ಶಿವಮೊಗ್ಗದ ಮಾರಿ ಜಾತ್ರೆಯಲ್ಲಿ ಮುಸ್ಲಿಮರಿಗೆ ವ್ಯಾಪಾರ ಬೇಡ ಎಂದ ಬಿಜೆಪಿ ಯವರು ನಗರದ ಸಿಟಿ ಮಾಲ್​ನಲ್ಲಿ ಮುಸ್ಲಿಂ ಉದ್ಯಮಿಯ ಫನ್​-ಗೇಮ್​ ಉದ್ಘಾಟಿಸುತ್ತಾರೆ : ಯಮುನಾ ರಂಗೇಗೌಡ

ಶಿವಮೊಗ್ಗ : ನಾಗರಿಕರಿಗೆ ಉತ್ತಮ ಆಡಳಿತ ಕೊಡಲು ಸಾಧ್ಯವಿಲ್ಲದಿದ್ದರೂ ನಾಗರಿಕರ ಹಿತಕಾಯುವಲ್ಲಿ ವಿಫಲರಾದರೂ ನಕಲಿ ಹಿಂದುತ್ವದ ಘೋಷಣೆ ಕೂಗುತ್ತಾ ಬಡ ಮುಸ್ಲಿಂ ವ್ಯಾಪಾರಿಗಳನ್ನು ದ್ವೇಷ ಮಾಡಿ, ಅವರ ದಿನನಿತ್ಯದ ಕೂಲಿಯನ್ನು ಕಿತ್ತುಕೊಂಡು ಕಾರ್ಪೊರೇಟ್ ಬಂಡವಾಳಶಾಹಿ ಮುಸ್ಲಿಮರೊಂದಿಗೆ ಕೈಜೋಡಿಸುತ್ತಿರುವ ನಕಲಿ ಹಿಂದುತ್ವವಾದಿಗಳು ಈ ಬಿಜೆಪಿ ಯವರು ಎಂದು ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿಯಾದ ಯಮುನಾ ರಂಗೇಗೌಡ ವಾಗ್ದಾಳಿ ನಡೆಸಿದ್ದಾರೆ.

ಕಳೆದವಾರ ನಡೆದ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವದಲ್ಲಿ ಯಾವುದೇ ಮುಸ್ಲಿಮರಿಗೆ ವ್ಯಾಪಾರ ಕೊಡಬಾರದೆಂದು ರೋಷಾವೇಷ ತೋರಿದ್ದ ಬಿಜೆಪಿ ನಾಯಕರುಗಳು ಇಂದು ಶಿವಮೊಗ್ಗದ ಬ್ಯಾರೀಸ್ ಸಿಟಿ ಸೆಂಟರ್ ಮಾಲ್ ನಲ್ಲಿ ದಕ್ಷಿಣಕನ್ನಡದ ಮುಸ್ಲಿಂ ಉದ್ಯಮಿಯಾಗಿರುವ ಸಿದ್ದಿಕ್ ಬ್ಯಾರಿರವರಿಂದ ನಿರ್ಮಾಣಗೊಂಡಿರುವ ಬಿಫನ್ ಇಂಡೋರ್ ಗೇಮ್ ಉದ್ಘಾಟನೆಯಲ್ಲಿ ಪಾಲ್ಗೊಂಡಿರುವುದು ಇವರ ಒಂದು ನಾಟಕೀಯ ಹಿಂದುತ್ವಕ್ಕೆ ಸಾಕ್ಷಿಯಾಗಿದೆ.

ಭಾರತವು ಒಂದು ಜಾತ್ಯತೀತ ರಾಷ್ಟ್ರವಾಗಿದ್ದು ಎಲ್ಲ ಧರ್ಮ ಜನಾಂಗದವರು ಸಮನ್ವಯತೆಯಿಂದ ಇದುವರೆಗೂ ಬದುಕುತ್ತಿದ್ದು ಆಡಳಿತ ಪಕ್ಷವಾದ ಬಿಜೆಪಿಯು ಜನರಿಗೆ ಯಾವುದೇ ಉತ್ತಮ ಆಡಳಿತ ಕೂಡಲು ವಿಫಲರಾಗಿದ್ದಾರೆ.

ಈ ನಿಟ್ಟಿನಲ್ಲಿ ಕೇವಲ ಮುಂದಿನ ವರ್ಷದ ಚುನಾವಣೆ ತಯಾರಿಗೋಸ್ಕರ ಜನರ ಭಾವೈಕ್ಯತೆಯನ್ನು ಹಾಳುಮಾಡಿ ಜನಗಳ ಮಧ್ಯೆ ಕೋಮುದ್ವೇಷವನ್ನು ಹಾಕುತ್ತಿರುವುದು ಅತ್ಯಂತ ಖಂಡನೀಯವಾಗಿದೆ.

