ಸಿಗಂದೂರು ಕ್ಷೇತ್ರದ ಧರ್ಮಾಧಿಕಾರಿ ಡಾ.ಎಸ್ ರಾಮಪ್ಪ ರವರಿಗೆ ತರಳಿ ಶ್ರೀ ಪ್ರಶಸ್ತಿ :

ಮಲೆನಾಡಿನ ಹೆಸರಾಂತ ಶಕ್ತಿ ಕೇಂದ್ರವಾದ ಶ್ರೀ ಕ್ಷೇತ್ರ
ಸಿಗಂದೂರು ದೇವಸ್ಥಾನದ ಧರ್ಮಾಧಿಕಾರಿ ಡಾ ಎಸ್ ರಾಮಪ್ಪನವರಿಗೆ ತರಳಿ ಶ್ರೀ ಪ್ರಶಸ್ತಿ ಪ್ರಧಾನ ಮಾಡಲಾಯಿತು.


ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ತರಳಿ ಮಠದಿಂದ ಕಳೆದ ಹಲವು ದಶಕಗಳಿಂದ ರಾಮಪ್ಪನವರ ಸಾಮಾಜಿಕ,ಸಾಂಸ್ಕ್ರತಿಕ, ಧಾರ್ಮಿಕ ಕ್ಷೇತ್ರದಲ್ಲಿನ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ.

ಕಾರ್ತಿಕೇಯ ಮಠದ ಯೋಗೆಂದ್ರ ಶ್ರೀಗಳ ಸಮ್ಮುಖದಲ್ಲಿ ರಾಮಪ್ಪ ನವರು ಪ್ರಶಸ್ತಿ ಪಡೆದರು.


ಶಕ್ತಿ ಕೇಂದ್ರ ಸಿಗಂದೂರಿನ ಹಿನ್ನಲೆ ::

ಕರ್ನಾಟಕದಲ್ಲಿ ಬಹಳ ಪ್ರಸಿದ್ಧಿ ಪಡೆದು ಕೊಂಡಿರುವ ಶ್ರೀ ಸಿಗಂದೂರು ಚೌಡೇಶ್ವರಿ ತಾಯಿಯ ದೇವಸ್ಥಾನದ ಹಾಗೂ ಅಲ್ಲಿನ ಮಹಿಮೆಯ ಬಗ್ಗೆ ಕಿರು ಪರಿಚಯವನ್ನು ಇಲ್ಲಿ ಇಂದು ನಾವು ನಿಮಗೆ ನೀಡುತ್ತೇವೆ. ಶ್ರೀ ಸಿಗಂದೂರು ಚೌಡೇಶ್ವರಿ ತಾಯಿಯ ತನ್ನನ್ನು ನಂಬಿ ಬರುವ ಎಲ್ಲಾ ಭಕ್ತರ ಕೈಹಿಡಿದು ಎಲ್ಲಾ ರೀತಿಯ ಬೇಡಿಕೆಗಳನ್ನು ಈಡೇರಿಸಿದ್ದಾಳೆ. ಕರ್ನಾಟಕ ರಾಜ್ಯದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಶರಾವತಿ ನದಿಯ ಹಿನ್ನೀರಿನ ಪ್ರದೇಶದಲ್ಲಿ ಸಿಗಂದೂರಿನ ಕಾನನದಲ್ಲಿ ಕುಳಿತು ದೇಶದ ಮೂಲೆ ಮೂಲೆಯಿಂದ ಭಕ್ತರನ್ನು ತನ್ನಲ್ಲಿಗೆ ಕರೆಸಿಕೊಳ್ಳುವ ಶ್ರೀ ಸಿಗಂದೂರು ಚೌಡೇಶ್ವರಿ ತಾಯಿಯ ಕ್ಷೇತ್ರ ಎರಡು ದಶಕಗಳ ಹಿಂದೆ ಈ ರೀತಿ ಇರಲಿಲ್ಲ. ಎರಡು ದಶಕಗಳ ಹಿಂದಿನ ಪುಟಗಳನ್ನು ನಾವು ತೆಗೆದು ನೋಡಿದರೆ ಸಿಗಂದೂರು ಎಂಬ ಪ್ರದೇಶ ಒಂದು ಸಾಮಾನ್ಯ ಗ್ರಾಮವಾಗಿತ್ತು, ಅದೇ ಗ್ರಾಮ ಇದೀಗ ಜಗನ್ಮಾತೆಯ ಉಪಸ್ಥಿತಿಯಿಂದಾಗಿ ಪುಣ್ಯಕ್ಷೇತ್ರವಾಗಿ ಮಾರ್ಪಟ್ಟಿದೆ. ಲಕ್ಷಾಂತರ ಜನರು ಪ್ರತಿವರ್ಷ ತಮ್ಮ ಬೇಡಿಕೆಗಳನ್ನು ಹೊತ್ತುಕೊಂಡು ತಾಯಿಯ ಬಳಿ ಬರುತ್ತಾರೆ. 25 ವರ್ಷಗಳ ಹಿಂದೆ ಸಾಮಾನ್ಯ ಗ್ರಾಮವಾಗಿದ್ದ ಸಿಗಂದೂರು ಇದೀಗ ದಿವ್ಯ ಕ್ಷೇತ್ರವಾಗಿ ಮಾರ್ಪಟ್ಟು ನಮ್ಮ ಕಣ್ಣಮುಂದೆಯೇ ಬೆಳೆದು ಕಣ್ಣಿನ ಅಂದಾಜಿಗೂ ಸಿಗದಷ್ಟು ದೊಡ್ಡದಾಗಿ ಬೆಳೆದು ಬಿಟ್ಟಿದೆ.

