೆಪಿ ಜಿಲ್ಲಾ ಮುಖಂಡರಾದ ಆರ್ ಟಿ ಗೋಪಾಲ್, ಎ ಟಿ ನಾಗರತ್ನಮ್ಮ, ಶಾಸಕರ ಆಪ್ತ ಸಹಾಯಕರಾದ ಕೀರ್ತಿ ಗೌಡ, ಮಂಜುಳಾ ಕೇತಾರ್ಜಿ ರಾವ್, ಮಹಾಲಕ್ಷ್ಮಿ ಅಣ್ಣಪ್ಪ, ಸುಂದರೇಶ್, ಸುರೇಶ್ ಸಿಂಗ್, ಸುದಿಂದ್ರ ಪೂಜಾರಿ, ನಾಗರತ್ನ ದೇವರಾಜ್, ಹೂವಪ್ಪ, ವಿನೋದಮ್ಮ, ತಾ.ಮ ನರಸಿಂಹ, ಮಲ್ಲಿಕಾರ್ಜುನ ಜಿ.ಡಿ, ದೇವೇಂದ್ರಪ್ಪ ಗೌಡ, ದೀಪಾ ಸುಧೀರ್, ದಾನಮ್ಮ, ಉಮಾ ಸುರೇಶ್, ಲಕ್ಸ್ಮಿ ಶ್ರೀನಿವಾಸ್, ಸೀತಮ್ಮ, ನಾಗೇಶ್, ಈಶ್ವರ್ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್