ಕೇವಲ 33 ವರ್ಷಕ್ಕೆ ಲೀಸ್ ಗೆ ಪಡೆದಿರುವ ಇದೇ ಬ್ಯಾರೀಸ್ ಸಿಟಿ ಸೆಂಟರ್ ಮಾಲ್ ಅನ್ನು ಅವರಿಗೆ 99 ವರ್ಷ ಲೀಸ್ ಗೆ ಕೊಡಲು (ಬಹುತೇಕ ಮಾರಾಟ ಮಾಡಲು) ಹೊರಟಿದ್ದು ಇದೇ ಹಿಂದುತ್ವದ ಮೇಲೆ ಮತ ಕೇಳುವಂತಹ ಬಿಜೆಪಿ ಆಡಳಿತ ಪಕ್ಷ ಎನ್ನುವ ವಿಷಯವನ್ನು ನಾಗರಿಕರು ಮರೆಯಬಾರದು.

ಹಾಗಾದರೆ ಇವರ ಹಿಂದುತ್ವ ಕೇವಲ ಬಡ ಬೀದಿ ಬದಿಯ ವ್ಯಾಪಾರಿಗಳ ಮೇಲೆ ಮಾತ್ರವೇ ಏಕೆ ದೊಡ್ಡ ದೊಡ್ಡ ಬಂಡವಾಳಶಾಹಿಗಳ ತಮ್ಮ ಲಾಭಕ್ಕಾಗಿ ಕೈ ಜೋಡಿಸುವಾಗ ಹಿಂದುತ್ವ ಮಾಯವಾಗುತ್ತದೆ. ಜನ ಸಾಮಾನ್ಯರು ಸಾಕಷ್ಟು ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದಾರೆ.

ಆದ್ದರಿಂದ ಈ ನಕಲಿ ಹಿಂದುತ್ವದ ವನ್ನು ಬಿಟ್ಟು ಸಂಕಷ್ಟದಲ್ಲಿರುವ ಜನತೆಗೆ ಉತ್ತಮ ಆಡಳಿತ ಕೊಡುವ ಬಗ್ಗೆ ಗಮನಹರಿಸಿಬೇಕಾಗಿ ಎಚ್ಚರಿಕೆ ನೀಡುತ್ತಿದ್ದೇವೆ.

ಭಾರತ ಒಂದು ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಈ ರೀತಿ ಕೋಮುಗಲಭೆಯಿಂದ ಸಾಮಾನ್ಯ ನಾಗರಿಕರಿಗೆ ಪ್ರತಿನಿತ್ಯ ತೊಂದರೆ ಉಂಟಾಗುತ್ತಿದ್ದು ಜನರು ಶಾಂತಿ ಸಮನ್ವಯತೆಯಿಂದ ಜೀವನ ನಡೆಸುವ ನಿಟ್ಟಿನಲ್ಲಿ ಎಲ್ಲರು ಕೈಜೋಡಿಸಬೇಕಾಗಿದೆ.

ಪ್ರಸ್ತುತ ನಮ್ಮ ದೇಶದಲ್ಲಿ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ತೆರಿಗೆ ದರ ಪೆಟ್ರೋಲ್ ದರ ದಿನನಿತ್ಯ ಬಳಕೆ ಮಾಡುವ ಸಾಮಗ್ರಿಗಳ ದರ ಕುಡಿಯುವ ನೀರಿನ ಸಮಸ್ಯೆ ನಿರುದ್ಯೋಗದ ಸಮಸ್ಯೆ ರೈತರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಆಡಳಿತವಕ್ತ ಕಾರ್ಯಪ್ರವೃತ್ತರಾಗಬೇಕು. ಈ ರೀತಿ ತಮ್ಮ ಆಡಳಿತ ವೈಫಲ್ಯವನ್ನು ಮರೆಮಾಚಲು ಕೋಮುಗಲಭೆ ಮಾಡುವುದನ್ನು ನಿಲ್ಲಿಸಬೇಕೆಂದು ಈ ಮೂಲಕ ಎಚ್ಚರಿಸುತ್ತಿದ್ದೇವೆ ಎಂದಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

3 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

5 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

5 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

15 hours ago

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

22 hours ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

24 hours ago