ಇಪ್ಪತ್ತೈದು ವರ್ಷಗಳ ಹಿಂದಿನ ಪುಟಗಳನ್ನು ನಾವು ತೆಗೆದು ನೋಡಿದರೆ ಶರಾವತಿ ನದಿಯ ಹಿನ್ನೀರಿನ ಪ್ರದೇಶದಲ್ಲಿ ಗೊಂಡಾರಣ್ಯದ ಗುಹೆಯೊಂದರಲ್ಲಿ ನೆಲೆಸಿದ್ದರು, ಅಂದಿನ ಕಾಲದಲ್ಲಿ ತಾಯಿಯ ದರ್ಶನ ಪಡೆಯಲು ಕೇವಲ ಒಂದು ಸೀಮಿತವಾದ ಭಕ್ತವೃಂದ ತೆರಳುತ್ತಿತ್ತು. ಹೌದು, ಕೆಲವು ವರ್ಷಗಳ ಹಿಂದೆ ದೇವಸ್ಥಾನದ ಧರ್ಮದರ್ಶಿಗಳ ಆಗಿರುವ ರಾಮಪ್ಪ ಹಾಗೂ ಪ್ರಧಾನ ಅರ್ಚಕ ಆಗಿರುವ ಶೇಷಗಿರಿ ರವರಿಗೆ ಪ್ರೇರಣೆ ನೀಡುವ ಮೂಲಕ ಸಿಗಂದೂರು ಕ್ಷೇತ್ರ ಒಂದು ಮಹಾನ್ ಕ್ಷೇತ್ರವಾಗಿ ಮಾರ್ಪಟ್ಟಿದೆ. ಆ ಪ್ರೇರಣೆಯ ಫಲಶ್ರುತಿ ಇಂದು ನಮ್ಮ ಕಣ್ಣಮುಂದೆ ಕಾಣುತ್ತಿದೆ. ಇನ್ನು ಈ ದೇವಸ್ಥಾನದ ಹಿನ್ನೆಲೆಯನ್ನು ನಾವು ಹೇಳಬೇಕೆಂದರೆ ಶೇಷಪ್ಪ ಎಂಬುವವರು ಇಲ್ಲಿನ ಕಾಡು ಪ್ರದೇಶದಲ್ಲಿ ಒಂದು ದಿನ ದಾರಿ ತಪ್ಪಿ ರುತ್ತಾರೆ, ಇಡೀ ಕಾಡಿನಲ್ಲಿ ಅಲೆದಾಡಿ ದಾರಿ ಕಾಣದೇ ಸುಸ್ತಾಗಿ ವಿಶ್ರಮಿಸಲು ಮರದ ಕೆಳಗಡೆ ಕುಳಿತು ನಿದ್ದೆ ಮಾಡುವ ಸಂದರ್ಭದಲ್ಲಿ ಅವರ ಕನಸಿನಲ್ಲಿ ಚೌಡೇಶ್ವರಿ ತಾಯಿಯ ಪ್ರತ್ಯಕ್ಷರಾಗಿ ದೇವಾಲಯ ನಿರ್ಮಿಸುವಂತೆ ಹಾಗೂ ಅಲ್ಲಿರುವ ವಿಗ್ರಹದ ಕುರಿತು ಅವರಿಗೆ ಸಂಪೂರ್ಣ ಮಾಹಿತಿ ನೀಡುತ್ತಾರೆ. ಕನಸು ಎಂದು ಸುಮ್ಮನಾಗದ ಶೇಷಪ್ಪ ರವರು ತಾಯಿ ಹೇಳಿದ ಮಾತುಗಳಂತೆ ನದಿಯಲ್ಲಿ ವಿಗ್ರಹಗಳನ್ನು ಹುಡುಕಲು ಆರಂಭಿಸಿ ಕೊನೆಗೆ ಹುಡುಕಿ ತನ್ನ ಊರಿನ ಬ್ರಾಹ್ಮಣ ಪುರೋಹಿತ ದುಗ್ಗಜ್ಜ ಅವರೊಂದಿಗೆ ಸೇರಿಕೊಂಡು ದೇವಿಯನ್ನು ಪ್ರತಿಷ್ಠಾಪಿಸಿ ದೇವಾಲಯ ನಿರ್ಮಾಣ ಮಾಡುತ್ತಾರೆ.

