ಸಾಗರ ಗ್ರಾಮಾಂತರ ಪೊಲೀಸರ ಮಿಂಚಿನ ಕಾರ್ಯಾಚರಣೆ : ಲಾರಿ ಕದ್ದು ಪರಾರಿಯಾದವರು 10 ದಿನಗಳಲ್ಲೇ ಅರೆಸ್ಟ್…!

ಸಾಗರ: ಅಂದಾಜು 7.50 ಲಕ್ಷ ಮೌಲ್ಯದ ಲಾರಿಯನ್ನು ಕದ್ದು ಪರಾರಿಯಾಗಿದ್ದ ವ್ಯಕ್ತಿಯನ್ನು ಪೊಲೀಸರು ಪ್ರಕರಣ ದಾಖಲಾದ ಹತ್ತೇ ದಿನಗಳಲ್ಲಿ ಪತ್ತೆ ಹಚ್ಚಲು ಯಶಸ್ವಿಯಾಗಿದ್ದಾರೆ.

ದಾವಣಗೆರೆ ಜಿಲ್ಲೆಯ ನ್ಯಾಮತಿ ನಿವಾಸಿ ಬಿ.ಕೆ.ಕರಿಬಸಪ್ಪ ಅಲಿಯಾಸ್ ಕರಿಯ(32) ಎಂಬಾತನೇ  ಬಂಧಿತ ಆರೋಪಿ. ಈತನ ಬಳಿಯಿಂದ ಕದ್ದಿದ್ದ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ.

ಘಟನೆ ವಿವರ:

ಆನಂದಪುರ ದಾಸಕೊಪ್ಪ ಗ್ರಾಮದ ವಾಸಿಯೊಬ್ಬರ ಲಾರಿಯನ್ನು ಮಾರ್ಚ್ 3ರಂದು ರಾತ್ರಿ ಹೊತ್ತಲ್ಲಿ ಕಳ್ಳತನ ಮಾಡಲಾಗಿತ್ತು. ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಸಾಗರ ಗ್ರಾಮಾಂತರ ಠಾಣೆಯ ವೇರಿ ಸ್ಮಾರ್ಟ್ ಆಂಡ್ ಇಂಟಲಿಜೆಂಟ್  ಪಿಐ ಮತ್ತು ಸಿಬ್ಬಂದಿ ತಂಡವು ತನಿಖೆ ಕೈಗೊಂಡು ಆರೋಪಿಯನ್ನು ಬಂಧಿಸಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಲಾರಿ ಕಳ್ಳತನ ಪ್ರಕರಣ ದಾಖಲಾಗಿದ್ದು ಮಾಲು ಮತ್ತು ಆರೋಪಿ ಪತ್ತೆಗಾಗಿ ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಶ್ರೀ ಲಕ್ಷ್ಮೀ ಪ್ರಸಾದ್ ಐ.ಪಿ.ಎಸ್  ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀಯುತ ವಿಕ್ರಮ್ ಅಮಟೆ. ರವರ ಮಾರ್ಗದರ್ಶದಲ್ಲಿ ಸಹಾಯಕ ಪೊಲೀಸ ಅಧೀಕ್ಷಕರು, ಸಾಗರ ಉಪವಿಭಾಗದ ಶ್ರೀಯುತ ರೋಷನ್ ರವರ ಸೂಚನೆಯಂತೆ ಒಂದು ವಿಶೇಷ ಪೊಲೀಸ್ ತಂಡವನ್ನು ರಚಿಸಿ, ಸಾಗರ ಗ್ರಾಮಾಂತರ  ಠಾಣಾ ಪೊಲೀಸ್ ಇನ್ಸ್‌ಪೆಕ್ಟರ್,ಶ್ರಿ ಬಿ. ಸಿ ಗಿರೀಶ್ ರವರ ನೇತೃತ್ವದಲ್ಲಿ. ಪೊಲೀಸ್ ಸಿಬ್ಬಂಧಿಗಳಾದ ಎಎಸ್‌ಐ  ಸಿದ್ದರಾಮಪ್ಪ, ಸನಾವುಲ್ಲಾ . ತಾರಾನಾಥ ,ಅಶೋಕ್. ರವಿಕುಮಾರ್. ಈರಯ್ಯ ಮಠಪತಿ,  ಪ್ರವೀಣ್ ಕುಮಾರ್, ಪ್ರಕಾಶ್ ಅಂಬ್ಲಿ.  ಗಿರೀಶ್ ರವರು ಪ್ರಕರಣದ ಆರೋಪಿಯಾದ ಕರಿಬಸಪ್ಪ ಬಿ.ಕೆ ಕರಿಯಾ ತಂದೆ ಲೇಟ್ ಸಂಜೀವಪ್ಪ, 32 ವರ್ಷ, 3 ನೇ ಕ್ರಾಸ್, ವಿನೋಬ ನಗರ ನ್ಯಾಮತಿ ತಾಲ್ಲೂಕ್ ದಾವಣಗೆರೆ ಜಿಲ್ಲೆ ಎಂಬಾತನನ್ನು ದಿನಾಂಕ:- 11-03-2022 ರಂದು ಸಾಗರ ತಾಲ್ಲೂಕ್ ತ್ಯಾಗರ್ತಿ ಗ್ರಾಮದಲ್ಲಿ ವಶಕ್ಕೆ ಪಡೆದು ದಸ್ತಗಿರಿ ಮಾಡಿ ಸಾಗರ ಗ್ರಾಮಾಂತರ ಠಾಣೆಯ ಅಪರಾಧ ಸಂಖ್ಯೆ 105/2022 ಕಲಂ 379 ಐಪಿಸಿ ಕೇಸಿನಲ್ಲಿ ಕಳ್ಳತನ ವಾಗಿದ್ದ, 7,50,000/- ರೂ ಬೆಲೆಯ ಕೆಎ-16-ಬಿ-5442 ನೇ ಟಾಟಾ ಲಾರಿಯನ್ನು ಅಮಾನತ್ತು ಪಡಿಸಿಕೊಂಡಿದ್ದಾರೆ. ಪೊಲೀಸರ ಮಿಂಚಿನ ಕಾರ್ಯಾಚರಣೆ ನಡೆಸಿ ಆರೋಪಿ ಮತ್ತು ಮಾಲು ಪತ್ತೆ ಕಾರ್ಯದಲ್ಲಿ ಪಾಲ್ಗೊಂಡ ಪೊಲೀಸ್ ಸಿಬ್ಬಂದಿಗಳಿಗೆ ಸಾರ್ವಜನಿಕರಿಂದ  ಪ್ರಶಂಸೆ ವ್ಯಕ್ತವಾಗಿದೆ. ಅಷ್ಟೇ ಅಲ್ಲದೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ  ಸಿಬ್ಬಂದಿಗಳಿಗೆ ಮಾನ್ಯ ಪೊಲೀಸ್ ಅದೀಕ್ಷಕರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.



ಮಾಹಿತಿ : ಮಲೆನಾಡ ರಹಸ್ಯ


ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

10 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

10 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

12 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

1 day ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

1 day ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

2 days ago