ಇನ್ನು ಈ ಕ್ಷೇತ್ರದಲ್ಲಿ ಬಹಳ ಒಂದು ವಿಶಿಷ್ಟವಾದ ಆಚರಣೆ ಇದೆ, ಅದು ಏನೆಂದರೆ ಇಲ್ಲಿನ ಜನರು ತಮ್ಮ ತಮ್ಮ ಜಮೀನು, ಮನೆ ಹಾಗೂ ಇನ್ನಿತರ ಯಾವುದೇ ವಸ್ತುಗಳಿಗೆ ಚೌಡೇಶ್ವರಿ ದೇವಿಯ ಕಾವಲು ಇದೆ ಎಂದು ಬೋರ್ಡುಗಳನ್ನು ಹಾಕಿರುತ್ತಾರೆ, ಇದನ್ನು ನೀವು ಕೂಡ ಗಮನಿಸಿರಬಹುದು. ಶ್ರೀ ಕ್ಷೇತ್ರದ ಸುತ್ತಮುತ್ತಲಿನ ಪ್ರದೇಶಗಳಿಗೆ ನೀವು ತೆರಳಿದರೆ ಈ ರೀತಿಯ ಹಲವಾರು ಬೋರ್ಡುಗಳನ್ನು ನೀವು ಕಾಣುತ್ತೀರಿ, ಈ ಬೋರ್ಡ್ ಗಳ ವಿಶೇಷವೇನೆಂದರೆ ಈ ರೀತಿ ಬೋರ್ಡ್ ಹಾಕಿದರೇ ಯಾವುದೇ ಕಳ್ಳರಿಂದ ಯಾವುದೇ ರೀತಿಯ ತೊಂದರೆ ಇಲ್ಲ ಎಂದು ಇಲ್ಲಿನ ಜನ ನಂಬುತ್ತಾರೆ. ಒಟ್ಟಿನಲ್ಲಿ ಪ್ರತಿಯೊಬ್ಬರೂ ಭೇಟಿ ನೀಡಬೇಕಾಗಿರುವ ಈ ಕ್ಷೇತ್ರ ಶಿವಮೊಗ್ಗ ಜಿಲ್ಲೆಯ ಶರಾವತಿ ನದಿಯ ಹಿನ್ನೀರಿನಲ್ಲಿ ಇದೆ ಒಮ್ಮೆ ಭೇಟಿ ಕೊಟ್ಟು ತಾಯಿ ಆಶೀರ್ವಾದ ಪಡೆದುಕೊಳ್ಳಿ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…

16 hours ago

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…

16 hours ago

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…

16 hours ago

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್ ಕತ್ತರಿಸಬೇಕೋ?

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…

19 hours ago

ಈದ್ ಮಿಲಾದ್ ಹಬ್ಬ ಶಾಂತಿಯುತ ಆಚರಣೆಗೆ ಪೊಲೀಸ್ ಸೂಚನೆ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ

ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…

23 hours ago

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…

23 hours ago